AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?

ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 17, 2022 | 7:00 AM

Share

ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವೇ ಎಂಬುದು ಯಕ್ಷ ಪ್ರಶ್ನೆ ನಮ್ಮನ್ನು ಊಟ ಮಾಡುವಾಗಲೆಲ್ಲ ಕಾಡುತ್ತಡೆ. ಸಾಮಾನ್ಯವಾಗಿ ನಾವು ಅವಸರದಲ್ಲಿ ನೀರು ಕುಡಿಯುತ್ತೇವೆ. ಆದರೆ ಸಾಮಾನ್ಯವಾಗಿ, ಅನೇಕರು ತಿನ್ನುವಾಗ ನೀರು ಕುಡಿಯಬಾರದು ಮತ್ತು ತಿಂದ ನಂತರ ಕುಡಿಯಲು ಸಲಹೆ ನೀಡುತ್ತಾರೆ. ಆದರೆ ಈ ವಿಷಯದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ. ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಕೆಲವು ಆಯುರ್ವೇದ ತಜ್ಞರು ಊಟಕ್ಕೆ ಮೊದಲು ಮತ್ತು ನಂತರ ಕನಿಷ್ಠ ಅರ್ಧ ಗಂಟೆಯ ನಂತರ ನೀರು ಕುಡಿಯಲು ಸಲಹೆ ನೀಡುತ್ತಾರೆ. ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ಎಂಬ ಬಗ್ಗೆ ಈ ಲೇಖನದಲ್ಲಿ ನಾವು ತಿಳಿಯೋಣ.

ಊಟ ಮಾಡುವಾಗ ನೀರು ಕುಡಿಯಬಹುದು. ವಾಸ್ತವವಾಗಿ, ಪೌಷ್ಟಿಕತಜ್ಞರು ಯಾವುದೇ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದು ಎಂದು ಸೂಚಿಸುತ್ತಾರೆ. ಊಟದ ಮೊದಲು ಅಥವಾ ನಂತರ ನೀರು ಕುಡಿಯುವುದು ಜೀರ್ಣಕಾರಿ ಕಿಣ್ವಗಳನ್ನು ದುರ್ಬಲಗೊಳಿಸುತ್ತದೆ. ಜೀರ್ಣಕ್ರಿಯೆ ನಿಧಾನವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ತಜ್ಞರು ಹೇಳುತ್ತಾರೆ. ಊಟದ ಸಮಯದಲ್ಲಿ ನೀರು ಕುಡಿಯಬಹುದು ಎಂಬುದು ಸ್ಪಷ್ಟವಾಗಿದೆ.

ನಮ್ಮ ಆಹಾರದಲ್ಲಿ ಸಾಕಷ್ಟು ನೀರಿನ ಅಂಶ ಇರುತ್ತದೆ. ಭಾರತೀಯರು ನೀರನ್ನು ಹೊಂದಿರುವ ಸೂಪ್ ಮತ್ತು ಜ್ಯೂಸ್‌ಗಳಂತಹ ತೆಳುವಾದ ಆಹಾರವನ್ನು ಸೇವಿಸುತ್ತಾರೆ. ಸಲಾಡ್‌ಗಳನ್ನು ಸಹ ತಿನ್ನುತ್ತಾರೆ, ಇದರಲ್ಲಿ ನೀರಿನ ಅಂಶ ಕೂಡ ಇರುತ್ತದೆ. ತರಕಾರಿಗಳಲ್ಲಿ ನೀರು, ಮೊಸರು ಮತ್ತು ಮಜ್ಜಿಗೆಯಲ್ಲಿ ನೀರು ಇರುತ್ತದೆ. ಇದಲ್ಲದೆ, ಆಹಾರವನ್ನು ಜಗಿಯುವ ಮೂಲಕ ಉತ್ಪತ್ತಿಯಾಗುವ ಲಾಲಾರಸವು ನೀರನ್ನು ಹೊಂದಿರುತ್ತದೆ. ನಾವು ಸೇವಿಸುವ ಹೆಚ್ಚಿನ ಸಾಂಪ್ರದಾಯಿಕ ಆಹಾರವು ನೀರನ್ನು ಒಳಗೊಂಡಿರುತ್ತದೆ, ಇದು ಯಾವುದೇ ರೀತಿಯಲ್ಲಿ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ. ಹಾಗಾಗಿ ನೀರು ಕುಡಿಯದೇ ಇರುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ ಪೌಷ್ಟಿಕತಜ್ಞರು.

ಊಟದ ಜೊತೆ ನೀರು ಕುಡಿಯಬಾರದು ಎಂಬ ನಿಯಮವನ್ನು ಅನೇಕರು ಅನುಸರಿಸುತ್ತಾರೆ. ಕೆಲವರು ಒಂದು ಗಂಟೆ ಅಥವಾ 2 ಗಂಟೆಗಳ ಕಾಲ ಒಂದು ಹನಿ ನೀರು ಸಹ ಕುಡಿಯುವುದಿಲ್ಲ. ಆದರೆ ನಿರ್ಜಲೀಕರಣದ ಅಪಾಯ ಸಂಭವಿಸಬಹುದು ಎಂದು ತಜ್ಞರು ಹೇಳುತ್ತಾರೆ. ನಿರ್ಜಲೀಕರಣವು ದೀರ್ಘಕಾಲದ ಮಲಬದ್ಧತೆ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಈಗಾಗಲೇ ಸಾಬೀತಾಗಿದೆ. ಒಬ್ಬ ವ್ಯಕ್ತಿಯು ದಿನಕ್ಕೆ 3 ಅಥವಾ 4 ಲೀಟರ್ ನೀರನ್ನು ಕುಡಿಯಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?