AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ

Jamun Fruit:ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ
ನೇರಳೆ ಹಣ್ಣು
TV9 Web
| Edited By: |

Updated on: May 19, 2022 | 9:10 AM

Share

ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

ಈ ಹಣ್ಣಿನ ರಸವನ್ನು ಕುಡಿಯವುದರಿಂದ ಕೆಮ್ಮು ಮತ್ತು ಉಬ್ಬಸವನ್ನು ನಿಯಂತ್ರಿಸಬಹುದು. ಹಾಗೆಯೇ ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

ನೇರಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೆಟ್ಟ ಉಸಿರಾಟದ ಸಮಸ್ಯೆಯನ್ನು ದೂರ ಮಾಡಬಹುದು. ಹಾಗೆಯೇ ಚರ್ಮದ ಉರಿ ಸಮಸ್ಯೆಗೆ ನೇರಳೆ ಹಣ್ಣಿನ ಪೇಸ್ಟ್​​ಗೆ ಸಾವಿಸಿ ಎಣ್ಣೆ ಮಿಶ್ರ ಮಾಡಿ ಉರಿ ಇರುವ ಜಾಗಕ್ಕೆ ಲೇಪನ ಮಾಡಿದ್ರೆ ಉರಿ ಶಮನವಾಗುತ್ತದೆ.

ಈ ಹಣ್ಣಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೀಷಿಯಂ, ಪ್ರೊಟೀನ್, ಐರನ್, ವಿಟಮಿನ್ ಸಿ,ಬಿ, ಗ್ಲುಕೋಸ್ ಸೇರಿದಂತೆ ಮೊದಲಾದ ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳಿವೆ. ಹೀಗಾಗಿ ಇದನ್ನು ತಿನ್ನುವುದರಿಂದ ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದು. ನಿಯಮಿತವಾಗಿ ನೇರಳೆ ಹಣ್ಣಿನ ಸೇವನೆಯಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಸಬಹುದು. ಈ ಹಣ್ಣಿನಲ್ಲಿ ಐರನ್ ಅಂಶ ಇರುವುದರಿಂದ ಇದು ರಕ್ತ ಶುದ್ಧ ಮಾಡುವಲ್ಲೂ ಪ್ರಮುಖ ಪಾತ್ರವಹಿಸುತ್ತದೆ.

ಮೊಡವೆ : ಹೆಚ್ಚಿನ ಪ್ರಮಾಣದಲ್ಲಿ ನೇರಳೆ ಹಣ್ಣು ತಿನ್ನುವುದರಿಂದ ಮುಖದ ಮೇಲೆ ಮೊಡವೆಗಳಿದ್ದರೆ ಖಂಡಿತವಾಗಿಯೂ ಈ ಹಣ್ಣಿನಿಂದ ಅಂತರ ಕಾಯ್ದುಕೊಳ್ಳಿ. ಇದು ಮೊಡವೆ ಸೇರಿದಂತೆ ಚರ್ಮದ ಸಮಸ್ಯೆಗಳು ಹೆಚ್ಚಾಗಬಹುದು.

ರಕ್ತದೊತ್ತಡ ಸಮಸ್ಯೆ : ರಕ್ತದೊತ್ತಡ ಕಡಿಮೆ ಮಾಡುವ ಸಲುವಾಗಿ ಈ ಹಣ್ಣನ್ನು ಅತಿಯಾಗಿ ತಿಂದರೆ ರಕ್ತದೊತ್ತಡ ತೀರಾ ಕಡಿಮೆಯಾಗಬಹುದು. ರಕ್ತದೊತ್ತಡ ಕಡಿಮೆಯಾದರೂ ಅದು ಆರೋಗ್ಯಕ್ಕೆ ಹಾನಿಕಾರಕ ಮಾತ್ರವಲ್ಲ ಪ್ರಾಣಕ್ಕೇ ಕುತ್ತು ತರಬಹುದು. ಅಧಿಕ ರಕ್ತದೊತ್ತಡ ರೋಗಿಗಳು ಈ ಹಣ್ಣನ್ನು ತಿಂದರೆ ಪ್ರಯೋಜನವಾಗುತ್ತದೆ ಎಂದು ಹೇಳಲಾಗುತ್ತದೆ. ನಿಮ್ಮ ದಿನನಿತ್ಯದ ಆಹಾರದಲ್ಲಿ ಈ ಹಣ್ಣನ್ನು ಸೇವಿಸುವ ಮೂಲಕ ರಕ್ತದೊತ್ತಡವನ್ನು ನೀವು ಸುಲಭವಾಗಿ ನಿಯಂತ್ರಿಸಬಹುದು.

ಮಲಬದ್ಧತೆ : ನೇರಳೆ ಹಣ್ಣು ಜಾಮೂನ್ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದರ ಅತಿಯಾದ ಸೇವನೆಯಿಂದ ಮಲಬದ್ಧತೆಯ ಸಮಸ್ಯೆ ಕಾಣಿಸಿಕೊಳ್ಳಬಹುದು.

ಇಲ್ಲಿ ನೀಡಲಾದ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ