Health Tips: ಕಾಕಮಾಚಿ-ಕಾಗೆ ಸೊಪ್ಪಿನ ಗುಣಗಳನ್ನು ತಿಳಿದರೆ ಮನೆಯಲ್ಲೇ ಗಿಡ ಬೆಳೆಸುವುದಂತೂ ಸತ್ಯ

ಸಾಮಾನ್ಯವಾಗಿ ಕೆಂಪು ಅಥವಾ ಕಪ್ಪು ಬಣ್ಣಗಳಲ್ಲಿ ಕಾಕೆ ಹಣ್ಣುಗಳನ್ನು ಕಾಣಬಹುದು. ಈ ಹಣ್ಣು ಸಿಹಿ ಮತ್ತು ಹುಳಿಯಿಂದ ಕೂಡಿರುತ್ತದೆ. ಇವುಗಳಲ್ಲಿ ಕೆಂಪು ಹಣ್ಣು ಬಿಡುವ ಸಸ್ಯ ಔಷಧಿ ಸಸ್ಯವಾಗಿದೆ.

Health Tips: ಕಾಕಮಾಚಿ-ಕಾಗೆ ಸೊಪ್ಪಿನ ಗುಣಗಳನ್ನು ತಿಳಿದರೆ ಮನೆಯಲ್ಲೇ ಗಿಡ ಬೆಳೆಸುವುದಂತೂ ಸತ್ಯ
ಕಾಕಮಾಚಿ-ಕಾಗೆ ಗಿಡ
Follow us
| Updated By: ಆಯೇಷಾ ಬಾನು

Updated on: May 31, 2021 | 6:52 AM

ಕಾಕಮಾಚಿ-ಕಾಗೆ ಸೊಪ್ಪು, ಅಥವಾ ಕಾಕಿ ಹಣ್ಣಿನ ಹೆಸರನ್ನು ಕೇಳಿಯೇ ಇರುತ್ತೀರಿ. ಚಿಕ್ಕ ಗಿಡ. ಗಿಡದ ತುಂಬ ಕಪ್ಪು ಬಣ್ಣದ ಹಣ್ಣುಗಳು. ಸಾಮಾನ್ಯವಾಗಿ ಮಲೆನಾಡಿನ ಕಡೆ ಹೆಚ್ಚು ಕಂಡುಬರುವ ಸಸ್ಯವಿದು. ಕೆಲವು ಕಡೆ ಸಾಮಾನ್ಯವಾಗಿ ಕಂಡು ಬಂದರೆ ಇನ್ನು ಕೆಲವೆಡೆ ಸಾಗುವಳಿಯಾಗಿ ಬೆಳೆಯುತ್ತಾರೆ. ಹಾಗಾದರೆ ಕಾಗೆ ಸೊಪ್ಪು ಅಥವಾ ಕಾಕಿ ಹಣ್ಣಿನ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಸಾಮಾನ್ಯವಾಗಿ ಕೆಂಪು ಅಥವಾ ಕಪ್ಪು ಬಣ್ಣಗಳಲ್ಲಿ ಕಾಕೆ ಹಣ್ಣುಗಳನ್ನು ಕಾಣಬಹುದು. ಈ ಹಣ್ಣು ಸಿಹಿ ಮತ್ತು ಹುಳಿಯಿಂದ ಕೂಡಿರುತ್ತದೆ. ಇವುಗಳಲ್ಲಿ ಕೆಂಪು ಹಣ್ಣು ಬಿಡುವ ಸಸ್ಯ ಔಷಧಿ ಸಸ್ಯವಾಗಿದೆ. ಈ ಸಸ್ಯದ ಎಲೆ ಮತ್ತು ಕಾಂಡವನ್ನು ಅಡುಗೆ ತಯಾರಿಸಲು ಬಳಸುತ್ತಾರೆ. ವಿಟಮಿನ್​ ಸಿ ಮತ್ತು ಬಿ ಅಂಶವನ್ನು ಹೊಂದಿರುವ ಈ ಸಸ್ಯ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಾಯಕ.

ಕಫ ಕರಗಿಸುತ್ತದೆ ಶೀತ, ಕಫ, ಜ್ವರಗಳಂತಹ ಸಮಸ್ಯೆಗಳು ಕಾಡುವುದು ಸಾಮಾನ್ಯ. ಕಫವನ್ನು ಕರಗಿಸಲು ಈ ಸಸ್ಯ ಸಹಾಯ ಮಾಡುತ್ತದೆ. ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇದ್ದಾಗ ಸಸ್ಯದ ಎಲೆಗಳಿಂದ ತಂಬುಳಿ ಮಾಡಿ ಊಟದ ಜತೆ ಸೇವಿಸಲಾಗುತ್ತದೆ. ಇದರಿಂದ ಸಾಮಾನ್ಯ ಶೀತ, ಜ್ವರ ಮತ್ತು ಕಫದಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ದೇಹದ ಸದೃಢತೆಯನ್ನು ಹೆಚ್ಚಿಸಿಕೊಳ್ಳಬಹುದು.

ತುರಿಕೆಯಿದ ಮುಕ್ತಿ ತುರಿಕೆ ಎಲೆಯನ್ನು ತಾಗಿಸಿಕೊಂಡಾಗ ಅಥವಾ ದೇಹದಲ್ಲಿನ ಧೂಳು ಕಣಗಳಿಂದ ತುರಿಕೆ ಆಗುತ್ತಿರುತ್ತದೆ. ಕೆಲವರಿಗೆ ಅದು ಕಜ್ಜಿಯಾಗಿ ಪಡಿಣಮಿಸುತ್ತದೆ. ಕಾಗೆ ಸೊಪ್ಪಿನ ಎಲೆಗಳನ್ನು ಕೊಯ್ದು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಕುದಿಸಿ. ಆ ಬಿಸಿ ಎಣ್ಣೆಯನ್ನು ತುರಿಕೆಯಾದ ಜಾಗದಲ್ಲಿ ಅಥವಾ ಕಜ್ಜಿಯಾದ ಜಾಗದಲ್ಲಿ ಹಚ್ಚಿದರೆ ಕೆಲವೇ ಸಮಯಗಳೊಳಗೆ ತುರಿಕೆ ನಾಶವಾಗುತ್ತದೆ. ದೇಹದಲ್ಲಿನ ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ.

ರಕ್ತಸ್ರಾವ ಕಡಿಯಾಗುತ್ತದೆ ದೇಹದ ಉಷ್ಟಾಂಶದ ತೀವ್ರತೆಯಿಂದಾಗಿ ಕೆಲವರಿಗೆ ಮೂಗಿನಲ್ಲಿ ಆಗಾಗ ರಕ್ತಸ್ರಾವ ಆಗುವುದನ್ನು ಕಾಣಬಹುದು. ಹೀಗಿರುವಾಗ ಕಾಕಿ ಸೊಪ್ಪಿನ ಸೇವನೆಯಿಂದ ಕಡಿಮೆ ಮಾಡಿಕೊಳ್ಳಬಹುದು. ಸೊಪ್ಪಿಗೆ ಜೇನುತುಪ್ಪ ಬೆರೆಸಿ ಸೇವನೆ ಮಾಡುವುದರಿಂದ ರಕ್ತದ್ರಾವ ಕಡಿಮೆಯಾಗುತ್ತದೆ. ಹಾಗೆಯೇ ಉರಿಮೂತ್ರ, ಮಲಬದ್ಧತೆ ಹಾಗೂ ಮೂಲವ್ಯಾಧಿಯಂತಹ ಸಮಸ್ಯೆಗೆ ಕಾಕಿ ಸೊಪ್ಪಿನ ಪಲ್ಯ ಮಾಡಿ ಸೇವನೆ ಮಾಡುತ್ತಾರೆ.

ಇದನ್ನೂ ಓದಿ: 

ಸಾವಯವ ಕೃಷಿ ಮೂಲಕ ಸೊಪ್ಪು ಬೆಳೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ದಾವಣಗೆರೆ ರೈತ; ಸುಡು ಬಿಸಿಲಿನಲ್ಲಿ ಸೊಪ್ಪಿನ ಸಂತೆ

Vegetable cultivation ಸೊಪ್ಪು ತರಕಾರಿ ಬೆಳೆಯಲ್ಲಿಯೇ ಯಶಸ್ಸು ಕಂಡು ಬದುಕು ಹಸನಾಗಿಸಿಕೊಂಡ ಬೀದರ್ ಜಿಲ್ಲೆಯ ರೈತರು

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ