Health Tips: ಅರಿಶಿನ ಹಾಲಿನಿಂದ ಪ್ರಯೋಜನ ಮಾತ್ರವಲ್ಲ ಹಾನಿಯೂ ಇದೆ

ಅರಿಶಿನದಲ್ಲಿರುವ ' ಕರ್ಕ್ಯುಮಿನ್ ' ಅಂಶ ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವುದರಿಂದ, ಋತುವಿನ ಬದಲಾವಣೆ ಕಾಲದಲ್ಲಿ ಅಂದರೆ ಬೇಸಿಗೆ ಕಾಲದಿಂದ ಮಳೆಗಾಲ, ಮಳೆಗಾಲದಿಂದ ಚಳಿಗಾಲ ಹೀಗೆ ಇಂತಹ ಸಂದರ್ಭಗಳಲ್ಲಿ ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ಶೀತ, ಕೆಮ್ಮು, ಕಫ ಮತ್ತು ಜ್ವರ ದೂರಾಗುತ್ತದೆ ಅಥವಾ ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಬಹುದು. ಆದರೆ ಅರಿಶಿನ ಹಾಲು ಕೆಲವು ಜನರಿಗೆ ಹಾನಿಕಾರಕವೆಂದು ಸಾಬೀತಾಗಿದೆ. ಹಾಗಾದರೆ ಇದನ್ನು ಯಾರು ಸೇವನೆ ಮಾಡಬಾರದು? ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ಅರಿಶಿನ ಹಾಲಿನಿಂದ ಪ್ರಯೋಜನ ಮಾತ್ರವಲ್ಲ ಹಾನಿಯೂ ಇದೆ
Side Effects Of Turmeric Milk
Follow us
| Updated By: ಅಕ್ಷತಾ ವರ್ಕಾಡಿ

Updated on: Oct 15, 2024 | 6:11 PM

ನಿಮಗೆ ತಿಳಿದಿರಬಹುದು ಹಾಲಿಗಿಂತಲೂ ಹಳದಿ ಹಾಲು ಅಥವಾ ಅರಿಶಿನದ ಹಾಲು ಆರೋಗ್ಯಕ್ಕೆ ಹೆಚ್ಚು ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ. ಪ್ರತಿನಿತ್ಯ ಅರಿಶಿನ ಹಾಲನ್ನು ಕುಡಿಯುವ ಮೂಲಕ ಹೆಚ್ಚಿನವರು ತಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಅರಿಶಿನದಲ್ಲಿರುವ ‘ ಕರ್ಕ್ಯುಮಿನ್ ‘ ಅಂಶ ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವುದರಿಂದ, ಋತುವಿನ ಬದಲಾವಣೆ ಕಾಲದಲ್ಲಿ ಅಂದರೆ ಬೇಸಿಗೆ ಕಾಲದಿಂದ ಮಳೆಗಾಲ, ಮಳೆಗಾಲದಿಂದ ಚಳಿಗಾಲ ಹೀಗೆ ಇಂತಹ ಸಂದರ್ಭಗಳಲ್ಲಿ ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ಶೀತ, ಕೆಮ್ಮು, ಕಫ ಮತ್ತು ಜ್ವರ ದೂರಾಗುತ್ತದೆ ಅಥವಾ ಈ ರೀತಿಯ ಸಮಸ್ಯೆಗಳು ಬರದಂತೆ ತಡೆಯಬಹುದು. ಆದರೆ ಅರಿಶಿನ ಹಾಲು ಕೆಲವು ಜನರಿಗೆ ಹಾನಿಕಾರಕವೆಂದು ಸಾಬೀತಾಗಿದೆ. ಹಾಗಾದರೆ ಇದನ್ನು ಯಾರು ಸೇವನೆ ಮಾಡಬಾರದು? ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಅರಿಶಿನ ಹಾಲು ಆರೋಗ್ಯಕ್ಕೆ ವರದಾನವಾಗಿದ್ದರೂ ಕೂಡ ಇದನ್ನು ಅತಿಯಾಗಿ ಕುಡಿಯುವುದರಿಂದ ಕೆಲವರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುವ ಬದಲು ನಕಾರಾತ್ಮಕ ಪರಿಣಾಮ ಬೀರಬಹುದು.
  • ಗ್ಯಾಸ್ ಅಥವಾ ಹೊಟ್ಟೆಯುಬ್ಬರದಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರುವವರು ಅರಿಶಿನ ಹಾಲನ್ನು ಸೇವನೆ ಮಾಡುವುದು ಒಳ್ಳೆಯದಲ್ಲ. ಏಕೆಂದರೆ ಇದರಲ್ಲಿರುವ ಪದಾರ್ಥಗಳು ನಿಮ್ಮ ಸಮಸ್ಯೆಯನ್ನು ಉಲ್ಬಣಗೊಳಿಸಬಹುದು.
  • ಮಧುಮೇಹದಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಗಳಿಂದ ಬಳಲುತ್ತಿರುವವರು ವೈದ್ಯರನ್ನು ಸಂಪರ್ಕಿಸದೆ ಅರಿಶಿನ ಹಾಲನ್ನು ಕುಡಿಯಬಾರದು.
  • ಆಗಾಗ ಕಡಿಮೆ ರಕ್ತದೊತ್ತಡದಂತಹ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅರಿಶಿನದ ಹಾಲು ತುಂಬಾ ಹಾನಿಕಾರಕವಾಗಿದ್ದು ಇದು ರಕ್ತದೊತ್ತಡವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ.
  • ಕೆಲವರಿಗೆ ಹಾಲಿನಿಂದ ಅಲರ್ಜಿ ಇದ್ದರೆ ನಿಮ್ಮ ಆಹಾರದಲ್ಲಿ ಅರಿಶಿನ ಹಾಲನ್ನು ಸೇರಿಸುವುದನ್ನು ತಪ್ಪಿಸುವುದು ಒಳ್ಳೆಯದು.
  • ಮಳೆಗಾಲ ಅಥವಾ ಚಳಿಗಾಲದ ಸಮಯದಲ್ಲಿ ಅರಿಶಿನ ಹಾಲನ್ನು ಅತಿಯಾಗಿ ಸೇವನೆ ಮಾಡಬಾರದು. ಆಯುರ್ವೇದದ ಪ್ರಕಾರ, ಅರಿಶಿನ ಹಾಲನ್ನು ಮಿತಿಯೊಳಗೆ ಸೇವಿಸಿದರೆ ಮಾತ್ರ ನಿಮಗೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಯಾವುದನ್ನಾದರೂ ಅತಿಯಾಗಿ ಸೇವಿಸುವುದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಇದನ್ನು ಬಳಸುವ ಮೊದಲು ನೀವು ನಿಮ್ಮ ವೈದ್ಯರನ್ನು ಸಂಪರ್ಕಿಸಿ.)

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ