AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರಾಹೀನತೆ: ಮಧ್ಯರಾತ್ರಿಯಾದರೂ ನಿದ್ರೆ ಬರುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ, ತಕ್ಷಣವೇ ನಿದ್ದೆ ಬರುತ್ತದೆ

Sleeping disorder: ರಾತ್ರಿ ವೇಳೆ 7-8 ಗಂಟೆಗಳ ಕಾಲ ನಿದ್ರೆ ಮಾಡುವುದರಿಂದ ದಿನವಿಡೀ ಆಯಾಸವನ್ನು ಹೋಗಲಾಡಿಸಬಹುದು. ಆದರೆ ಹಲವು ಬಾರಿ ತಡರಾತ್ರಿವರೆಗೂ ನಿದ್ದೆಯೇ ಬರೋಲ್ಲ. ಅದರ ಭಾರದಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತವೆ.

ನಿದ್ರಾಹೀನತೆ: ಮಧ್ಯರಾತ್ರಿಯಾದರೂ ನಿದ್ರೆ ಬರುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ, ತಕ್ಷಣವೇ ನಿದ್ದೆ ಬರುತ್ತದೆ
ಮಧ್ಯರಾತ್ರಿಯಾದರೂ ನಿದ್ರೆ ಬರುತ್ತಿಲ್ಲವೇ?
Follow us
ಸಾಧು ಶ್ರೀನಾಥ್​
|

Updated on: Feb 23, 2023 | 7:53 AM

ರಾತ್ರಿ ವೇಳೆ 7-8 ಗಂಟೆಗಳ ಕಾಲ ನಿದ್ರೆ ಮಾಡುವುದರಿಂದ (Sleeping) ದಿನವಿಡೀ ಆಯಾಸವನ್ನು ಹೋಗಲಾಡಿಸಬಹುದು. ಆದರೆ ಹಲವು ಬಾರಿ ತಡರಾತ್ರಿವರೆಗೂ ನಿದ್ದೆಯೇ ಬರೋಲ್ಲ. ಅದರ ಭಾರದಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾಗುತ್ತವೆ. ರೋಗಗಳನ್ನು ದೂರವಿಡಲು.. ದಿನನಿತ್ಯದ ಕೆಲಸಗಳನ್ನು ಚೆನ್ನಾಗಿ ನಿರ್ವಹಿಸಲು ನಿದ್ರೆ ಬಹಳ ಮುಖ್ಯ. ರಾತ್ರಿ 7-8 ಗಂಟೆಗಳ ನಿದ್ದೆ ನಿಮ್ಮನ್ನು ದಿನವಿಡೀ ದಣಿಯದಂತೆ, ಆಹ್ಲಾದಕರವಾಗಿ ಇಟ್ಟಿರುತ್ತದೆ. ನಿದ್ದೆಯ ಕೊರತೆಯಿಂದ ಮನಸ್ಸು ಮತ್ತು ದೇಹಕ್ಕೆ ವಿಶ್ರಾಂತಿ ಸಿಗದೆ ಮರುದಿನ ಅವರು ಅಸಮಾಧಾನ, ಜಡತನ ಮತ್ತು ದಣಿವು ಕಾಣುತ್ತಾರೆ. ನಿದ್ರೆಯ ಕೊರತೆಯಿಂದಾಗಿ ಜನರು ಆಲಸ್ಯ, ದುರ್ಬಲತೆ, ನೀರಸ ಮತ್ತು ಮಾನಸಿಕ ಕ್ಷೋಭೆ, ಪ್ರಕ್ಷುಬ್ಧತೆಯನ್ನು ಅನುಭವಿಸುತ್ತಾರೆ (health).

ಇಂದಿನ ಜೀವನಶೈಲಿಯಲ್ಲಿ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಜನರ ಜೀವನದ ಪ್ರಮುಖ ಭಾಗವಾಗುತ್ತಿವೆ. ಇದರಿಂದ ಜನರ ಒಟ್ಟಾರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ತಡರಾತ್ರಿಯಲ್ಲಿ ನಿದ್ರೆಯಿಂದ ಎಚ್ಚರಗೊಳ್ಳುವ ಸಮಸ್ಯೆ ಇರುವವರು ಕೆಲವು ಮನೆಮದ್ದುಗಳ (home remedies) ಸಹಾಯವನ್ನು ತೆಗೆದುಕೊಳ್ಳಬಹುದು. ಉತ್ತಮ ನಿದ್ರೆ ಪಡೆಯಲು ಆಯುರ್ವೇದದಲ್ಲಿ ಔಷಧಗಳು, ಮಸಾಲೆಗಳು, ಮನೆಮದ್ದುಗಳು, ರೀತಿರಿವಾಜುಗಳು ಇವೆ.

Also Read:

Sleeping Pills Side Effects: ನಿದ್ರೆ ಮಾತ್ರೆ ಸೇವನೆಗೆ ದಾಸನಾಗುವುದು ಒಳ್ಳೆಯದಾ? 

ಮಸಾಜ್

ರಾತ್ರಿ ಸರಿಯಾಗಿ ನಿದ್ದೆ ಬಾರದಿದ್ದರೆ ಮಲಗುವ ಮುನ್ನ ಸಾಸಿವೆ ಎಣ್ಣೆಯಿಂದ ಪಾದಗಳಿಗೆ ಮಸಾಜ್ ಮಾಡಿಸಿಕೊಳ್ಳಿ. ಅಡಿ ಭಾಗಕ್ಕೆ ಮಸಾಜ್ ಮಾಡುವುದರಿಂದ ಒತ್ತಡ ನಿವಾರಣೆಯಾಗುತ್ತದೆ. ಮನಸ್ಸು ನಿರಾಳವಾಗುತ್ತದೆ. ಇದು ಉತ್ತಮ ನಿದ್ರೆಗೆ ಕಾರಣವಾಗುತ್ತದೆ.

ಅಶ್ವಗಂಧ

ಅಶ್ವಗಂಧವು ನಿಮಗೆ ಚೆನ್ನಾಗಿ ನಿದ್ದೆ ಮಾಡಲು ಸಹಾಯ ಮಾಡುತ್ತದೆ. ಒತ್ತಡವನ್ನು ಕಡಿಮೆ ಮಾಡಲು ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಹಾಲಿನಲ್ಲಿ ಅಶ್ವಗಂಧದ ಪುಡಿಯನ್ನು ಮಿಶ್ರಣ ಮಾಡಿ. ಇದರೊಂದಿಗೆ, ನೀವು ಬೇಗನೆ ಉತ್ತಮ ನಿದ್ರೆ ಪಡೆಯಬಹುದು.

ಹಾಲು ಮತ್ತು ಜೇನುತುಪ್ಪ

ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಹಾಲನ್ನು ಕುಡಿಯುವುದರಿಂದ ಮನಸ್ಸು ನಿರಾಳವಾಗುತ್ತದೆ ಮತ್ತು ಒಳ್ಳೆಯ ನಿದ್ದೆಯೂ ಬರುತ್ತದೆ. ವಿಪರೀತ ಆಯಾಸದಿಂದ ನಿದ್ದೆ ಮಾಡಲು ಸಾಧ್ಯವಾಗದವರು ಬೆಚ್ಚಗಿನ ಹಾಲನ್ನು ಅರ್ಧ ಚಮಚ ಜೇನುತುಪ್ಪದೊಂದಿಗೆ ಬೆರೆಸಿ ಕುಡಿಯಬೇಕು. ಜೇನುತುಪ್ಪದೊಂದಿಗೆ ಹಾಲು ಕುಡಿಯುವುದರಿಂದ ನಿದ್ರಾಹೀನತೆಯ ಸಮಸ್ಯೆಯನ್ನು ಪರಿಹರಿಸುತ್ತದೆ.

ಶ್ಯಾವಂತಿಗೆ (ಸೇವಂತಿಗೆ) ಚಹಾ

ಶ್ಯಾವಂತಿಗೆ ಹೂವು ಮನಸ್ಸನ್ನು ವಿಶ್ರಾಂತಿ ಮಾಡಲು ಉತ್ತಮವೆಂದು ಪರಿಗಣಿಸಲಾಗಿದೆ. ಇದು ಕ್ಯಾಮೊಮೈಲ್ ಎಪಿಜೆನಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಇದು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!