AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರೆಯ ಕೊರತೆ ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ನಿದ್ರಾಹೀನತೆಯು ದೀರ್ಘಕಾಲದವರೆಗೆ ಮಾನಸಿಕ ಸ್ಥಿತಿಯನ್ನು ಹದಗೆಡಿಸುತ್ತದೆ. ಜತೆಗೆ ದೈಹಿಕ ಆರೋಗ್ಯವನ್ನು ಹಾಳು ಮಾಡುತ್ತದೆ.

ನಿದ್ರೆಯ ಕೊರತೆ ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Aug 10, 2021 | 4:27 PM

ಮಾನಸಿಕ ಮತ್ತು ದೈಹಿಕ ಯೋಗ ಕ್ಷೇಮಕ್ಕಾಗಿ ನಿದ್ರೆ ಅವಶ್ಯಕ. ವಯಸ್ಸಿಗೆ ತಕ್ಕಂತೆ ನಿದ್ರೆಯ ಪ್ರಮಾಣ ಏರಿಳಿಯವಾಗುತ್ತದೆ. ಉದಾಹರಣೆಗೆ ಮಗುವು 18-20 ಗಂಟೆಗಳ ಕಾಲ ನಿದ್ರಿಸಬಹುದು. ಆದರೆ 80 ವರ್ಷಕ್ಕಿಂತ ಮೇಲ್ಪಟ್ಟವರು ಕೆಲವೇ ಗಂಟೆಗಳ ಕಾಲ ಮಾತ್ರ ನಿದ್ರಿಸಬಹುದು. ಕನಿಷ್ಠ 7-8 ತಾಸುಗಳ ಕಾಲ ದೀರ್ಘವಾದ ನಿದ್ರೆ ಬೇಕು. ಈ ಮಧ್ಯೆ ಸಮಸ್ಯೆ ಕಾಡುತ್ತಿದ್ದರೆ ನಿದ್ರಾಹೀನತೆ ಸಮಸ್ಯೆ ಕಾಡುತ್ತಿದೆ ಎಂದರ್ಥ.

ನಿದ್ರಾಹೀನತೆಯು ದೀರ್ಘಕಾಲದವರೆಗೆ ಮಾನಸಿಕ ಸ್ಥಿತಿಯನ್ನು ಹದಗೆಡಿಸುತ್ತದೆ. ಜತೆಗೆ ದೈಹಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ದಿರ್ಘಕಾಲದ ನಿದ್ರಾಹೀನತೆಯು ಮಧುಮೇಹ, ಮೆಲಿಟಸ್, ಪಾರ್ಶ್ವವಾಯು ಮತ್ತು ಹೃದ್ರೋಗದಂತಹ ಸಮಸ್ಯೆಗೆ ಕಾರಣವಾಗಬಹುದು. ಜತೆಗೆ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರಬಹುದು.

ಹಸಿವನ್ನು ನಿಯಂತ್ರಿಸುವ ಲೆಪ್ಟಿನ್ ಮತ್ತು ಗ್ರೆಲಿನ್ ಎಂಬ ಎರಡು ಹಾರ್ಮೋನುಗಳ ಮಟ್ಟವು ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಕೊರತೆಯು ಗ್ಲೂಕೋಸ್ ದೇಹದ ಸಹನೆಯನ್ನು ಕಡಿಮೆ ಮಾಡುತ್ತದೆ. ಇದು ಮಧುಮೇಹ ಹಾಗೂ ಸ್ಥೂಲಕಾಯತೆ ಸಮಸ್ಯೆಗೆ ಕಾರಣವಾಗಬಹುದು.

ನಿದ್ರಾ ಹೀನತೆಗೆ ಕಾರಣಗಳು *ಅತಿಯಾದ ಹಗಲಿನ ನಿದ್ರೆ *ಆಗಾಗ ಆಕಳಿಕೆ *ಏಕಾಗ್ರತೆ ಕೊರತೆ *ಹಗಲಿಗೆ ಆಯಾಸ *ದೇಹಕ್ಕೆ ಸುಸ್ತು

ನಿದ್ರೆ ಕೊರತೆ ನಿವಾರಿಸುವ ಸಲಹೆಗಳು *ಹಗಲಿನಲ್ಲಿ ನಿದ್ರೆಯನ್ನು ತಪ್ಪಿಸಿ *ಸಂಜೆ 4 ಗಂಟೆ ನಂತರ ಕಾಫಿ, ಚಹ ಸೇವನೆಯನ್ನು ತಪ್ಪಿಸಿ *ಪ್ರತಿನಿತ್ಯ ಒಂದೇ ಸಮಯಕ್ಕೆ ಮಲಗುವುದು ಮತ್ತು ಏಳುವ ಅಭ್ಯಾಸ ಮಾಡಿಕೊಳ್ಳಿ *ಮಲಗುವ ಮುನ್ನ ಮೊಬೈಲ್, ಟಿವಿಯಂತಹ ಎಲೆಕ್ಟ್ರಾನಿಕ್​ ಸಾಧನಗಳನ್ನು ನೋಡುವುದನ್ನು ಆದಷ್ಟು ತಪ್ಪಿಸಿ *ನಿಯಮಿತವಾಗಿ ವ್ಯಾಯಾಮ ಮಾಡಿ *ಆಲ್ಕೋಹಾಲ್ ಸೇವನೆ ಮಾಡಬೇಡಿ

ಇದನ್ನೂ ಓದಿ:

Health Tips: ಸರಿಯಾದ ನಿದ್ರೆಯಿಲ್ಲ ಎಂಬ ಚಿಂತೆಯೇ? ಈ ಕೆಲವು ವಿಷಯಗಳನ್ನು ತಿಳಿಯಲೇಬೇಕು

Health Tips: ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದ್ರೆ ಸಿಗುವ ಪ್ರಯೋಜನಗಳೇನು ಗೊತ್ತಾ?

(Sleep deprivation attack to health check in kannada)

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ