AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleeping Pills Side Effects: ನಿತ್ಯ ನಿದ್ರೆ ಮಾತ್ರೆ ತಗೊಳ್ತಾ ಇದ್ರೆ ಜಾಗರೂಕರಾಗಿರಿ, ಈ ಅಭ್ಯಾಸ ನಿಮಗೆ ಮಾರಕವಾಗಬಹುದು

ಬಹಳಷ್ಟು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೊಂದಿರುತ್ತಾರೆ, ಕೆಲವರು ದೇಹದ ನೋವನ್ನು ಮರೆಯಲು ನಿದ್ರೆ ಮಾತ್ರೆ(Sleeping Pills) ಸೇವಿಸುತ್ತಾರೆ, ಇನ್ನೂ ಕೆಲವರು ಮನಸ್ಸಿಗಾಗಿರುವ ನೋವನ್ನು ಮರೆಯಲು.

Sleeping Pills Side Effects: ನಿತ್ಯ ನಿದ್ರೆ ಮಾತ್ರೆ ತಗೊಳ್ತಾ ಇದ್ರೆ ಜಾಗರೂಕರಾಗಿರಿ, ಈ ಅಭ್ಯಾಸ ನಿಮಗೆ ಮಾರಕವಾಗಬಹುದು
ನಿದ್ರೆ ಮಾತ್ರೆImage Credit source: Everyday Health
ನಯನಾ ರಾಜೀವ್
|

Updated on: Mar 13, 2023 | 12:48 PM

Share

ಬಹಳಷ್ಟು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೊಂದಿರುತ್ತಾರೆ, ಕೆಲವರು ದೇಹದ ನೋವನ್ನು ಮರೆಯಲು ನಿದ್ರೆ ಮಾತ್ರೆ(Sleeping Pills) ಸೇವಿಸುತ್ತಾರೆ, ಇನ್ನೂ ಕೆಲವರು ಮನಸ್ಸಿಗಾಗಿರುವ ನೋವನ್ನು ಮರೆಯಲು. ಆದರೆ ಕಾರಣ ಏನೇ ಇರಲಿ ಅದರಿಂದಾಗುವ ಅಡ್ಡ ಪರಿಣಾಮಗಳು ಮಾತ್ರ ಒಂದೇ ಆಗಿರುತ್ತದೆ. ನಿಮಗೂ ನಿತ್ಯ ನಿದ್ರೆ ಮಾತ್ರೆಯನ್ನು ನುಂಗುವ ಅಭ್ಯಾಸವಿದ್ದರೆ ಜಾಗರೂಕರಾಗಿರಿ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದರಿಂದ ಜನರು ಹಲವಾರು ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜೀವನಶೈಲಿ ಮತ್ತು ಹೆಚ್ಚುತ್ತಿರುವ ಕೆಲಸದ ಹೊರೆಯಿಂದಾಗಿ, ಜನರ ನಿದ್ರೆಯ ಚಕ್ರದ ಮೇಲೂ ಕೂಡ ಪರಿಣಾಮ ಬೀರುತ್ತಿದೆ. ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆಯ ಸಮಸ್ಯೆ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಸಮಸ್ಯೆಯನ್ನು ಹೋಗಲಾಡಿಸಲು, ಹೆಚ್ಚಿನ ಜನರು ನಿದ್ರೆ ಮಾತ್ರೆಗಳನ್ನು ಬಳಸಲು ಆರಂಭಿಸಿದ್ದಾರೆ.

ನಿದ್ರೆ ಮಾತ್ರೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅಡ್ಡಪರಿಣಾಮಗಳ ಬಗ್ಗೆ ತಿಳಿಯೋಣ.

ಕೋಮಾಗೂ ಹೋಗಬಹುದು ನೀವು ಪ್ರತಿದಿನ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸುತ್ತಿದ್ದರೆ, ನೀವು ಕೋಮಾಗೂ ಹೋಗಬಹುದು. ವಾಸ್ತವವಾಗಿ, ಹೆಚ್ಚು ಮಾತ್ರೆಗಳನ್ನು ನಿರಂತರವಾಗಿ ತೆಗೆದುಕೊಳ್ಳುವುದು ಕೋಮಾಗೆ ಹೋಗುವ ಅಪಾಯವನ್ನು ಹೆಚ್ಚಿಸುತ್ತದೆ.

ನಿಮ್ಮ ನೆನಪಿನ ಶಕ್ತಿ ದುರ್ಬಲವಾಗುವುದು ನಿದ್ರೆ ಮಾತ್ರೆಗಳನ್ನು ದೀರ್ಘಕಾಲದವರೆಗೆ ಸೇವಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಅನೇಕ ರೀತಿಯ ಹಾನಿ ಉಂಟಾಗುತ್ತದೆ. ವಾಸ್ತವವಾಗಿ, ಪ್ರತಿದಿನ ಮಲಗುವ ಮುನ್ನ ಮಾತ್ರೆಗಳನ್ನು ತಿನ್ನುವುದು ನಿಮ್ಮ ಮೆದುಳಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಇದರಿಂದಾಗಿ ನಿಮ್ಮ ನೆನಪಿನ ಶಕ್ತಿ ದುರ್ಬಲವಾಗಬಹುದು.

ಮತ್ತಷ್ಟು ಓದಿ: Rice Water: ಅಕ್ಕಿ ತೊಳೆದ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

ರಕ್ತ ಹೆಪ್ಪುಗಟ್ಟುವಿಕೆ ನಿದ್ರೆ ಮಾತ್ರೆಗಳ ನಿರಂತರ ಸೇವನೆಯು ನಿಮ್ಮ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ. ನೀವು ನಿಯಮಿತವಾಗಿ ಮಲಗುವ ಮಾತ್ರೆಗಳನ್ನು ಸೇವಿಸುತ್ತಿದ್ದರೆ, ಇದರಿಂದ ನಿಮ್ಮ ನರಮಂಡಲವು ದುರ್ಬಲವಾಗಬಹುದು, ಇದು ನರಮಂಡಲದ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ಇದರಿಂದಾಗಿ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಕೂಡ ಉಂಟಾಗಬಹುದು.

ಉಸಿರಾಟದ ತೊಂದರೆಗಳು ನಿದ್ದೆ ಮಾಡುವಾಗ ಗೊರಕೆ ಹೊಡೆಯುವ ಅಭ್ಯಾಸ ಹೊಂದಿರುವ ಜನರಿಗೆ ನಿದ್ರೆ ಮಾತ್ರೆಗಳ ಸೇವನೆಯು ತುಂಬಾ ಹಾನಿಕಾರಕವಾಗಿದೆ. ವಾಸ್ತವವಾಗಿ, ನೀವು ನಿದ್ರೆ ಮಾತ್ರೆಗಳನ್ನು ಸೇವಿಸಿದರೆ, ಅದು ಕೆಲವೊಮ್ಮೆ ಗೊರಕೆಯ ನಡುವೆ ಉಸಿರಾಟವನ್ನು ನಿಲ್ಲಿಸುತ್ತದೆ, ಅದು ನಿಮಗೆ ಮಾರಕವಾಗಬಹುದು.

ಹೃದಯ ಅಪಾಯ ನಿದ್ರೆ ಮಾತ್ರೆಯ ನಿರಂತರ ಸೇವನೆಯಿಂದಾಗಿ, ಹೃದಯಾಘಾತದ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ನಿದ್ರೆ ಮಾತ್ರೆಗಳಲ್ಲಿ ಇರುವ ಝೋಪಿಡೆಮ್ ಎಂಬ ಅಂಶವು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು. ಅಲ್ಲದೆ, ಈ ಔಷಧಿಗಳ ಕಾರಣದಿಂದಾಗಿ, ಹೃದಯದ ಕಾರ್ಯನಿರ್ವಹಣೆಯ ಸಾಮರ್ಥ್ಯವೂ ಸಹ ಪರಿಣಾಮ ಬೀರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?