Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೂ ನನ್ನ ಕಾಲು ಅದೂ ನನ್ನ ಕಾಲು -ಎಂದು ಜಬರದಸ್ತು ಮಾಡ್ತಾ ಕಾಲಿನ ಮೇಲೆ ಕಾಲು ಹಾಕಿಕೊಳ್ಳುವ ಮುನ್ನ, ಅದರಿಂದಾಗುವ ಅಪಾಯಗಳ ಬಗ್ಗೆ ತಿಳಿಯಿರಿ

Health Tips: ಅಡ್ಡಗಾಲು ಹಾಕಿಕೊಂಡು ತಿಳಿತುಕೊಳ್ಳುವ ಶಾರೀರಿಕ ಭಂಗಿಯ ಅಡ್ಡ ಪರಿಣಾಮಗಳು ಅಪಾಯಕಾರಿ ಅಂತ ಗೊತ್ತಾದ್ರೆ ಇನ್ನೆಂದೂ ಆ ರೀತಿ ಮಾಡೋದಿಲ್ಲ..! ಆರೋಗ್ಯ ಸಲಹೆಗಳು ವಿವರ ಹೀಗಿದೆ.

ಇದೂ ನನ್ನ ಕಾಲು ಅದೂ ನನ್ನ ಕಾಲು -ಎಂದು ಜಬರದಸ್ತು ಮಾಡ್ತಾ ಕಾಲಿನ ಮೇಲೆ ಕಾಲು ಹಾಕಿಕೊಳ್ಳುವ ಮುನ್ನ, ಅದರಿಂದಾಗುವ ಅಪಾಯಗಳ ಬಗ್ಗೆ ತಿಳಿಯಿರಿ
ಕಾಲಿನ ಮೇಲೆ ಕಾಲು ಹಾಕಿಕೊಳ್ಳುವ ಮುನ್ನ, ಅದರಿಂದಾಗುವ ಅಪಾಯಗಳ ಬಗ್ಗೆ ತಿಳಿಯಿರಿ
Follow us
ಸಾಧು ಶ್ರೀನಾಥ್​
|

Updated on:Oct 07, 2023 | 8:17 PM

ಆರೋಗ್ಯ ಸಲಹೆಗಳು: ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳುವುದು ಬಹಳಷ್ಟು ಮಂದಿಗೆ ಆರಾಮದಾಯಕವಾಗಿರುತ್ತದೆ. ಸತತವಾಗಿ ಚೇರಿನ ಮೇಲೆ ಕುಳಿತವರಿಗೆ ಆ ಶಾರೀರಿಕ ಭಂಗಿ ಇನ್ನೂ ಸಮಾಧಾನ ತರುವ ಸಂಗತಿ. ಆದರೆ, ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾದರೆ ಈಗ ಅಡ್ಡ ಕಾಲಿನ ಮೇಲೆ ಕುಳಿತುಕೊಳ್ಳುವುದರಿಂದ ಉಂಟಾಗುವ ಅಸ್ವಸ್ಥತೆಯ ಬಗ್ಗೆ ತಿಳಿದುಕೊಳ್ಳೋಣ. ಕುಳಿತುಕೊಳ್ಳುವಾಗ ಮತ್ತು ನಿಂತಿರುವಾಗ, ಅನೇಕ ಜನರು ವಿಶ್ರಾಂತಿಗಾಗಿ ತಮ್ಮ ಕಾಲುಗಳನ್ನು ಒಂದರ ಮೆಲೆ ಮತ್ತೊಂದು ಹಾಕಿಕೊಂಡು ಆರಾಮವಾಗಿ ಕುಳಿತುಕೊಳ್ಳುತ್ತಾರೆ. ಅನೇಕರು ಮನೆಯಲ್ಲಿ ಮತ್ತು ಕಛೇರಿಗಳಲ್ಲಿ ಹೀಗೆಯೇ ಕುಳಿತುಕೊಳ್ಳುತ್ತಾರೆ. ಅದರಲ್ಲೂ ಮಹಿಳೆಯರು ಈ ರೀತಿ ಅಡ್ಡಗಾಲಿನಲ್ಲಿ ಕುಳಿತುಕೊಳ್ಳುವುದರಿಂದ ತುಂಬಾ ಆರಾಮದಾಯಕ ಅಂತಾ ಅಂದುಕೊಳ್ಳುತ್ತಾರೆ. ಆದರೆ, ಹಾಗೆ ಕುಳಿತುಕೊಳ್ಳುವುದರಿಂದ ದೇಹಕ್ಕೆ ತೊಂದರೆಯಾಗುತ್ತದೆ ಮತ್ತು ಇದು ಮಹಿಳೆಯರಿಗಿಂತ ಪುರುಷರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅಡ್ಡಗಾಲಿನಲ್ಲಿ ಕುಳಿತುಕೊಳ್ಳುವ ಅನಾನುಕೂಲಗಳು ಏನು ಎಂಬುದನ್ನು ನೋಡೋಣ.

ಅಡ್ಡಗಾಲಿನಲ್ಲಿ ಕುಳಿತುಕೊಳ್ಳುವುದರಿಂದ ಆಗುವ ಹಾನಿ..

1. ಕಾಲುಗಳ ಮೇಲೆ ಕುಳಿತುಕೊಳ್ಳುವ ಪುರುಷರಲ್ಲಿ ವೃಷಣದ ಉಷ್ಣತೆಯು ಹೆಚ್ಚಾಗುತ್ತದೆ. ಇದು ವೀರ್ಯಾಣುಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಸಂಶೋಧನೆಗಳು ತೋರಿಸಿವೆ.

2. ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ಮೂಳೆಗಳಿಗೆ ಹಾನಿ ಮಾಡುತ್ತದೆ. ಕೆಳ ಬೆನ್ನು ಮತ್ತು ಸೊಂಟದ ಮೇಲೆ ಅದು ಕೆಟ್ಟ ಪರಿಣಾಮ ಬೀರುತ್ತದೆ.

3. ಬೆನ್ನುಮೂಳೆಯಲ್ಲಿ ವಿಶೇಷವಾಗಿ ನೋವನ್ನು ಉಂಟುಮಾಡುತ್ತದೆ. ಮೇಲಾಗಿ.. ಸೊಂಟದ ತೂಕ ಕೂಡ ಬೇಗ ಬೇಗನೆ ಹೆಚ್ಚಾಗತೊಡಗುತ್ತದೆ. ಕಾಲು ಚಾಚಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಇದು ಜೀರ್ಣಕ್ರಿಯೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೊಟ್ಟೆ ಊತ ಮತ್ತು ಹೊಟ್ಟೆ ನೋವು ಕೂಡ ಹೆಚ್ಚಾಗುತ್ತದೆ.

4. ಅಡ್ಡಗಾಲಿನಲ್ಲಿ ಕುಳಿತುಕೊಳ್ಳುವುದರಿಂದ ದೇಹದಲ್ಲಿ ರಕ್ತ ಪರಿಚಲನೆಯು ದುರ್ಬಲಗೊಳ್ಳುತ್ತದೆ. ಇದು ನಿಮ್ಮ ಕಾಲುಗಳಲ್ಲಿ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ಕಾಲುಗಳಲ್ಲಿ ಊತವನ್ನು ಉಂಟುಮಾಡುತ್ತದೆ.

5. ಕಾಲುಗಳ ಮೇಲೆ ಕುಳಿತುಕೊಳ್ಳುವುದು ಸ್ನಾಯುವಿನ ಅಸಮತೋಲನವನ್ನು ಉಂಟುಮಾಡುತ್ತದೆ. ಈ ಕಾರಣದಿಂದಾಗಿ ಸೊಂಟ ಮತ್ತು ಸೊಂಟದ ಪ್ರದೇಶ ವಿರೂಪಗೊಳ್ಳುವ ಅಪಾಯವಿರುತ್ತದೆ. ಈ ಅಭ್ಯಾಸದಿಂದಾಗಿ ಅನೇಕರಿಗೆ ಕೆಳ ಬೆನ್ನು ನೋವು ಶುರುವಾಗುತ್ತದೆ.

6. ಕೆಲವು ಸಂದರ್ಭಗಳಲ್ಲಿ ಅಡ್ಡ ಕಾಲು ಹಾಕಿಕೊಂಡು ಕುಳಿತಾಗ ಕಾಲಿನ ಸೆಳೆತ ಉಂಟಾಗುತ್ತದೆ. ಪೆರೋನಿಯಲ್ ನರಗಳ ಮೇಲಿನ ಒತ್ತಡವು ಮರಗಟ್ಟುವಿಕೆಗೆ (ಜೋಮು) ಕಾರಣವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ವೈದ್ಯಕೀಯ ಆರೋಗ್ಯ ತಜ್ಞರು ವಿವಿಧ ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಿದ್ದಾರೆ. ಈ ಲೇಖನವು ಸಾರ್ವಜನಿಕ ಜಾಗೃತಿಗಾಗಿ ಮಾತ್ರ. ಯಾವುದೇ ಸಣ್ಣ ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೂ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ)

Published On - 5:44 pm, Sat, 30 September 23

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ