AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು

ಇತ್ತೀಚಿನ ದಿನಗಳಲ್ಲಿ ಸ್ಕ್ರೀನ್ ಟೈಮ್ ನಿರಂತರವಾಗಿ ಹೆಚ್ಚುತ್ತಿದೆ, ಇದು ಅನೇಕರಿಗೆ ತಲೆನೋವು, ಮೈಗ್ರೇನ್ ಸಮಸ್ಯೆ ಹೆಚ್ಚಿಳಕ್ಕೆ ಕಾರಣವಾಗುತ್ತಿದೆ. ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿಯನ್ನು ದೀರ್ಘಕಾಲ ನೋಡುವುದರಿಂದ ಕಣ್ಣುಗಳ ಮೇಲೆ ಒತ್ತಡ ಉಂಟಾಗುತ್ತದೆ. ಈ ಅಭ್ಯಾಸವು ಮೈಗ್ರೇನ್‌ಗೆ ಸಹ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಸ್ಕ್ರೀನ್ ಟೈಮ್ ಮತ್ತು ಮೈಗ್ರೇನ್ ನಡುವೆ ಸಂಬಂಧವಿದೆಯೇ, ಯಾರು ಹೆಚ್ಚು ಅಪಾಯದಲ್ಲಿದ್ದಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು
Screen Time And MigraineImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 27, 2026 | 6:02 PM

Share

ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ ಸ್ಕ್ರೀನ್ ಟೈಮ್ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕಣ್ಣು ಮತ್ತು ಮೆದುಳಿನ ಮೇಲೆ ಒತ್ತಡ ಹೆಚ್ಚಾಗಿ, ತಲೆನೋವು ಹಾಗೂ ಮೈಗ್ರೇನ್ (Migraine) ಸಮಸ್ಯೆಗಳು ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಂದ ದೊಡ್ಡವರ ವರೆಗೆ ಎಲ್ಲರೂ ಕೂಡ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಕೆಲವರು ಟೈಮ್ ಪಾಸ್ ಮಾಡಲು ಬಳಕೆ ಮಾಡುತ್ತಿದ್ದರೆ ಇನ್ನು ಕೆಲವರು ಕೆಲಸಕ್ಕಾಗಿ ಉಪಯೋಗ ಮಾಡುತ್ತಿದ್ದಾರೆ. ಕಾರಣ ಯಾವುದೇ ಇರಲಿ ಸ್ಕ್ರೀನ್ ಟೈಮ್ ಹೆಚ್ಚುತ್ತಿದ್ದು ಇದು ಮುಂದೆ ಮೈಗ್ರೇನ್ ಸಮಸ್ಯೆ ಹೆಚ್ಚಿಸಬಹುದಾಗಿದೆ. ಹಾಗಾದರೆ ಸ್ಕ್ರೀನ್ ಟೈಮ್ ಮತ್ತು ಮೈಗ್ರೇನ್ ನಡುವೆ ಸಂಬಂಧವಿದೆಯೇ, ಯಾರು ಹೆಚ್ಚು ಅಪಾಯದಲ್ಲಿದ್ದಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸ್ಕ್ರೀನ್ ಟೈಮ್ ಮತ್ತು ಮೈಗ್ರೇನ್ ನಡುವಿನ ಸಂಬಂಧ:

ತಜ್ಞರ ಪ್ರಕಾರ, ಹೆಚ್ಚು ಸಮಯ ಸ್ಕ್ರೀನ್ ಮುಂದೆ ಕಳೆದರೆ ಕಣ್ಣುಗಳಿಗೆ ನಿರಂತರ ಒತ್ತಡ ಬೀಳುತ್ತದೆ. ವಿಶೇಷವಾಗಿ ಸ್ಕ್ರೀನ್‌ನಿಂದ ಹೊರಬರುವ ಬ್ಲೂ ಲೈಟ್ ಕಣ್ಣುಗಳನ್ನು ಬೇಗನೆ ಆಯಾಸವಾಗುವಂತೆ ಮಾಡುತ್ತದೆ. ಇದರಿಂದ ಮೆದುಳಿಗೂ ಒತ್ತಡ ಹೆಚ್ಚಾಗಿ ಮೈಗ್ರೇನ್ ಟ್ರಿಗರ್ ಆಗುವ ಸಾಧ್ಯತೆ ಇದೆ. ಕೆಲವರಿಗೆ ಮೈಗ್ರೇನ್ ಆರಂಭಕ್ಕೂ ಮುನ್ನ ಕಣ್ಣಲ್ಲಿ ಮಿನುಗುವ ಬೆಳಕು, ತಲೆ ಭಾರವಾಗಿರುವ ಅನುಭವ ಹಾಗೂ ಬೆಳಕಿಗೆ ಕಣ್ಣು ಬಿಡಲು ಸಾಧ್ಯವಾಗದಿರಬಹುದು.

ಇದನ್ನೂ ಓದಿ: ಮೈಗ್ರೇನ್ ಇದ್ಯಾ? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ಯಾರು ಹೆಚ್ಚು ಅಪಾಯದಲ್ಲಿದ್ದಾರೆ?

ದಿನಪೂರ್ತಿ ಕಂಪ್ಯೂಟರ್ ಅಥವಾ ಮೊಬೈಲ್ ಬಳಕೆ ಮಾಡುವವರು ಮೈಗ್ರೇನ್ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ. ಈಗಿನ ಕಾಲದಲ್ಲಿ ಮಕ್ಕಳು ಮತ್ತು ಯುವಕರಲ್ಲಿ ಈ ಸಮಸ್ಯೆ ಹೆಚ್ಚುತ್ತಿರುವುದು ಗಮನಾರ್ಹ. ಈಗಾಗಲೇ ಮೈಗ್ರೇನ್ ಇರುವವರಿಗೆ ಹೆಚ್ಚು ಸ್ಕ್ರೀನ್ ಬಳಕೆ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಬಹುದು. ಜೊತೆಗೆ ಸ್ಕ್ರೀನ್‌ನ್ನು ಹೆಚ್ಚು ಸಮಯ ನೋಡಿದರೆ ಕಣ್ಣಿನ ಒಣತನ, ಉರಿ, ದಣಿವು ಮತ್ತು ನಿದ್ರೆ ಕೊರತೆ ಉಂಟಾಗಬಹುದು. ಈ ಎಲ್ಲಾ ಕಾರಣಗಳು ಸೇರಿ ತಲೆನೋವು ಮತ್ತು ಮೈಗ್ರೇನ್ ಸಮಸ್ಯೆಯನ್ನು ಹೆಚ್ಚಿಸಬಹುದು.

ಹೇಗೆ ತಡೆಗಟ್ಟಬೇಕು?

ತಜ್ಞರು ಸೂಚಿಸುವಂತೆ, ಸ್ಕ್ರೀನ್ ಬಳಕೆಯನ್ನು ನಿಯಂತ್ರಿಸುವುದು ಅತ್ಯಂತ ಮುಖ್ಯ. ಪ್ರತಿ 20-30 ನಿಮಿಷಕ್ಕೊಮ್ಮೆ ವಿರಾಮ ತೆಗೆದುಕೊಳ್ಳಬೇಕು. ಕಣ್ಣುಗಳಿಗೆ ವಿಶ್ರಾಂತಿ ನೀಡಲು ದೂರದ ವಸ್ತುಗಳನ್ನು ನೋಡಬೇಕು. ಸ್ಕ್ರೀನ್ ಬ್ರೈಟ್ನೆಸ್ ಸರಿಯಾಗಿರಬೇಕು ಮತ್ತು ಕತ್ತಲಲ್ಲಿ ಮೊಬೈಲ್ ಬಳಸುವುದನ್ನು ತಪ್ಪಿಸಬೇಕು. ಸರಿಯಾದ ನಿದ್ರೆ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮವು ಮೈಗ್ರೇನ್ ನಿಯಂತ್ರಣಕ್ಕೆ ಸಹಕಾರಿ. ದೇಹದ ಸೂಚನೆಗಳನ್ನು ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ವೈದ್ಯರ ಸಲಹೆ ಪಡೆಯುವುದು ಅಗತ್ಯ. ತಜ್ಞರ ಪ್ರಕಾರ, ಸ್ಕ್ರೀನ್ ಬಳಕೆಯನ್ನು ಸಮತೋಲನದಲ್ಲಿಡುವುದರಿಂದ ಮೈಗ್ರೇನ್ ಅಪಾಯವನ್ನು ಕಡಿಮೆ ಮಾಡಬಹುದು ಮತ್ತು ಒಟ್ಟು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!