AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿದ ದೇಹದ ತೂಕ ಹೆಚ್ಚಾಗದಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ಪರಿಹಾರ

Weight Loss: ಸ್ವಲ್ಪ ದೇಹದ ತೂಕ ಇಳಿಯಿತು ಎಂದರೆ ಮೊದಲ ಚಾಳಿ ಮುಂದುವರೆಯುತ್ತದೆ. ಹೀಗೆ ಮಾಡುವುದರಿಂದ ದೇಹದ ತೂಕ ಮತ್ತೆ ಹೆಚ್ಚಾಗುತ್ತದೆ.

ಇಳಿದ ದೇಹದ ತೂಕ ಹೆಚ್ಚಾಗದಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ಪರಿಹಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 24, 2021 | 11:03 AM

Share

ಹೊಟ್ಟೆ ತುಂಬಾ ತಿನ್ನಬೇಕು ಅನಿಸುತ್ತೆ. ಆದರೆ ದಪ್ಪ ಆಗುತ್ತೀವಿ ಅನ್ನೊ ಭಯ ಅಲ್ವಾ? ಹೊಟ್ಟೆ ತುಂಬಾ ತಿಂದ ತಕ್ಷಣ ದಪ್ಪ ಆಗಲ್ಲ. ಆದ್ರೆ ಯಾವ ಆಹಾರ ತಿನ್ನುತ್ತೀವಿ ಅನ್ನೋದು ಮುಖ್ಯ ಆಗುತ್ತೆ. ವಿಪರೀತ ದಪ್ಪ ಸೌಂದರ್ಯವನ್ನು ಕಡಿಮೆ ಮಾಡುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ಸಣ್ಣ ಆಗಲು ನಾನಾ ರೀತಿಯ ಸರ್ಕಸ್ ನಡೆಸುತ್ತಾರೆ. ಸ್ವಲ್ಪ ದೇಹದ ತೂಕ ಇಳಿಯಿತು ಎಂದರೆ ಮೊದಲ ಚಾಳಿ ಮುಂದುವರೆಯುತ್ತದೆ. ಹೀಗೆ ಮಾಡುವುದರಿಂದ ದೇಹದ ತೂಕ ಮತ್ತೆ ಹೆಚ್ಚಾಗುತ್ತದೆ. ಹಾಗಾದರೆ ಇಳಿಸಿದ ದೇಹದ ತೂಕ ಮತ್ತೆ ಹೆಚ್ಚಾಗದಂತೆ ನೋಡಿಕೊಳ್ಳುವುದು ಹೇಗೆ? ಚಿಂತೆ ಬಿಡಿ. ಅದಕ್ಕೂ ಪರಿಹಾರವಿದೆ.

* ನಿರಂತರ ವ್ಯಾಯಾಮ ಹೇಗೋ ಕಷ್ಟಪಟ್ಟು ದೇಹದ ತೂಕ ಕಡಿಮೆಯಾಗಿರುತ್ತದೆ. ತೂಕ ಕಡಿಮೆಯಾಗುತ್ತಿದ್ದಂತೆ ಮತ್ತೆ ಹಳೇ ಅಭ್ಯಾಸ ಶುರುವಾಗುತ್ತದೆ. ಹೀಗೆ ಮಾಡುವುದು ಸರಿಯಲ್ಲ. ಹೀಗಾಗಿ ಪ್ರತಿದಿನ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಅಥವಾ ಸಂಜೆ ಕನಿಷ್ಠ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆ ಕಾಲ ವ್ಯಾಯಾಮ ಮಾಡಬೇಕು. ದೇಹದ ತೂಕ ಇಳಿಸಲು ಇರುವ ವ್ಯಾಯಾಮವನ್ನೇ ಮಾಡಿದರೆ ಸೂಕ್ತ.

* ಉತ್ತಮ ಆಹಾರ ಸೇವಿಸಿ ದೇಹದ ತೂಕ ಇಳಿಸುವವರು ಮತ್ತು ಇಳಿಸಿಕೊಂಡ ದೇಹದ ತೂಕವನ್ನು ಮೇಂಟೇನ್ ಮಾಡುವವರು ಉತ್ತಮ ಆಹಾರ ಸೇವಿಸಬೇಕು. ಜಂಕ್ ಫುಡ್ಗಳಿಂದ ಆದಷ್ಟೂ ದೂರವಿರಬೇಕು. ಊಟದ ತಟ್ಟೆಯಲ್ಲಿ ತರಕಾರಿ ಮತ್ತು ಹಣ್ಣಿನ ಪ್ರಮಾಣ ಜಾಸ್ತಿ ಇರಬೇಕು. ಮದ್ಯ ಮದ್ಯ ಹಸಿವಾದಗಲೆಲ್ಲ ಹಣ್ಣು ಅಥವಾ ಹಣ್ಣಿನ ರಸ ಸೇವಿಸಿ.

* ಹೆಚ್ಚು ನೀರು ಕುಡಿಯಿರಿ ಪ್ರತಿದಿನ ಮೂರರಿಂದ ನಾಲ್ಕು ಲೀಟರ್ ನೀರು ದೇಹಕ್ಕೆ ಅಗತ್ಯವಿದೆ. ಇನ್ನು ಡಯೇಟ್ ಮಾಡುವವರು ನೀರನ್ನ ಹೆಚ್ಚು ಕುಡಿಯಬೇಕು. ಊಟದ ಮೊದಲು ನೀರು ಕುಡಿದರೆ ಹೆಚ್ಚು ಊಟ ಸೇವಿಸುವ ಅಗತ್ಯವಿರಲ್ಲ. ಹೀಗಾಗಿ ಹಸಿವಾದಾಗಲೆಲ್ಲ ನೀರು ಕುಡಿಯುವ ಅಭ್ಯಾಸ ನಿರಂತರವಾಗಿರಬೇಕು.

* ಬೆಳಿಗ್ಗೆಯ ತಿಂಡಿ ಬಿಡಬಾರದು ಬೆಳಿಗ್ಗೆ ತಿಂಡಿ ಬಿಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಅಂತ ಹಲವರು ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು. ಬೆಳಿಗ್ಗೆ ತಿಂಡಿಯನ್ನು ಸ್ಕಿಪ್ ಮಾಡಬಾರದು. ರಾತ್ರಿ ಊಟ ಹಣ್ಣು ಅಥವಾ ತರಕಾರಿಯಿಂದ ಕೂಡಿರಲಿ. ಉಪಹಾರ ಸೇವಿಸದೆ ಇದ್ದಾಗ ದೇಹಕ್ಕೆ ಸುಸ್ತಾಗುತ್ತದೆ. ಕೆಲಸ ಮಾಡಲು ಮನಸ್ಸು ಇರಲ್ಲ. ಅಲ್ಲದೇ ಗ್ಯಾಸ್ಟ್ರಿಕ್ಗೆ ಕಾರಣವಾಗುತ್ತದೆ.

ಇದನ್ನೂ ಓದಿ

Beauty Tips: ಮಾಸ್ಕ್ ಧರಿಸಿದಾಗಲೂ ಲಿಪ್​ ಸ್ಟಿಕ್​ ಹೆಚ್ಚು ಕಾಲ ಉಳಿಯಲು ಹೀಗೆ ಮಾಡಿ

Relationship Tips: ನಿಮ್ಮ ಸಂಗಾತಿಯೊಂದಿಗೆ ಆಗಾಗ ಮನಸ್ತಾಪವಾಗುತ್ತಿದೆಯೇ? ಇಲ್ಲಿದೆ ಅದಕ್ಕೆ ಪರಿಹಾರ

Published On - 8:00 am, Fri, 24 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?