Sign In

By signing in or creating an account, you agree with Associated Broadcasting Company's Terms & Conditions and Privacy Policy.

Custard Apple: ಚಳಿಗಾಲದ ಹಣ್ಣು ಸೀತಾಫಲ ತಿನ್ನುವುದರಿಂದ ಏನು ಉಪಯೋಗ?

ಸೀತಾಫಲವು ನಮ್ಮ ದೇಹಕ್ಕೆ ತ್ವರಿತ ಶಕ್ತಿಗಾಗಿ ಕಾರ್ಬೋಹೈಡ್ರೇಟ್‌ಗಳನ್ನು ಪೂರೈಸುತ್ತದೆ. ಈ ಹಣ್ಣು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಸತು, ತಾಮ್ರ, ಕ್ಯಾರೊಟಿನಾಯ್ಡ್​ ಮತ್ತು ಫ್ಲೇವನಾಯ್ಡ್‌ಗಳಂತಹ ಅಪಾರ ಪ್ರಮಾಣದ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ.

Custard Apple: ಚಳಿಗಾಲದ ಹಣ್ಣು ಸೀತಾಫಲ ತಿನ್ನುವುದರಿಂದ ಏನು ಉಪಯೋಗ?
ಸೀತಾಫಲImage Credit source: iStock
Follow us
ಸುಷ್ಮಾ ಚಕ್ರೆ
|

Updated on:Nov 14, 2023 | 4:28 PM

ಸೀತಾಫಲವು ಭಾರತದಲ್ಲಿನ ಚಳಿಯ ವಾತಾವರಣದಲ್ಲಿ ಹೆಚ್ಚು ಬೆಳೆಯುವ ಹಣ್ಣು. ಇದನ್ನು ಖೀರ್‌, ಮಿಲ್ಕ್‌ಶೇಕ್‌ ಮತ್ತು ಐಸ್‌ಕ್ರೀಮ್‌ಗಳಂತಹ ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಸೀತಾಫಲವನ್ನು ಸಕ್ಕರೆ ಸೇಬು, ಚೆರಿಮೋಯಾ ಅಥವಾ ಸ್ವೀಟ್ಸಾಪ್ ಎಂದೂ ಕರೆಯಲಾಗುತ್ತದೆ. ಸೀತಾಫಲ ಹಣ್ಣಿನ ಒಳಗೆ ಅನೇಕ ಕಪ್ಪು ಬೀಜಗಳಿರುತ್ತದೆ. ಇದು ಪರಿಮಳಯುಕ್ತ ಮತ್ತು ಸಿಹಿ ರುಚಿಯ ತಿರುಳನ್ನು ಹೊಂದಿರುತ್ತದೆ.

ಸೀತಾಫಲವು ನಮ್ಮ ದೇಹಕ್ಕೆ ತ್ವರಿತ ಶಕ್ತಿಗಾಗಿ ಕಾರ್ಬೋಹೈಡ್ರೇಟ್‌ಗಳನ್ನು ಪೂರೈಸುತ್ತದೆ. ಈ ಹಣ್ಣು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಸತು, ತಾಮ್ರ, ಕ್ಯಾರೊಟಿನಾಯ್ಡ್​ ಮತ್ತು ಫ್ಲೇವನಾಯ್ಡ್‌ಗಳಂತಹ ಅಪಾರ ಪ್ರಮಾಣದ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ.

ಸೀತಾಫಲದ ಆರೋಗ್ಯ ಪ್ರಯೋಜನಗಳು ಹೀಗಿವೆ:

ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ:

ಸೀತಾಫಲವು ದೇಹದ ಶಕ್ತಿಯ ಅವಶ್ಯಕತೆಗಳನ್ನು ಉಳಿಸಿಕೊಳ್ಳಲು ಮುಖ್ಯವಾದ ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅನ್ನು ಒದಗಿಸುತ್ತದೆ. ಅಲ್ಲದೆ, ಇದರಲ್ಲಿ ಕಬ್ಬಿಣದ ಅಂಶವು ಸಮೃದ್ಧವಾಗಿರುವುದರಿಂದ ಇದು ಆಲಸ್ಯವನ್ನು ನಿವಾರಿಸುತ್ತದೆ ಮತ್ತು ರಕ್ತಹೀನತೆಯನ್ನು ಗುಣಪಡಿಸುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಸುವರ್ಣಗೆಡ್ಡೆ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನ?

ಚರ್ಮದ ಸೋಂಕುಗಳಿಗೆ ಚಿಕಿತ್ಸೆ ನೀಡುತ್ತದೆ:

ಸೀತಾಫಲವು ಚರ್ಮವನ್ನು ಆರೋಗ್ಯವಾಗಿಡುವ ಅಂಶಗಳ ನಿಧಿಯಾಗಿದೆ. ಇದರಲ್ಲಿ ವಿಟಮಿನ್ ಬಿ 5, ವಿಟಮಿನ್ ಸಿ, ವಿಟಮಿನ್ ಎ, ಸತು ಮತ್ತು ತಾಮ್ರ ಹೇರಳವಾಗಿದೆ. ಮೊಡವೆ, ಹುಣ್ಣು, ಅಲರ್ಜಿಗಳು ಮತ್ತು ಇತರ ಚರ್ಮದ ಕಾಯಿಲೆಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸಲು ಸೀತಾಫಲ ಹಣ್ಣು ಸಹಾಯ ಮಾಡುತ್ತದೆ.

ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ:

ವಿವಿಧ ವೈಜ್ಞಾನಿಕ ಅಧ್ಯಯನಗಳು ಸೀತಾಫಲದಲ್ಲಿರುವ ಅಸಿಟೋಜೆನಿನ್ ಸಂಯುಕ್ತಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ ಎಂದು ಸಾಬೀತುಪಡಿಸಿವೆ. ಸೀತಾಫಲವನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದರಿಂದ ಗೆಡ್ಡೆಗಳು ಮತ್ತು ಉರಿಯೂತವನ್ನು ಪರಿಣಾಮಕಾರಿಯಾಗಿ ಸರಿಪಡಿಸುತ್ತದೆ.

ಮಧುಮೇಹದ ಲಕ್ಷಣಗಳನ್ನು ನಿಯಂತ್ರಿಸುತ್ತದೆ:

ಸೀತಾಫಲವು ಪಾಲಿಫಿನಾಲಿಕ್ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದು ಇನ್ಸುಲಿನ್ ಉತ್ಪಾದನೆ ಮತ್ತು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತವೆ. ಇದರಿಂದಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ಇದನ್ನೂ ಓದಿ: ಮುಖಕ್ಕೆ ನಿಂಬೆ ಹಣ್ಣಿನ ರಸ ಹಚ್ಚುವುದು ಒಳ್ಳೆಯದಾ?

ಮೆದುಳಿನ ಚಟುವಟಿಕೆಯನ್ನು ಹೆಚ್ಚಿಸುತ್ತದೆ:

ಸೀತಾಫಲದಲ್ಲಿ ನೈಸರ್ಗಿಕವಾಗಿ ವಿಟಮಿನ್ ಬಿ6 ಇದೆ. ಇದು ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ ಇದು ಏಕಾಗ್ರತೆಯನ್ನು ಹೆಚ್ಚಿಸಲು, ಖಿನ್ನತೆಯನ್ನು ನಿವಾರಿಸಲು ಮತ್ತು ಮನಸ್ಥಿತಿಗಳನ್ನು ಸುಧಾರಿಸಲು ಉಪಯುಕ್ತವಾಗಿದೆ.

ರೋಗನಿರೋಧಕ ವ್ಯವಸ್ಥೆಯನ್ನು ವೃದ್ಧಿಸುತ್ತದೆ:

ಸೀತಾಫಲದಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಸೀತಾಫಲವು ಹಾನಿಕಾರಕ ಬಾಹ್ಯ ಸೂಕ್ಷ್ಮಜೀವಿಗಳು ಮತ್ತು ರೋಗಗಳಿಂದ ರಕ್ಷಿಸುವುದರ ಜೊತೆಗೆ ದೇಹದೊಳಗಿನ ವಿಷ ಮತ್ತು ಸ್ವತಂತ್ರ ರಾಡಿಕಲ್​ಗಳನ್ನು ಹೊರಹಾಕುತ್ತದೆ.

ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ:

ಸೀತಾಫಲವು ಹೆಚ್ಚಿನ ಪ್ರಮಾಣದ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನ ಕ್ಯಾರೊಟಿನಾಯ್ಡ್ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇವುಗಳು ಆಪ್ಟಿಕ್ ನರ ಮತ್ತು ದೃಷ್ಟಿ ಅಂಗಗಳಿಗೆ ರಕ್ತ ಪರಿಚಲನೆಯನ್ನು ಉತ್ಕೃಷ್ಟಗೊಳಿಸುತ್ತವೆ, ದೃಷ್ಟಿಯನ್ನು ಹೆಚ್ಚಿಸುತ್ತವೆ. ಕಣ್ಣಿನ ಪೊರೆ, ದೃಷ್ಟಿದೋಷವನ್ನು ನಿವಾರಿಸುತ್ತದೆ.

ಮೂಳೆಯ ಆರೋಗ್ಯವನ್ನು ವೃದ್ಧಿಸುತ್ತದೆ:

ಸೀತಾಫಲವು ವಿಟಮಿನ್ ಕೆ ಮತ್ತು ರಂಜಕದ ಸಮೃದ್ಧ ಮೂಲವಾಗಿದೆ. ಇವೆರಡೂ ಮೂಳೆಗಳನ್ನು ಆಸ್ಟಿಯೊಪೊರೋಸಿಸ್‌ನಿಂದ ರಕ್ಷಿಸುವ ಮೂಲಕ ಮೂಳೆಯ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ.

ಗಾಯವನ್ನು ಗುಣಪಡಿಸಲು ಸಹಾಯ ಮಾಡುತ್ತದೆ:

ಸೀತಾಫಲದಲ್ಲಿ ವಿಟಮಿನ್ ಸಿ ಮತ್ತು ಮ್ಯಾಂಗನೀಸ್ ಸಮೃದ್ಧವಾಗಿದೆ. ಇದು ಗಾಯಗಳನ್ನು ವೇಗವಾಗಿ ವಾಸಿಮಾಡಲು ಸಹಾಯ ಮಾಡುತ್ತದೆ. ಈ ಸೂಪರ್ ಹಣ್ಣಿನಲ್ಲಿ ವಿಟಮಿನ್ ಕೆ ಇರುವುದರಿಂದ ತ್ವರಿತವಾಗಿ ಗಾಯವನ್ನು ಗುಣಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Tue, 14 November 23

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ