ನೀವು ಬೆಳಗ್ಗೆ ಎದ್ದ ತಕ್ಷಣ ಚಹಾ ಕುಡಿತೀರಾ? ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಚಹಾವನ್ನು ಅತಿಯಾಗಿ ಸೇವಿಸುವುದರಿಂದಲೂ ಕೆಲವು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ನೀವು ಚಹಾ ಪ್ರಿಯರಾಗಿದ್ದರೆ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

ನೀವು ಬೆಳಗ್ಗೆ ಎದ್ದ ತಕ್ಷಣ ಚಹಾ ಕುಡಿತೀರಾ? ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
ಚಹಾ
Follow us
| Updated By: shruti hegde

Updated on:Nov 28, 2021 | 11:51 AM

ಕೆಲವರಿಗೆ ಚಹಾ ಇಲ್ಲದೇ ಬೆಳಗ್ಗಿನ ದಿನಚರಿ ಅಪೂರ್ಣವಾಗಿದೆ. ಬಿಸಿಬಿಸಿ ಚಹಾವನ್ನು ಸುರ್.. ಎಂದು ಕುಡಿದರೆ ಸಣ್ಣಪುಟ್ಟ ತಲೆನೋವಿನ ಸಮಸ್ಯೆಗಳೆಲ್ಲವೂ ಮಾಯವಾಗುತ್ತದೆ. ಅಷ್ಟರ ಮಟ್ಟಿಗೆ ಕೆಲವರು ಚಹಾ ಕುಡಿಯುವುದಕ್ಕೆ ಹೊಂದಿಕೊಂಡಿರುತ್ತಾರೆ. ಏಕೆಂದರೆ ಇದು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ. ಜೊತೆಗೆ ದಿನವಿಡೀ ಚಟುವಟಿಕೆಯಿಂದ ಕೂಡಿರಲು ಸಹಾಯ ಮಾಡುತ್ತದೆ. ಹಾಗಿರುವಾಗ ಚಹಾ ಸೇವಿಸುವ ಸಮಯವನ್ನು ಸರಿಯಾಗಿ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಜೊತೆಗೆ ಚಹಾವನ್ನು ಅತಿಯಾಗಿ ಸೇವಿಸುವುದರಿಂದಲೂ ಕೆಲವು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ನೀವು ಚಹಾ ಪ್ರಿಯರಾಗಿದ್ದರೆ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

ನೀವು ಯಾವಾಗ ಚಹಾ ಸೇವಿಸಬೇಕು ಎಂಬುದು ಇಲ್ಲಿದೆ; *ನೀವು ಎದ್ದ ತಕ್ಷಣ ಮತ್ತು ಮಲಗಲು ಹೋಗುವ ಮುನ್ನ ಚಹಾ ಸೇವನೆಯನ್ನು ತಪ್ಪಿಸಿ *ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆಯು ಆರೋಗ್ಯಕರವಲ್ಲ. ಇದು ಪಿತ್ತ ರಸದ ಉತ್ಪತ್ತಿಯ ಮೇಲೆ ಪರಿಣಾಮವನ್ನು ಬೀರುತ್ತದೆ *ಚಹಾವು ಅಸಿಡಿಟಿ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು *ನೀವು ಖಾಲಿ ಹೊಟ್ಟೆಯಲ್ಲಿ ಸಹಾ ಸೇವಿಸಿದೆ ಹೊಟ್ಟೆಯಲ್ಲಿ ಹುಣ್ಣು ಬೆಳೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ *ಆಮ್ಲೀಯತೆಯನ್ನು ತಡೆಗಟ್ಟಲು ಲಘು, ತಿಂಡಿಯೊಂದಿಗೆ ಚಹಾವನ್ನು ಕುಡಿಯಿರಿ *ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಸ್ವತಂತ್ರ ರಾಡಿಕಲ್​ಗಳು ಮತ್ತು ಕ್ಯಾನ್ಸರ್​ಗೆ ಕಾರಣವಾಗುವ ಕೋಶಗಳು ಹುಟ್ಟಿಕೊಳ್ಳುವ ಸಾಧ್ಯತೆಗಳಿರುತ್ತವೆ *ಮಧ್ಯಾಹ್ನದ ಊಟದ ತಕ್ಷಣ ಚಹಾ ಕುಡಿಯುವುದು ಅಜೀರ್ಣಕ್ಕೆ ಕಾರಣವಾಗಬಹುದು *ನೀವು ದಿನಕ್ಕೆ ಎರಡು ಕಪ್​ಗಿಂತ ಹೆಚ್ಚಿನ ಚಹಾ ಕುಡಿಯಬಾರದು

ಚಹಾ ಸೇವಿಸುವ ಮೊದಲು ನೀವು ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಇದು ನಿಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಇದರಿಂದ ಉಂಟಾಗುವ ಪ್ರಯೋಜನಗಳು; *ಅಜೀರ್ಣ ಸಮಸ್ಯೆಯಿಂದ ಪರಿಹಾರ *ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ *ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಇದನ್ನೂ ಓದಿ:

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

Ginger Tea: ಪ್ರತಿದಿನ ಶುಂಠಿ ಚಹಾ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ?

Published On - 11:51 am, Sun, 28 November 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?