AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತ್ರೆಗಳಿಲ್ಲದೆ ತಲೆನೋವನ್ನು ಕಡಿಮೆ ಮಾಡಲು ಇಲ್ಲಿದೆ ಸಿಂಪಲ್ ಟಿಪ್ಸ್

ಪದೇ ಪದೇ ಬರುವ ತಲೆ ನೋವಿನಿಂದ ಮುಕ್ತಿ ಪಡೆಯಲು ಮಾತ್ರೆಗಳ ಮೊರೆ ಹೋಗುವುದು ಸರಿಯಲ್ಲ, ಜೊತೆಗೆ ಅದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದಲ್ಲ. ನೀವು ತಲೆನೋವು ಬರದಂತೆ ಕಾಪಾಡಿಕೊಳ್ಳಬೇಕು ಅಥವಾ ಬಂದಾಗ ಮನೆ ಮದ್ದಿನಿಂದಲೇ ಅದನ್ನು ಕಡಿಮೆ ಮಾಡಿಕೊಂಡು ಮಾತ್ರೆ ಬಳಕೆಯನ್ನು ಕಡಿಮೆ ಮಾಡಬೇಕು. ಹಾಗಾದರೆ ನೈಸರ್ಗಿಕ ರೀತಿಯಲ್ಲಿ ತಲೆನೋವನ್ನು ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಸರಳ ಸಲಹೆಗಳು.

ಮಾತ್ರೆಗಳಿಲ್ಲದೆ ತಲೆನೋವನ್ನು ಕಡಿಮೆ ಮಾಡಲು ಇಲ್ಲಿದೆ ಸಿಂಪಲ್ ಟಿಪ್ಸ್
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 04, 2025 | 3:15 PM

Share

ತಲೆನೋವು ಸಣ್ಣ ಸಮಸ್ಯೆಯಂತೆ ಕಂಡರೂ ಒಮ್ಮೆ ಬಂದರೆ ದಿನವಿಡೀ ತಾಳ್ಮೆ ಕಳೆದುಕೊಳ್ಳುವಷ್ಟು ಕಿರಿಕಿರಿಯಾಗುತ್ತದೆ. ಸಾಮಾನ್ಯವಾಗಿ ನಮ್ಮ ಜೀವನಶೈಲಿ, ಒತ್ತಡ, ಕಳಪೆ ನಿದ್ರೆ, ದೀರ್ಘಕಾಲದ ವರೆಗೆ ಮೊಬೈಲ್ ಅಥವಾ ಟಿವಿ ನೋಡುವುದು, ಹಸಿವಾದಾಗ ಸರಿಯಾಗಿ ತಿನ್ನದಿರುವುದು ಮುಂತಾದ ಅಂಶಗಳು ತಲೆನೋವಿಗೆ ಕಾರಣವಾಗಿರಬಹುದು. ಆದರೆ ಪದೇ ಪದೇ ಬರುವ ತಲೆ ನೋವಿನಿಂದ ಮುಕ್ತಿ ಪಡೆಯಲು ಮಾತ್ರೆಗಳ ಮೊರೆ ಹೋಗುವುದು ಸರಿಯಲ್ಲ, ಜೊತೆಗೆ ಅದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದಲ್ಲ. ನೀವು ತಲೆನೋವು ಬರದಂತೆ ಕಾಪಾಡಿಕೊಳ್ಳಬೇಕು ಅಥವಾ ಬಂದಾಗ ಮನೆ ಮದ್ದಿನಿಂದಲೇ ಅದನ್ನು ಕಡಿಮೆ ಮಾಡಿಕೊಂಡು ಮಾತ್ರೆ ಬಳಕೆಯನ್ನು ಕಡಿಮೆ ಮಾಡಬೇಕು. ಹಾಗಾದರೆ ನೈಸರ್ಗಿಕ ರೀತಿಯಲ್ಲಿ ತಲೆನೋವನ್ನು ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಸರಳ ಸಲಹೆಗಳು.

ತಲೆನೋವಿಗೆ ಕಾರಣಗಳು;

ಒತ್ತಡ ಮತ್ತು ಆತಂಕ

ದೇಹದಲ್ಲಿ ನೀರಿನ ಕೊರತೆ

ಇದನ್ನೂ ಓದಿ
Image
ವೈದ್ಯರು ನಿಯಮಿತವಾಗಿ ಆವಕಾಡೊ ಸೇವನೆ ಮಾಡಿ ಎನ್ನಲು ಕಾರಣವೇನು?
Image
ಟ್ಯಾಟೂ ಹಾಕಿಸುವ ಮೊದಲು ಈ ಅಂಶ ನೆನಪಿನಲ್ಲಿರಲಿ
Image
ಹಕ್ಕಿ ಜ್ವರ ಹೇಗೆ ಹರಡುತ್ತೆ? ರೋಗಲಕ್ಷಣಗಳೇನು? ಬರದಂತೆ ತಡೆಯಲು ಈ ಸಲಹೆ
Image
ಅಣಬೆಗಳು ಈ ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ

ನಿದ್ರೆಯ ಕೊರತೆ

ಮೊಬೈಲ್ ಅಥವಾ ಟಿವಿ ಮುಂದೆ ಹೆಚ್ಚು ಸಮಯ ಕಳೆಯುವುದು

ಹಸಿವಾದಾಗ ತಿನ್ನದಿರುವುದು

ದೊಡ್ಡ ಶಬ್ದಗಳು, ಬೆಳಕಿನ ಪರಿಣಾಮ

ಮೈಗ್ರೇನ್ ಅಥವಾ ಸೈನಸ್ ಸಮಸ್ಯೆಗಳು

ತಲೆನೋವಿಗೆ ಐಸ್ ಕ್ಯೂಬ್ ಗಳು;

ನಿಮಗೆ ತಲೆನೋವು ಬಂದಾಗ, ತಕ್ಷಣ ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಬಿಟ್ಟು ಮನೆಯಲ್ಲಿಯೇ ನೈಸರ್ಗಿಕ ಚಿಕಿತ್ಸೆಯನ್ನು ಪ್ರಯತ್ನಿಸಬಹುದು. ಎರಡು ಐಸ್ ಕ್ಯೂಬ್ ಗಳನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತಟ್ಟೆ ಅಥವಾ ದೊಡ್ಡ ಬೌಲ್ ನಲ್ಲಿ ಹಾಕಿ. ಅದರ ನಂತರ, ನಿಮ್ಮ ಬೆರಳುಗಳನ್ನು ಈ ಐಸ್ ಕ್ಯೂಬ್ ಗಳ ಮೇಲೆ ಇರಿಸಿ, ಸ್ವಲ್ಪ ಸಮಯದ ನಂತರ, ಅದನ್ನು ತೆಗೆದು ನಿಧಾನವಾಗಿ ಮಸಾಜ್ ಮಾಡಿ. ಇದನ್ನು ಎರಡು ನಿಮಿಷಗಳ ಕಾಲ ಮಾಡಿದರೆ ತಲೆನೋವು ಕಡಿಮೆಯಾಗುತ್ತದೆ. ಈ ಮನೆಮದ್ದನ್ನು ಕೇಳಿ ನಿಮಗೆ ಸ್ವಲ್ಪ ಆಶ್ಚರ್ಯ ಎನಿಸಿದರೂ ಇದು ನಿಮ್ಮ ತೆಲೆನೋವನ್ನು ಕಡಿಮೆ ಮಾಡುವುದರಲ್ಲಿ ಸಂಶಯವಿಲ್ಲ.

ಇದನ್ನೂ ಓದಿ: ಕೀಲು ನೋವಿಗೆ ವೀಳ್ಯದೆಲೆ ನೀರಿನಲ್ಲಿದೆ ಪರಿಹಾರ

ಈ ಮನೆಮದ್ದು ಹೇಗೆ ಕೆಲಸ ಮಾಡುತ್ತದೆ?

ನಮ್ಮ ಬೆರಳುಗಳ ನರಗಳು ನೇರವಾಗಿ ತಲೆಯ ನರಗಳಿಗೆ ಸಂಪರ್ಕ ಹೊಂದಿವೆ. ಮಂಜುಗಡ್ಡೆ ಅಥವಾ ಐಸ್ ಕ್ಯೂಬ್ ತಂಪು ಮಾಡುವುದರಿಂದ, ನರಗಳ ಒತ್ತಡ ಕಡಿಮೆಯಾಗುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ತಲೆನೋವು ಕಡಿಮೆಯಾಗುವ ಸಾಧ್ಯತೆಯಿದೆ. ಇದು ಸಂಪೂರ್ಣವಾಗಿ ನೈಸರ್ಗಿಕ ಚಿಕಿತ್ಸೆಯಾಗಿರುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳಿಲ್ಲ. ಈ ಮನೆಮದ್ದಿಗೆ ಐಸ್ ವಾಟರ್ ಗಳನ್ನೂ ಕೂಡ ಬಳಕೆ ಮಾಡಿಕೊಳ್ಳಬಹುದು. ಇದರ ಹೊರತಾಗಿ ಇತರ ನೈಸರ್ಗಿಕ ವಿಧಾನಗಳ ಬಗ್ಗೆ ಮಾಹಿತಿ ಇಲ್ಲಿದೆ.

*ಸಾಕಷ್ಟು ನೀರು ಕುಡಿಯಿರಿ; ಸಾಮಾನ್ಯವಾಗಿ ನಿರ್ಜಲೀಕರಣ ತಲೆನೋವಿಗೆ ಕಾರಣವಾಗಬಹುದು. ಹಾಗಾಗಿ ಸರಿಯಾಗಿ ನೀರು ಕುಡಿಯಿರಿ.

*ನಿಧಾನವಾಗಿ ಉಸಿರಾಡುವುದು; ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ತಲೆನೋವನ್ನು ಕಡಿಮೆ ಮಾಡುತ್ತದೆ.

*ಸ್ವಲ್ಪ ಯೋಗ ಮತ್ತು ಮಸಾಜ್; ಕುತ್ತಿಗೆ ಮತ್ತು ತಲೆಯ ಪ್ರದೇಶಗಳನ್ನು ನಿಧಾನವಾಗಿ ಮಸಾಜ್ ಮಾಡುವುದರಿಂದ ಪರಿಹಾರ ಸಿಗುತ್ತದೆ.

*ಪುದೀನಾ ಅಥವಾ ಶುಂಠಿ ಚಹಾ; ಈ ಚಹಾ ನೈಸರ್ಗಿಕ ನೋವು ನಿವಾರಣೆಗೆ ಬಹಳ ಉಪಯುಕ್ತವಾಗಿವೆ. ಈ ಸಲಹೆಗಳನ್ನು ಅನುಸರಿಸುವುದರಿಂದ ತಲೆನೋವನ್ನು ಸುಲಭವಾಗಿ ಕಡಿಮೆ ಮಾಡಬಹುದು. ನಿಮಗೆ ತಲೆನೋವು ಬಂದಾಗ ಒಮ್ಮೆ ಐಸ್ ಮಸಾಜ್ ಪ್ರಯತ್ನಿಸುವುದನ್ನು ಮಾತ್ರ ಮರೆಯಬೇಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!