Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ

Jamun Fruit:ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ
ನೇರಳೆ ಹಣ್ಣು
Follow us
| Updated By: ನಯನಾ ರಾಜೀವ್

Updated on: May 19, 2022 | 9:10 AM

ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

ಈ ಹಣ್ಣಿನ ರಸವನ್ನು ಕುಡಿಯವುದರಿಂದ ಕೆಮ್ಮು ಮತ್ತು ಉಬ್ಬಸವನ್ನು ನಿಯಂತ್ರಿಸಬಹುದು. ಹಾಗೆಯೇ ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

ನೇರಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೆಟ್ಟ ಉಸಿರಾಟದ ಸಮಸ್ಯೆಯನ್ನು ದೂರ ಮಾಡಬಹುದು. ಹಾಗೆಯೇ ಚರ್ಮದ ಉರಿ ಸಮಸ್ಯೆಗೆ ನೇರಳೆ ಹಣ್ಣಿನ ಪೇಸ್ಟ್​​ಗೆ ಸಾವಿಸಿ ಎಣ್ಣೆ ಮಿಶ್ರ ಮಾಡಿ ಉರಿ ಇರುವ ಜಾಗಕ್ಕೆ ಲೇಪನ ಮಾಡಿದ್ರೆ ಉರಿ ಶಮನವಾಗುತ್ತದೆ.

ಈ ಹಣ್ಣಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೀಷಿಯಂ, ಪ್ರೊಟೀನ್, ಐರನ್, ವಿಟಮಿನ್ ಸಿ,ಬಿ, ಗ್ಲುಕೋಸ್ ಸೇರಿದಂತೆ ಮೊದಲಾದ ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳಿವೆ. ಹೀಗಾಗಿ ಇದನ್ನು ತಿನ್ನುವುದರಿಂದ ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದು. ನಿಯಮಿತವಾಗಿ ನೇರಳೆ ಹಣ್ಣಿನ ಸೇವನೆಯಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಸಬಹುದು. ಈ ಹಣ್ಣಿನಲ್ಲಿ ಐರನ್ ಅಂಶ ಇರುವುದರಿಂದ ಇದು ರಕ್ತ ಶುದ್ಧ ಮಾಡುವಲ್ಲೂ ಪ್ರಮುಖ ಪಾತ್ರವಹಿಸುತ್ತದೆ.

ಮೊಡವೆ : ಹೆಚ್ಚಿನ ಪ್ರಮಾಣದಲ್ಲಿ ನೇರಳೆ ಹಣ್ಣು ತಿನ್ನುವುದರಿಂದ ಮುಖದ ಮೇಲೆ ಮೊಡವೆಗಳಿದ್ದರೆ ಖಂಡಿತವಾಗಿಯೂ ಈ ಹಣ್ಣಿನಿಂದ ಅಂತರ ಕಾಯ್ದುಕೊಳ್ಳಿ. ಇದು ಮೊಡವೆ ಸೇರಿದಂತೆ ಚರ್ಮದ ಸಮಸ್ಯೆಗಳು ಹೆಚ್ಚಾಗಬಹುದು.

ರಕ್ತದೊತ್ತಡ ಸಮಸ್ಯೆ : ರಕ್ತದೊತ್ತಡ ಕಡಿಮೆ ಮಾಡುವ ಸಲುವಾಗಿ ಈ ಹಣ್ಣನ್ನು ಅತಿಯಾಗಿ ತಿಂದರೆ ರಕ್ತದೊತ್ತಡ ತೀರಾ ಕಡಿಮೆಯಾಗಬಹುದು. ರಕ್ತದೊತ್ತಡ ಕಡಿಮೆಯಾದರೂ ಅದು ಆರೋಗ್ಯಕ್ಕೆ ಹಾನಿಕಾರಕ ಮಾತ್ರವಲ್ಲ ಪ್ರಾಣಕ್ಕೇ ಕುತ್ತು ತರಬಹುದು. ಅಧಿಕ ರಕ್ತದೊತ್ತಡ ರೋಗಿಗಳು ಈ ಹಣ್ಣನ್ನು ತಿಂದರೆ ಪ್ರಯೋಜನವಾಗುತ್ತದೆ ಎಂದು ಹೇಳಲಾಗುತ್ತದೆ. ನಿಮ್ಮ ದಿನನಿತ್ಯದ ಆಹಾರದಲ್ಲಿ ಈ ಹಣ್ಣನ್ನು ಸೇವಿಸುವ ಮೂಲಕ ರಕ್ತದೊತ್ತಡವನ್ನು ನೀವು ಸುಲಭವಾಗಿ ನಿಯಂತ್ರಿಸಬಹುದು.

ಮಲಬದ್ಧತೆ : ನೇರಳೆ ಹಣ್ಣು ಜಾಮೂನ್ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದರ ಅತಿಯಾದ ಸೇವನೆಯಿಂದ ಮಲಬದ್ಧತೆಯ ಸಮಸ್ಯೆ ಕಾಣಿಸಿಕೊಳ್ಳಬಹುದು.

ಇಲ್ಲಿ ನೀಡಲಾದ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ