AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep with Lights: ರಾತ್ರಿ ದೀಪ ಆರಿಸದೆಯೇ ಮಲಗುತ್ತೀರಾ? ಈ ಅಪಾಯ ತಪ್ಪಿದ್ದಲ್ಲ

ತಡರಾತ್ರಿ ಮಲಗುವಾಗ ದೀಪ ಆರಿಸದೆಯೇ ನಿದ್ರೆ ಮಾಡುವ ಅಭ್ಯಾಸ ನಿಮಗೂ ಇದೆಯೇ? ಸಾಮಾನ್ಯವಾಗಿ ಈ ಅಭ್ಯಾಸ ಸಹಜ ಎನಿಸಬಹುದು. ಆದರೆ ಹೊಸ ಅಧ್ಯಯನದ ಪ್ರಕಾರ ರಾತ್ರಿಯಲ್ಲಿ ದೀಪವನ್ನು ಆರಿಸದೆಯೇ, ಅಂದರೆ ಆನ್ ಮಾಡಿ ಮಲಗುವುದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದಿದೆ. ಅದರಲ್ಲಿಯೂ ಈ ಅಭ್ಯಾಸ ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಜೂನ್ 2024 ರಲ್ಲಿ ಪ್ರಕಟವಾದ ಈ ಅಧ್ಯಯನವು ನಿಮ್ಮ ನಿದ್ರೆಯ ಸಮಯದಲ್ಲಿ ಉರಿಯುವ ಲೈಟ್ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಬಹಿರಂಗಪಡಿಸಿದೆ.

Sleep with Lights: ರಾತ್ರಿ ದೀಪ ಆರಿಸದೆಯೇ ಮಲಗುತ್ತೀರಾ? ಈ ಅಪಾಯ ತಪ್ಪಿದ್ದಲ್ಲ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 06, 2024 | 9:48 AM

ತಡರಾತ್ರಿಯವರೆಗೆ ಅಧ್ಯಯನ ಅಥವಾ ಇನ್ನಿತರ ಕೆಲಸಗಳನ್ನು ಮಾಡುವವರು ತಮ್ಮ ಕೋಣೆಯಲ್ಲಿ ದೀಪಗಳನ್ನು ಯಾವಾಗಲೂ ಉರಿಸುತ್ತಾರೆ. ಇನ್ನು ಕೆಲವರು ರಾತ್ರಿ ಮಲಗುವಾಗಲೂ ಈ ದೀಪವನ್ನು ಆರಿಸದೆಯೇ ಮಲಗುತ್ತಾರೆ. ಸಾಮಾನ್ಯವಾಗಿ ಈ ಅಭ್ಯಾಸ ಸಹಜ ಎನಿಸಬಹುದು. ಆದರೆ ಹೊಸ ಅಧ್ಯಯನದ ಪ್ರಕಾರ ರಾತ್ರಿಯಲ್ಲಿ ದೀಪವನ್ನು ಆರಿಸದೆಯೇ, ಅಂದರೆ ಆನ್ ಮಾಡಿ ಮಲಗುವುದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದಿದೆ. ಅದರಲ್ಲಿಯೂ ಈ ಅಭ್ಯಾಸ ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಜೂನ್ 2024 ರಲ್ಲಿ ಪ್ರಕಟವಾದ ಈ ಅಧ್ಯಯನವು ನಿಮ್ಮ ನಿದ್ರೆಯ ಸಮಯದಲ್ಲಿ ಉರಿಯುವ ಲೈಟ್ ಮಧುಮೇಹದ ಅಪಾಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಬಹಿರಂಗಪಡಿಸಿದೆ.

ಆಸ್ಟ್ರೇಲಿಯಾದ ಫ್ಲಿಂಡರ್ಸ್ ವಿಶ್ವವಿದ್ಯಾಲಯದ ಸಂಶೋಧಕರು ಈ ಅಧ್ಯಯನವನ್ನು ನಡೆಸಿದ್ದು ಇದರ ಪ್ರಮುಖ ಲೇಖಕ, ಡಾ. ಆಂಡ್ರ್ಯೂ ಫಿಲಿಪ್ಸ್, ರಾತ್ರಿಯಲ್ಲಿ ಪ್ರಕಾಶಮಾನವಾದ ಬೆಳಕಿಗೆ ಒಡ್ಡಿಕೊಳ್ಳುವುದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ರಾತ್ರಿಯಲ್ಲಿ ಬೆಳಕಿಗೆ ಅತಿಯಾಗಿ ಒಡ್ಡಿಕೊಳ್ಳುವುದು ನಮ್ಮ ಸಿರ್ಕಾಡಿಯನ್ ಲಯವನ್ನು ಅಡ್ಡಿಪಡಿಸುತ್ತದೆ, ಇದರಿಂದ ಇನ್ಸುಲಿನ್ ಸ್ರವಿಸುವಿಕೆ ಮತ್ತು ಚಯಾಪಚಯ ಕ್ರಿಯೆಯ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂದು ಡಾ. ಆಂಡ್ರ್ಯೂ ಫಿಲಿಪ್ಸ್ ಹೇಳಿದ್ದಾರೆ. ಈ ಬದಲಾವಣೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ದೇಹದ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತವೆ, ಇದು ಅಂತಿಮವಾಗಿ ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: ವಯಸ್ಸಿಗೆ ತಕ್ಕಂತೆ ಮಕ್ಕಳು ಬೆಳೆಯುತ್ತಿಲ್ಲವೇ, ಆಹಾರದಲ್ಲಿ ಈ ಸಣ್ಣ ಬದಲಾವಣೆ ಮಾಡಿ

ಅಧ್ಯಯನದಿಂದ ಇದು ಬಹಿರಂಗಗೊಂಡಿದ್ದು ನಿದ್ರೆ ಮಾಡುವಾಗ ಸಾಧ್ಯವಾದಷ್ಟು ಸುತ್ತ ಮುತ್ತ ಕತ್ತಲು ಇರುವಂತೆ ನೋಡಿಕೊಳ್ಳಿ. ಇದರಿಂದ ಮಧುಮೇಹವನ್ನು ತಡೆಯಬಹುದು. ನಿಮ್ಮ ಹಾಸಿಗೆಯ ಬಳಿ ಅಥವಾ ಕೋಣೆಯ ಸುತ್ತಮುತ್ತ ಯಾವುದೇ ರೀತಿಯ ಬೆಳಕು ಇರದಂತೆ ನೋಡಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ