AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ ಎನ್ನುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ
Cucumber Side Effects
ಪ್ರೀತಿ ಭಟ್​, ಗುಣವಂತೆ
|

Updated on: Dec 15, 2025 | 7:45 PM

Share

ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಇದನ್ನು ಹೆಚ್ಚಾಗಿ ಸಲಾಡ್, ರೈತಾ ಅಥವಾ ಜ್ಯೂಸ್ ರೂಪದಲ್ಲಿ ಸೇವನೆ ಮಾಡಲಾಗುತ್ತದೆ. ಇದರಲ್ಲಿ 95% ನೀರು ಇರುವುದರಿಂದ, ಇದು ನಿರ್ಜಲೀಕರಣ, ತೂಕ ಇಳಿಕೆ ಮತ್ತು ಜೀರ್ಣಕ್ರಿಯೆಗೆ ಅದ್ಭುತವಾಗಿ ಕೆಲಸ ಮಾಡುತ್ತದೆ. ಜೊತೆಗೆ ಇವು ವಿಟಮಿನ್ ಕೆ (Vitamin K), ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ರೀತಿ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ. ಆಯುರ್ವೇದದ ಪ್ರಕಾರ, ಸೌತೆಕಾಯಿ ದೇಹವನ್ನು ತಂಪಾಗಿಸುವ ಗುಣವನ್ನು ಹೊಂದಿದ್ದು ಕೆಲವರಿಗೆ ಇದು ಒಳ್ಳೆಯದಲ್ಲ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಶೀತ -ಅಸ್ತಮಾ: ಸೌತೆಕಾಯಿ ದೇಹದಲ್ಲಿ ಕಫವನ್ನು ಹೆಚ್ಚಿಸುತ್ತದೆ. ಶೀತ, ಕೆಮ್ಮು, ಕಫ, ಸೈನಸ್ ಅಥವಾ ಮೂಗಿನ ದಟ್ಟಣೆ ಇರುವವರು ಸೌತೆಕಾಯಿ ಸೇವನೆ ಮಾಡುವುದನ್ನು ತಪ್ಪಿಸಬೇಕು. ಅದರಲ್ಲಿಯೂ ಚಳಿಗಾಲದಲ್ಲಿ, ಸೌತೆಕಾಯಿ ಸೇವನೆ ಇಂತಹ ಸಮಸ್ಯೆಗಳನ್ನು ಮತ್ತಷ್ಟು ಉಲ್ಬಣಗೊಳಿಸಬಹುದು.

ಕೀಲು ನೋವು: ಸೌತೆಕಾಯಿ ದೇಹ ತಂಪಾಗಿಸುವುದರಿಂದ ವಾತ ದೋಷವನ್ನು ಉಲ್ಬಣಗೊಳಿಸುತ್ತದೆ. ಕೀಲು ನೋವು ಅಥವಾ ದೇಹದಲ್ಲಿ ಊತದಿಂದ ಈಗಾಗಲೇ ಬಳಲುತ್ತಿರುವವರಲ್ಲಿ, ಈ ಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.

ಜೀರ್ಣಕ್ರಿಯೆ ಸಮಸ್ಯೆಗಳು: ಸೌತೆಕಾಯಿಯಲ್ಲಿ ನಾರಿನಂಶ ಹೆಚ್ಚಿದ್ದರೂ, ಸೂಕ್ಷ್ಮ ಜೀರ್ಣಾಂಗ ವ್ಯವಸ್ಥೆ ಇರುವವರಿಗೆ ಇದು ಸಮಸ್ಯೆಯಾಗಬಹುದು. ಇದರಲ್ಲಿರುವ ಕುಕುರ್ಬಿಟಾಸಿನ್ ಎಂಬ ಕಹಿ ಸಂಯುಕ್ತವು ಅನಿಲ, ಉಬ್ಬುವುದು ಅಥವಾ ಅಜೀರ್ಣದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಮೂತ್ರ ಸಂಬಂಧಿ ಸಮಸ್ಯೆಗಳು: ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಇದು ನೈಸರ್ಗಿಕವಾಗಿ ಮೂತ್ರದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಆದರೆ ಮೂತ್ರದ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಸಮಸ್ಯೆಯನ್ನು ಮತ್ತಷ್ಟು ಹದಗೆಡಿಸಬಹುದು.

ಇದನ್ನೂ ಓದಿ: ಹೃದಯವನ್ನು ಆರೋಗ್ಯವಾಗಿಟ್ಟುಕೊಂಡು ತೂಕ ಕಡಿಮೆ ಮಾಡಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಮಧುಮೇಹ: ಸೌತೆಕಾಯಿ ಮಧುಮೇಹ ಇರುವವರಿಗೆ ಸುರಕ್ಷಿತ. ಆದರೆ ಇನ್ಸುಲಿನ್ ಅಥವಾ ಗ್ಲೂಕೋಸ್ ಕಡಿಮೆಗೊಳಿಸುವ ಔಷಧಿಗಳನ್ನು ತೆಗೆದುಕೊಳ್ಳುವವರಿಗೆ ಸೌತೆಕಾಯಿ ಸಮಸ್ಯೆಗಳನ್ನು ಉಂಟುಮಾಡಬಹುದು. ಕೆಲವರಲ್ಲಿ ನಡುಕ ಮತ್ತು ತಲೆತಿರುಗುವಿಕೆಗೆ ಕಾರಣವಾಗಬಹುದು.

ಅದರಲ್ಲಿಯೂ ಆರೋಗ್ಯ ತಜ್ಞರು ಸಾಮಾನ್ಯವಾಗಿ ಊಟ ಮಾಡಿದ ನಂತರ ಸೌತೆಕಾಯಿ ಸೇವನೆ ಮಾಡುವುದನ್ನು ತಪ್ಪಿಸಿ ಎನ್ನುತ್ತಾರೆ. ಏಕೆಂದರೆ ಇದು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಅಷ್ಟು ಮಾತ್ರವಲ್ಲ, ಇದರಲ್ಲಿರುವ ಹೆಚ್ಚಿನ ನೀರಿನ ಅಂಶವು ನಿದ್ರೆಗೆ ಅಡ್ಡಿಪಡಿಸಬಹುದು. ಹಾಗಾಗಿ ಸೌತೆಕಾಯಿಯ ಸೇವನೆ ಮಾಡುವ ಮೊದಲು ತಜ್ಞರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ