AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ

Jamun Fruit:ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

Jamun Fruit:ಈ ಆರೋಗ್ಯ ಸಮಸ್ಯೆಯುಳ್ಳವರು ನೇರಳೆ ಹಣ್ಣು ತಿನ್ನಲೇಬೇಡಿ
ನೇರಳೆ ಹಣ್ಣು
TV9 Web
| Edited By: |

Updated on: May 19, 2022 | 9:10 AM

Share

ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಎಲ್ಲೆಡೆ ಸಿಗುವ ಹಣ್ಣುಗಳಲ್ಲಿ ನೇರಳೆ ಹಣ್ಣು( Jamun Fruit)  ಕೂಡ ಒಂದು. ನೇರಲೆ ಹಣ್ಣು ತನ್ನದೇ ಆದ ಮಾರುಕಟ್ಟೆ ಸೃಷ್ಟಿಸಿದೆ. ನಗರ ಪ್ರದೇಶದ ಮಾರ್ಕೆಟ್​​ಗಳಲ್ಲಿ ನೇರಲೆ ಹಣ್ಣುಗಳು ಸಿಗುತ್ತಿವೆ. ನೇರಳೆ ಹಣ್ಣಿನ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೂಳೆಗಳು ಬಲಗೊಳ್ಳುತ್ತವೆ.

ಈ ಹಣ್ಣಿನ ರಸವನ್ನು ಕುಡಿಯವುದರಿಂದ ಕೆಮ್ಮು ಮತ್ತು ಉಬ್ಬಸವನ್ನು ನಿಯಂತ್ರಿಸಬಹುದು. ಹಾಗೆಯೇ ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

ನೇರಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೆಟ್ಟ ಉಸಿರಾಟದ ಸಮಸ್ಯೆಯನ್ನು ದೂರ ಮಾಡಬಹುದು. ಹಾಗೆಯೇ ಚರ್ಮದ ಉರಿ ಸಮಸ್ಯೆಗೆ ನೇರಳೆ ಹಣ್ಣಿನ ಪೇಸ್ಟ್​​ಗೆ ಸಾವಿಸಿ ಎಣ್ಣೆ ಮಿಶ್ರ ಮಾಡಿ ಉರಿ ಇರುವ ಜಾಗಕ್ಕೆ ಲೇಪನ ಮಾಡಿದ್ರೆ ಉರಿ ಶಮನವಾಗುತ್ತದೆ.

ಈ ಹಣ್ಣಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೀಷಿಯಂ, ಪ್ರೊಟೀನ್, ಐರನ್, ವಿಟಮಿನ್ ಸಿ,ಬಿ, ಗ್ಲುಕೋಸ್ ಸೇರಿದಂತೆ ಮೊದಲಾದ ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳಿವೆ. ಹೀಗಾಗಿ ಇದನ್ನು ತಿನ್ನುವುದರಿಂದ ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದು. ನಿಯಮಿತವಾಗಿ ನೇರಳೆ ಹಣ್ಣಿನ ಸೇವನೆಯಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಸಬಹುದು. ಈ ಹಣ್ಣಿನಲ್ಲಿ ಐರನ್ ಅಂಶ ಇರುವುದರಿಂದ ಇದು ರಕ್ತ ಶುದ್ಧ ಮಾಡುವಲ್ಲೂ ಪ್ರಮುಖ ಪಾತ್ರವಹಿಸುತ್ತದೆ.

ಮೊಡವೆ : ಹೆಚ್ಚಿನ ಪ್ರಮಾಣದಲ್ಲಿ ನೇರಳೆ ಹಣ್ಣು ತಿನ್ನುವುದರಿಂದ ಮುಖದ ಮೇಲೆ ಮೊಡವೆಗಳಿದ್ದರೆ ಖಂಡಿತವಾಗಿಯೂ ಈ ಹಣ್ಣಿನಿಂದ ಅಂತರ ಕಾಯ್ದುಕೊಳ್ಳಿ. ಇದು ಮೊಡವೆ ಸೇರಿದಂತೆ ಚರ್ಮದ ಸಮಸ್ಯೆಗಳು ಹೆಚ್ಚಾಗಬಹುದು.

ರಕ್ತದೊತ್ತಡ ಸಮಸ್ಯೆ : ರಕ್ತದೊತ್ತಡ ಕಡಿಮೆ ಮಾಡುವ ಸಲುವಾಗಿ ಈ ಹಣ್ಣನ್ನು ಅತಿಯಾಗಿ ತಿಂದರೆ ರಕ್ತದೊತ್ತಡ ತೀರಾ ಕಡಿಮೆಯಾಗಬಹುದು. ರಕ್ತದೊತ್ತಡ ಕಡಿಮೆಯಾದರೂ ಅದು ಆರೋಗ್ಯಕ್ಕೆ ಹಾನಿಕಾರಕ ಮಾತ್ರವಲ್ಲ ಪ್ರಾಣಕ್ಕೇ ಕುತ್ತು ತರಬಹುದು. ಅಧಿಕ ರಕ್ತದೊತ್ತಡ ರೋಗಿಗಳು ಈ ಹಣ್ಣನ್ನು ತಿಂದರೆ ಪ್ರಯೋಜನವಾಗುತ್ತದೆ ಎಂದು ಹೇಳಲಾಗುತ್ತದೆ. ನಿಮ್ಮ ದಿನನಿತ್ಯದ ಆಹಾರದಲ್ಲಿ ಈ ಹಣ್ಣನ್ನು ಸೇವಿಸುವ ಮೂಲಕ ರಕ್ತದೊತ್ತಡವನ್ನು ನೀವು ಸುಲಭವಾಗಿ ನಿಯಂತ್ರಿಸಬಹುದು.

ಮಲಬದ್ಧತೆ : ನೇರಳೆ ಹಣ್ಣು ಜಾಮೂನ್ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದರ ಅತಿಯಾದ ಸೇವನೆಯಿಂದ ಮಲಬದ್ಧತೆಯ ಸಮಸ್ಯೆ ಕಾಣಿಸಿಕೊಳ್ಳಬಹುದು.

ಇಲ್ಲಿ ನೀಡಲಾದ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ