AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?

ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಊಟದ ಮಧ್ಯೆ ಆಗಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ತಜ್ಞರ ಅಭಿಪ್ರಾಯ ಏನು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 17, 2022 | 7:00 AM

Share

ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವೇ ಎಂಬುದು ಯಕ್ಷ ಪ್ರಶ್ನೆ ನಮ್ಮನ್ನು ಊಟ ಮಾಡುವಾಗಲೆಲ್ಲ ಕಾಡುತ್ತಡೆ. ಸಾಮಾನ್ಯವಾಗಿ ನಾವು ಅವಸರದಲ್ಲಿ ನೀರು ಕುಡಿಯುತ್ತೇವೆ. ಆದರೆ ಸಾಮಾನ್ಯವಾಗಿ, ಅನೇಕರು ತಿನ್ನುವಾಗ ನೀರು ಕುಡಿಯಬಾರದು ಮತ್ತು ತಿಂದ ನಂತರ ಕುಡಿಯಲು ಸಲಹೆ ನೀಡುತ್ತಾರೆ. ಆದರೆ ಈ ವಿಷಯದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ. ಆಹಾರ ಸೇವಿಸುವಾಗ ಅಥವಾ ತಿಂದ ತಕ್ಷಣ ನೀರು ಕುಡಿಯುವುದು ಒಳ್ಳೆಯದಲ್ಲ ಎಂದು ಹಲವರು ಭಾವಿಸುತ್ತಾರೆ. ಆಹಾರವನ್ನು ಸೇವಿಸುವಾಗ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಕೆಲವು ಆಯುರ್ವೇದ ತಜ್ಞರು ಊಟಕ್ಕೆ ಮೊದಲು ಮತ್ತು ನಂತರ ಕನಿಷ್ಠ ಅರ್ಧ ಗಂಟೆಯ ನಂತರ ನೀರು ಕುಡಿಯಲು ಸಲಹೆ ನೀಡುತ್ತಾರೆ. ಊಟ ಮಾಡುವಾಗ ನೀರು ಕುಡಿಯಬೇಕಾ ಅಥವಾ ಬೇಡವಾ? ಎಂಬ ಬಗ್ಗೆ ಈ ಲೇಖನದಲ್ಲಿ ನಾವು ತಿಳಿಯೋಣ.

ಊಟ ಮಾಡುವಾಗ ನೀರು ಕುಡಿಯಬಹುದು. ವಾಸ್ತವವಾಗಿ, ಪೌಷ್ಟಿಕತಜ್ಞರು ಯಾವುದೇ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದು ಎಂದು ಸೂಚಿಸುತ್ತಾರೆ. ಊಟದ ಮೊದಲು ಅಥವಾ ನಂತರ ನೀರು ಕುಡಿಯುವುದು ಜೀರ್ಣಕಾರಿ ಕಿಣ್ವಗಳನ್ನು ದುರ್ಬಲಗೊಳಿಸುತ್ತದೆ. ಜೀರ್ಣಕ್ರಿಯೆ ನಿಧಾನವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ತಜ್ಞರು ಹೇಳುತ್ತಾರೆ. ಊಟದ ಸಮಯದಲ್ಲಿ ನೀರು ಕುಡಿಯಬಹುದು ಎಂಬುದು ಸ್ಪಷ್ಟವಾಗಿದೆ.

ನಮ್ಮ ಆಹಾರದಲ್ಲಿ ಸಾಕಷ್ಟು ನೀರಿನ ಅಂಶ ಇರುತ್ತದೆ. ಭಾರತೀಯರು ನೀರನ್ನು ಹೊಂದಿರುವ ಸೂಪ್ ಮತ್ತು ಜ್ಯೂಸ್‌ಗಳಂತಹ ತೆಳುವಾದ ಆಹಾರವನ್ನು ಸೇವಿಸುತ್ತಾರೆ. ಸಲಾಡ್‌ಗಳನ್ನು ಸಹ ತಿನ್ನುತ್ತಾರೆ, ಇದರಲ್ಲಿ ನೀರಿನ ಅಂಶ ಕೂಡ ಇರುತ್ತದೆ. ತರಕಾರಿಗಳಲ್ಲಿ ನೀರು, ಮೊಸರು ಮತ್ತು ಮಜ್ಜಿಗೆಯಲ್ಲಿ ನೀರು ಇರುತ್ತದೆ. ಇದಲ್ಲದೆ, ಆಹಾರವನ್ನು ಜಗಿಯುವ ಮೂಲಕ ಉತ್ಪತ್ತಿಯಾಗುವ ಲಾಲಾರಸವು ನೀರನ್ನು ಹೊಂದಿರುತ್ತದೆ. ನಾವು ಸೇವಿಸುವ ಹೆಚ್ಚಿನ ಸಾಂಪ್ರದಾಯಿಕ ಆಹಾರವು ನೀರನ್ನು ಒಳಗೊಂಡಿರುತ್ತದೆ, ಇದು ಯಾವುದೇ ರೀತಿಯಲ್ಲಿ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ. ಹಾಗಾಗಿ ನೀರು ಕುಡಿಯದೇ ಇರುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ ಪೌಷ್ಟಿಕತಜ್ಞರು.

ಊಟದ ಜೊತೆ ನೀರು ಕುಡಿಯಬಾರದು ಎಂಬ ನಿಯಮವನ್ನು ಅನೇಕರು ಅನುಸರಿಸುತ್ತಾರೆ. ಕೆಲವರು ಒಂದು ಗಂಟೆ ಅಥವಾ 2 ಗಂಟೆಗಳ ಕಾಲ ಒಂದು ಹನಿ ನೀರು ಸಹ ಕುಡಿಯುವುದಿಲ್ಲ. ಆದರೆ ನಿರ್ಜಲೀಕರಣದ ಅಪಾಯ ಸಂಭವಿಸಬಹುದು ಎಂದು ತಜ್ಞರು ಹೇಳುತ್ತಾರೆ. ನಿರ್ಜಲೀಕರಣವು ದೀರ್ಘಕಾಲದ ಮಲಬದ್ಧತೆ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಈಗಾಗಲೇ ಸಾಬೀತಾಗಿದೆ. ಒಬ್ಬ ವ್ಯಕ್ತಿಯು ದಿನಕ್ಕೆ 3 ಅಥವಾ 4 ಲೀಟರ್ ನೀರನ್ನು ಕುಡಿಯಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ