AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neurological Disorder: ಈ ಲಕ್ಷಣಗಳು ನಿಮ್ಮಲ್ಲಿ ಕಾಣಿಸಿಕೊಂಡರೆ, ಎಂದಿಗೂ ನಿರ್ಲಕ್ಷ್ಯಬೇಡ

ಹೆಚ್ಚಿನ ಜನರು ಪ್ರತಿದಿನ ತಲೆನೋವು ಎದುರಿಸುತ್ತಾರೆ. ಆದರೆ ಬಿಡು ಬಿಡದೇ ಕಾಡುವ ವಿಪರೀತ ತಲೆನೋವಿನಿಂದ ಬಳಲುತ್ತಿದ್ದರೆ ಎಂದಿಗೂ ನಿರ್ಲಕ್ಷ್ಯಬೇಡ. ನಿಮ್ಮ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಸರಿಯಾದ ಚಿಕಿತ್ಸೆಯನ್ನು ಪಡೆಯುವುದು ಅಗತ್ಯ.

Neurological Disorder: ಈ ಲಕ್ಷಣಗಳು ನಿಮ್ಮಲ್ಲಿ ಕಾಣಿಸಿಕೊಂಡರೆ, ಎಂದಿಗೂ ನಿರ್ಲಕ್ಷ್ಯಬೇಡ
ಅಕ್ಷತಾ ವರ್ಕಾಡಿ
|

Updated on: Jul 20, 2023 | 6:47 AM

Share

ಯಾವುದೇ ನರವೈಜ್ಞಾನಿಕ ಅಸ್ವಸ್ಥತೆಗಳು ನಿರಂತರ ತಲೆನೋವು, ತಲೆತಿರುಗುವಿಕೆ, ಹಠಾತ್ ಜ್ಞಾಪಕ ಶಕ್ತಿ ನಷ್ಟ ಮತ್ತು ದೃಷ್ಟಿ ಸಮಸ್ಯೆಗಳಂತಹ ಕೆಲವು ಎಚ್ಚರಿಕೆಯ ಚಿಹ್ನೆಗಳನ್ನು ನೀಡಬಹುದು ಎಂದು ಮುಂಬೈನ ನರವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಪಂಕಜ್ ಅಗರ್ವಾ ಎಲ್ ಎಚ್ಚರಿಸುತ್ತಾರೆ. ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸದೆ ವೈದ್ಯರನ್ನು ಸಂಪರ್ಕಿಸುವುದು ಮತ್ತು ತ್ವರಿತ ಚಿಕಿತ್ಸೆಯನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳುತ್ತಾರೆ.

ನರವೈಜ್ಞಾನಿಕ ಅಸ್ವಸ್ಥತೆಗಳು ಸಾಮಾನ್ಯವಾಗಿ ಎಲ್ಲಾ ವಯಸ್ಸಿನ ಜನರಲ್ಲಿ ಕಂಡುಬರುತ್ತವೆ. ಕಲಿಕೆಯಲ್ಲಿ ಅಸಮರ್ಥತೆ, ನರಸ್ನಾಯುಕ ಅಸ್ವಸ್ಥತೆಗಳು, ಸ್ವಲೀನತೆ, ಸೆರೆಬ್ರಲ್ ಪಾಲ್ಸಿ, ಪಾರ್ಶ್ವವಾಯು, ಅಪಸ್ಮಾರ, ಆಲ್ಝೈಮರ್ನ ಕಾಯಿಲೆ, ಬುದ್ಧಿಮಾಂದ್ಯತೆ ಮತ್ತು ಮೆದುಳಿನ ಗೆಡ್ಡೆಗಳಂತಹ ನರವೈಜ್ಞಾನಿಕ ಅಸ್ವಸ್ಥತೆಗಳೊಂದಿಗೆ ಒಟ್ಟಾರೆ ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತದೆ ನೀವು ಯಾವುದೇ ನರವೈಜ್ಞಾನಿಕ ಸಮಸ್ಯೆಗಳನ್ನು ಹೊಂದಿರುವಾಗ ನೀವು ಗಮನಿಸಬಹುದಾದ ಕೆಲವು ಚಿಹ್ನೆಗಳು ಮತ್ತು ರೋಗಲಕ್ಷಣಗಳು ಇಲ್ಲಿವೆ.

ತಲೆನೋವು:

ಹೆಚ್ಚಿನ ಜನರು ಪ್ರತಿದಿನ ತಲೆನೋವು ಎದುರಿಸುತ್ತಾರೆ. ಆದರೆ ಬಿಡು ಬಿಡದೇ ಕಾಡುವ ವಿಪರೀತ ತಲೆನೋವಿನಿಂದ ಬಳಲುತ್ತಿದ್ದರೆ ಎಂದಿಗೂ ನಿರ್ಲಕ್ಷ್ಯಬೇಡ. ನಿಮ್ಮ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಸರಿಯಾದ ಚಿಕಿತ್ಸೆಯನ್ನು ಪಡೆಯುವುದು ಅಗತ್ಯ.

ಕೈಕಾಲುಗಳಲ್ಲಿ ದೌರ್ಬಲ್ಯ ಅಥವಾ ಮರಗಟ್ಟುವಿಕೆ:

ನೀವು ದೀರ್ಘಕಾಲದವರೆಗೆ ಯಾವುದೇ ಕಾರಣವಿಲ್ಲದೇ ನಿಮ್ಮ ತೋಳುಗಳು ಮತ್ತು ಕಾಲುಗಳಲ್ಲಿ ಭಾರ ಅಥವಾ ಮರಗಟ್ಟುವಿಕೆ ಲಕ್ಷಣಗಳು ಕಂಡುಬರುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಈ ಸಿಂಪಲ್​​​​ ಟಿಪ್ಸ್​​​ ಬಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು

ತಲೆತಿರುಗುವಿಕೆ:

ತಲೆತಿರುಗುವಿಕೆಯ ನಿಮ್ಮ ಆರೋಗ್ಯದಲ್ಲಿ ಬದಲಾವಣೆಯುಂಟಾಗಿದೆ ಎಂಬುದನ್ನು ಸೂಚಿಸುತ್ತದೆ. ಒಮ್ಮೆ ವೈದ್ಯರನ್ನು ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಉತ್ತಮ.

ದೃಷ್ಟಿ ಸಮಸ್ಯೆ:

ಅಸ್ಪಷ್ಟ, ದ್ವಿಗುಣ, ಅಥವಾ ದೃಷ್ಟಿ ನಷ್ಟ, ಆದರೆ ಕೆಲವೊಮ್ಮೆ ಇದು ಸರಿಯಾದ ರೋಗನಿರ್ಣಯ ಮತ್ತು ಚಿಕಿತ್ಸೆಯ ಅಗತ್ಯವಿರುವ ಕೆಲವು ಆಧಾರವಾಗಿರುವ ನರವೈಜ್ಞಾನಿಕ ಸ್ಥಿತಿಯ ಸಂಕೇತವಾಗಿರಬಹುದು.

ಈ ರೋಗಲಕ್ಷಣಗಳ ಹೊರತಾಗಿ, ಕೈಯಲ್ಲಿ ನಡುಕ, ನಡೆಯಲು ತೊಂದರೆ, ಸಮತೋಲನದ ನಷ್ಟ, ಕೈಕಾಲುಗಳಲ್ಲಿ ಸ್ನಾಯು ದೌರ್ಬಲ್ಯ ಕಂಡು ಬಂದರೆ ರೋಗನಿರ್ಣಯ ಮತ್ತು ಸೂಕ್ತ ಚಿಕಿತ್ಸೆಯ ಅಗತ್ಯವಿರುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ನರವೈಜ್ಞಾನಿಕ ಸಮಸ್ಯೆಗಳಿಗೆ ಪರಿಹಾರವಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!