AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paracetamol Tablet : ಪ್ಯಾರಾಸಿಟಮಲ್ ಮಾತ್ರೆ ಸೇವಿಸುವ ಮುನ್ನ ಯೋಚಿಸಿ, ಇದು ಹೃದಯಕ್ಕೆ ಹಾನಿ: ಅಧ್ಯಯನ

ಆರೋಗ್ಯ ಸಮಸ್ಯೆಯೂ ಎದುರಾದಾಗ ಮೊದಲ ಆಯ್ಕೆಯೇ ಈ ಪ್ಯಾರಸಿಟಮಾಲ್ ಮಾತ್ರೆಯಾಗಿರುತ್ತದೆ. ಪ್ಯಾರಸಿಟಮಾಲ್ ಎನ್ನುವುದು ಅತ್ಯಂತ ಸುಲಭವಾಗಿ, ಕಡಿಮೆ ದರದಲ್ಲಿ ಸಿಗುವ ಹಾಗೂ ಸುರಕ್ಷಿತವಾದ ನೋವು ನಿವಾರಕ ಮಾತ್ರೆಯೆಂದು ಭಾವಿಸಲಾಗಿದೆ. ಆದರೆ ಕಡಿಮೆ ಡೋಸ್​​​ನ ಮಾತ್ರೆಯ ಸೇವನೆಯಿಂದಲೂ ಹೃದಯಕ್ಕೆ ಹಾನಿಯಾಗುತ್ತದೆ ಎಂದು ಸಂಶೋಧನೆಯಿಂದ ಬಹಿರಂಗವಾಗಿದೆ.

Paracetamol Tablet : ಪ್ಯಾರಾಸಿಟಮಲ್ ಮಾತ್ರೆ ಸೇವಿಸುವ ಮುನ್ನ ಯೋಚಿಸಿ, ಇದು ಹೃದಯಕ್ಕೆ ಹಾನಿ: ಅಧ್ಯಯನ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 15, 2024 | 4:02 PM

ಪ್ರತಿಯೊಬ್ಬರ ಮನೆಯಲ್ಲಿಯೂ ಈ ಪ್ಯಾರಾಸಿಟಮಾಲ್ ಮಾತ್ರೆಯೂ (Paracetamol Tablet) ಇದ್ದೆ ಇರುತ್ತದೆ. ಸ್ವಲ್ಪ ಮೈ ಬಿಸಿಯಾದರೂ, ಮೈ ಕೈ ನೋವು ಕಾಣಿಸಿಕೊಂಡರೂ, ಈ ಒಂದು ಪ್ಯಾರಸಿಟಮಾಲ್ ಮಾತ್ರೆ ತೆಗೆದುಕೊಂಡು ಮಲಗಿದರೆ ಎಲ್ಲಾ ಸಮಸ್ಯೆಯೂ ದೂರವಾಗುತ್ತದೆ. ಹೀಗಾಗಿ ವೈದ್ಯರನ್ನು ಭೇಟಿಯಾಗದೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗೆ ಪ್ಯಾರಸಿಟಮಾಲ್ ಮಾತ್ರೆ ತೆಗೆದುಕೊಳ್ಳುವುದರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಕಡಿಮೆ ಡೋಸ್ ನ ಪ್ಯಾರಸಿಟಮಾಲ್ ಮಾತ್ರೆಯೂ ಕೂಡ ನಿಮ್ಮ ಹೃದಯವನ್ನು ಹಾನಿಗೊಳಿಸುತ್ತದೆ ಎನ್ನುವ ಆಘಾತಕಾರಿ ವಿಚಾರವು ಸಂಶೋಧನೆಯಿಂದ ಬಹಿರಂಗವಾಗಿವೆ.

ಪ್ರಪಂಚದಾದ್ಯಂತದ ಸೂಪರ್ ಮಾರ್ಕೆಟ್ ಗಳಲ್ಲಿ ಲಭ್ಯವಿರುವ ಆಫ್-ದಿ-ಶೆಲ್ಫ್ ಔಷಧವು ಇಲಿಗಳ ಹೃದಯ ಅಂಗಾಂಶದಲ್ಲಿನ ಪ್ರೋಟೀನ್​​​ಗಳನ್ನು ಬದಲಿಸಿದೆ ಎಂದು ಇಲಿಗಳ ಮೇಲೆ ನಡೆಸಿದ ಸಂಶೋಧನೆಯಿಂದ ತಜ್ಞರು ಕಂಡುಹಿಡಿದ್ದಾರೆ. ಈ ಮಾತ್ರೆಗಳ ಸೇವನೆಯಿಂದ ಯಕೃತನ್ನು ಹಾನಿಗೊಳಿಸುತ್ತದೆ, ರಕ್ತದೊತ್ತಡವನ್ನು ಹೆಚ್ಚಿಸಬಹುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಲಿಂಬೆ ನೀರು ಕುಡಿಯುವುದು ಒಳ್ಳೆಯದಾ? ಎಳನೀರು ಉತ್ತಮವಾ?

ಅದಲ್ಲದೇ ಪ್ಯಾರಸಿಟಮಾಲ್ ಮಾತ್ರೆಯ ಹೆಚ್ಚಿನ ಪ್ರಮಾಣದ ಬಳಕೆಯಿಂದ ಆಕ್ಸಿಡೇಟಿವ್ ಒತ್ತಡ ಅಥವಾ ಜೀವಾಣುಗಳ ಸಂಗ್ರಹದ ಪರಿಣಾಮವಾಗಿ ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಆದಾಗ್ಯೂ, ರಾಷ್ಟ್ರೀಯ ಆರೋಗ್ಯ ಸೇವೆ (NHS) ವರದಿಯ ಪ್ರಕಾರ, ವಯಸ್ಕರು 500mg ಮಾತ್ರೆಗಳನ್ನು ದಿನಕ್ಕೆ 4 ಬಾರಿ ತೆಗೆದುಕೊಳ್ಳಬಹುದು. ಆದರೆ ಡೋಸ್‌ಗಳ ನಡುವೆ ಕನಿಷ್ಠ 4 ಗಂಟೆಗಳ ಕಾಲ ಅಂತರವಿರಬೇಕು. 24 ಗಂಟೆಗಳಲ್ಲಿ 8 ಕ್ಕಿಂತ ಹೆಚ್ಚು ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಎಂದು ತಿಳಿಸಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್