AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರವಾಗಿ ಚರ್ಮದಲ್ಲಿ ತುರಿಕೆ ಕಂಡುಬರುವುದಕ್ಕೆ ಈ ಅಂಶಗಳೇ ಕಾರಣ

ದೇಹದಲ್ಲಿ ನಿರಂತರವಾಗಿ ತುರಿಕೆ ಕಂಡುಬರುತ್ತಿದ್ದರೆ ಅದನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು. ಇದು ಕೇವಲ ಚರ್ಮದ ಸಮಸ್ಯೆಯಲ್ಲ; ಗಂಭೀರ ಕಾಯಿಲೆಯ ಸಂಕೇತ ಅಥವಾ ದೇಹದಲ್ಲಿನ ಪೋಷಕಾಂಶಗಳ ಕೊರತೆಯೂ ಆಗಿರಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ಕೆಲವು ಜೀವಸತ್ವ ಅಂದರೆ ವಿಟಮಿನ್ ಗಳ ಕೊರತೆ ಉಂಟಾದಾಗಲೂ ಕೂಡ, ತುರಿಕೆ ಹೆಚ್ಚಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತೆ, ಇದರಿಂದ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿರಂತರವಾಗಿ ಚರ್ಮದಲ್ಲಿ ತುರಿಕೆ ಕಂಡುಬರುವುದಕ್ಕೆ ಈ ಅಂಶಗಳೇ ಕಾರಣ
itchy skin vitamin deficiency
ಪ್ರೀತಿ ಭಟ್​, ಗುಣವಂತೆ
|

Updated on: Nov 28, 2025 | 6:50 PM

Share

ದೇಹದಲ್ಲಿ ನಿರಂತರವಾಗಿ ತುರಿಕೆ ಕಂಡುಬರುವುದು ಸಾಮಾನ್ಯ ವಿಷಯವಲ್ಲ. ಆದರೆ ಕೆಲವರು ಇದನ್ನು ಚರ್ಮದ ಸಮಸ್ಯೆ, ರಿಂಗ್‌ವರ್ಮ್‌ ಅಥವಾ ಆಹಾರ ಅಲರ್ಜಿಯಿಂದ ಉಂಟಾಗಿರಬಹುದು ಎಂದು ಭಾವಿಸಿ ಅದನ್ನು ನಿರ್ಲಕ್ಷ್ಯ ಮಾಡುತ್ತೇವೆ. ಆದರೆ ನಿರಂತರವಾಗಿ ಕಂಡುಬರುವ ತುರಿಕೆ (Itch) ಆಂತರಿಕ ಕಾಯಿಲೆ ಅಥವಾ ಪೋಷಕಾಂಶಗಳ ಕೊರತೆಯ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬೇಡಿ. ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ಕೆಲವು ಜೀವಸತ್ವ ಅಂದರೆ ವಿಟಮಿನ್ ಗಳ ಕೊರತೆ (Vitamin Deficiencies) ಉಂಟಾದಾಗಲೂ ಕೂಡ, ತುರಿಕೆ ಹೆಚ್ಚಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತೆ, ಇದರಿಂದ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ತುರಿಕೆಗೆ ಕಂಡು ಬರುವುದಕ್ಕೆ ಹಲವು ಕಾರಣಗಳಿರಬಹುದು, ಅವುಗಳಲ್ಲಿ ಒಂದು ವಿಟಮಿನ್ ಕೊರತೆ.

ವಿಟಮಿನ್ ಎ: ಈ ಜೀವಸತ್ವದ ಕೊರತೆ ತುರಿಕೆಗೆ ಕಾರಣವಾಗಬಹುದು. ಹೌದು, ವಿಟಮಿನ್ ಎ ಕೊರತೆಯು ಚರ್ಮವನ್ನು ಒಣಗಿಸಿ ತುರಿಕೆಗೆ ಕಾರಣವಾಗಬಹುದು. ಅದರಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು.

ವಿಟಮಿನ್ ಬಿ12: ಸಾಮಾನ್ಯವಾಗಿ ವಿಟಮಿನ್ ಬಿ12 ಕೊರತೆಯಿಂದಲೂ ದೇಹದಲ್ಲಿ ತುರಿಕೆ ಉಂಟಾಗಬಹುದು. ಅದರಲ್ಲಿಯೂ ಈ ಜೀವಸತ್ವದ ಕೊರತೆಯಿಂದ ಕೈ ಮತ್ತು ಕಾಲುಗಳಲ್ಲಿ ತುರಿಕೆ ಹೆಚ್ಚಾಗಬಹುದು. ಅಷ್ಟೇ ಅಲ್ಲ, ವಿಟಮಿನ್ ಬಿ3 ಕೊರತೆಯು ಕೂಡ ತುರಿಕೆಗೂ ಕಾರಣವಾಗಬಹುದು. ಈ ವಿಟಮಿನ್ ಬಿ3 ಕೊರತೆಯನ್ನು ನಿಯಾಸಿನ್ ಎಂದೂ ಕರೆಯುತ್ತಾರೆ.

ಇದನ್ನೂ ಓದಿ: ಕಾರಣವಿಲ್ಲದೆ ಬೇಸರವಾಗುತ್ತಾ, ಕೆಟ್ಟ ಆಲೋಚನೆಗಳು ಬರುತ್ತಾ? ಇದಕ್ಕೆಲ್ಲಾ ಕಾರಣ ಈ ವಿಟಮಿನ್! ಮುಕ್ತಿ ಪಡೆಯಲು ಈ ರೀತಿ ಮಾಡಿ

ಕ್ಯಾಲ್ಸಿಯಂ: ಸಾಮಾನ್ಯವಾಗಿ ಕ್ಯಾಲ್ಸಿಯಂ ಅಂಶ ಕಡಿಮೆಯಿದ್ದಾಗ ಕೈ ಮತ್ತು ಕಾಲುಗಳಲ್ಲಿ ನಡುಕ ಮತ್ತು ಚರ್ಮದ ಮೇಲೆ ತುರಿಕೆ ಕಂಡು ಬರುತ್ತದೆ. ನರಮಂಡಲವು ಸುಲಭವಾಗಿ ಕಿರಿಕಿರಿಗೊಳ್ಳುವುದರಿಂದ ಈ ರೀತಿಯಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಾಯಿ ಅಥವಾ ಬೆರಳುಗಳ ಸುತ್ತ ನಡುಕ ಬರುವುದು ಕೂಡ ಕ್ಯಾಲ್ಸಿಯಂ ಕೊರತೆಯ ಸಂಕೇತವಾಗಿರಬಹುದು.

ವಿಟಮಿನ್ ಇ ಮತ್ತು ವಿಟಮಿನ್ ಸಿ: ನಿಮಗೆ ಗೊತ್ತಾ? ದೇಹದಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಸಿ ಕೊರತೆ ಉಂಟಾದಾಗಲೂ ಕೂಡ ತುರಿಕೆಯಂತಹ ಲಕ್ಷಣಗಳು ಕಂಡುಬರಬಹುದು. ವಿಟಮಿನ್ ಇ ಉರಿಯೂತದ ಗುಣಗಳನ್ನು ಹೊಂದಿದ್ದು ಅದು ಚರ್ಮದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ