AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವಿಸುವ ಕೆಲವು ಆಹಾರಗಳು ಒತ್ತಡ ಹೆಚ್ಚಾಗಲು ಕಾರಣವಾಗಬಹುದು: ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ

ಸಮತೋಲಿತ ಆಹಾರವು ದೇಹದಾರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಆರೋಗ್ಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಆದರೆ ಕೆಲವೊಂದು ಆಹಾರ ಸೇವನೆಯು ನಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಇದು ಸಹಜವಾಗಿ ಒತ್ತಡ ಹೆಚ್ಚಾಗಲು ಕಾರಣವಾಗಬಹುದು. ಆ ಆಹಾರಗಳು ಯಾವುವು ಎಂಬುದನ್ನು ನೋಡೋಣ.

ಸೇವಿಸುವ ಕೆಲವು ಆಹಾರಗಳು ಒತ್ತಡ ಹೆಚ್ಚಾಗಲು ಕಾರಣವಾಗಬಹುದು: ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 04, 2023 | 6:08 AM

Share

ಅತಿಯಾದ ಅಲೋಚನೆ ಮತ್ತು ಕೆಲಸದ ಕಾರಣದಿಂದಾಗಿ ಅನೇಕ ಜನರು ಒತ್ತಡಕ್ಕೆ ಒಳಗಾಗುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ಆಹಾರ ಪದ್ಧತಿಯೂ ಕೂಡಾ ನಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿದಿದೆಯೇ? ಹೌದು ಕೆಲವೊಂದು ಆಹಾರಗಳು ನಮ್ಮ ಮಾನಸಿಕ ಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಒತ್ತಡ ಮತ್ತು ಖಿನ್ನತೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಸೇವಿಸುವ ಆಹಾರದ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು. ನೀವು ಪ್ರತಿದಿನ ಒತ್ತಡವನ್ನು ಅನುಭವಿಸುತ್ತಿದ್ದರೆ, ಇದಕ್ಕೆ ಕಾರಣ ನೀವು ಆಯ್ಕೆ ಮಾಡಿರುವ ಆಹಾರ ಪದ್ಧತಿಯಾಗಿರಬಹುದು. ಅಸಮತೋಲಿತ ಆಹಾರ ಪದಾರ್ಥಗಳನ್ನು ತಿನ್ನುವುದರಿಂದ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಆದ್ದರಿಂದ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಯಸಿದರೆ, ಕೆಲವೊಂದು ಆಹಾರಗಳಿಂದ ನೀವು ಆದಷ್ಟು ದೂರವಿರಬೇಕು. ಏಕೆಂದರೆ ಇಂತಹ ಆಹಾರಗಳು ಮೆದುಳಿನಲ್ಲಿ ಒತ್ತಡವನ್ನು ಹೆಚ್ಚಿಸಲು ಕಾರಣವಾಗಬಹುದು. ಯಾವ ಪದಾರ್ಥಗಳನ್ನು ತಿನ್ನುವುದರಿಂದ ಒತ್ತಡ ಹೆಚ್ಚಾಗುತ್ತದೆ ಎಂಬುದನ್ನು ನೋಡೋಣ.

ಒತ್ತಡ ಹೆಚ್ಚಾಗಲು ಕಾರಣ ಈ ಆಹಾರಗಳು:

ಸಿಹಿ ಪದಾರ್ಥಗಳು:

ಹೆಚ್ಚಿನ ಜನರು ಸಿಹಿ ಪದಾರ್ಥಗಳನ್ನು ತಿನ್ನಲು ಇಷ್ಟಪಡುತ್ತಾರೆ. ಪೇಸ್ಟ್ರಿ ಕೇಕ್, ಚಾಕೊಲೇಟ್ ಗಳಂತಹ ಸಿಹಿ ತಿನಿಸುಗಳನ್ನು ಸೇವಿಸಿದಾಗ ಅದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿದರೂ ಸಹ, ಇವುಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಏರಿಳಿತಕ್ಕೆ ಕಾರಣವಾಗುತ್ತದೆ. ರಕ್ತದಲ್ಲಿ ಸಕ್ಕರೆಯ ಮಟ್ಟದಲ್ಲಿ ಅತಿಯಾದ ಇಳಿಕೆ ಅಥವಾ ಅತಿಯಾದ ಹೆಚ್ಚಳವು ಮೆದುಳಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಮತ್ತು ಇದರಿಂದ ಒತ್ತಡವು ಹೆಚ್ಚುತ್ತದೆ.

ಕಾಫಿ ಮತ್ತು ಚಹಾ:

ಜನರು ಸಾಮಾನ್ಯವಾಗಿ ತಾಜಾತನವನ್ನು ಅನುಭವಿಸಲು ಚಹಾ ಅಥವಾ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ಆದರೆ ನೀವು ಎರಡರಿಂದ ಮೂರು ಕಪ್ ಗಳಿಗಿಂತ ಹೆಚ್ಚು ಕಾಫಿ ಕುಡಿದರೆ ಅದು ಹೃದಯದ ಬಡಿತ ಮತ್ತು ಬಿಪಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಕಾಫಿಯಲ್ಲಿನ ಕೆಫೀನ್ ಅಂಶ ವಾಸ್ತವವಾಗಿ ಒತ್ತಡವನ್ನು ಉಂಟುಮಾಡಲು ಕಾರಣವಾಗುತ್ತದೆ. ಹೆಚ್ಚಿನ ಪ್ರಮಾಣದ ಕೆಫೀನ್ ಸೇವನೆಯು ದೇಹದಲ್ಲಿನ ನಿರ್ಜಲೀಕರಣಕ್ಕೆ ಕಾರಣವಾಗಬಹುದು, ಇದು ನಿಮ್ಮ ಹೃದಯದ ಬಡಿತವನ್ನು ವೇಗಮಾಡುತ್ತದೆ. ಇದರಿಂದಾಗಿ ಸಹಜವಾಗಿ ಒತ್ತಡ ಮತ್ತು ಆತಂಕ ಹೆಚ್ಚಾಗಲು ಕಾರಣವಾಗುತ್ತದೆ.

ಇದನ್ನೂ ಓದಿ: ಊಟದ ಬಳಿಕ ಹೊಟ್ಟೆ ಉಬ್ಬರದ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಈ ಸಮಸ್ಯೆಗೆ ಇಂದೇ ವಿದಾಯ ಹೇಳಿ

ಮೈದಾ:

ಮೈದಾ ಒಂದು ರೀತಿಯ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ ಆಹಾರವಾಗಿದೆ. ಮೈದಾ ಹಿಟ್ಟಿನಲ್ಲಿ ತಯಾರಿಸಿದ ಆಹಾರಗಳನ್ನು ಅತಿಯಾಗಿ ತಿನ್ನುವುದರಿಂದ ದೇಹದಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದರಿಂದಾಗಿ ದೇಹದಲ್ಲಿ ಒತ್ತಡದ ಮಟ್ಟ ಹೆಚ್ಚಾಗುತ್ತದೆ.

ಎಣ್ಣೆಯುಕ್ತ ಆಹಾರಗಳು:

ಎಣ್ಣೆಯಲ್ಲಿ ಕರಿದ ಆಹಾರಗಳು ಒತ್ತಡ ಮತ್ತು ಖಿನ್ನತೆಯ ಮಟ್ಟವನ್ನು ಹೆಚ್ಚಿಸುತ್ತದೆ. ಎಣ್ಣೆಯಲ್ಲಿ ಕರಿದ ಚಿಪ್ಸ್, ಪಿಜ್ಜಾ, ಬರ್ಗರ್ ಇತ್ಯಾದಿಗಳನ್ನು ಸೇವಿಸಬಾರದು. ಏಕೆಂದರೆ ಅವು ಹೆಚ್ಚಿನ ಪ್ರಮಾಣದ ಟ್ರಾನ್ಸ್ ಫ್ಯಾಟ್ ನ್ನು ಹೊಂದಿರುತ್ತದೆ. ಈ ಕೊಬ್ಬು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ. ಇದರಿಂದಾಗಿ ನೀವು ಒತ್ತಡ ಮತ್ತು ಆತಂಕವನ್ನು ಎದುರಿಸಬೇಕಾಗುತ್ತದೆ.

ಕೃತಕ ಸಿಹಿಕಾರಕಗಳು:

ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಸಕ್ಕರೆಯ ಬದಲು ಕೃತಕ ಸಿಹಿಕಾರಕಗಳನ್ನು ಬಳಸುತ್ತಿದ್ದಾರೆ. ಆದರೆ ಇದು ಯಾವುದೇ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುವುದಿಲ್ಲ ಬದಲಾಗಿ ಕೃತಕ ಸಿಹಿಕಾರಕಗಳು ದೇಹದಲ್ಲಿ ಒತ್ತಡ ಮತ್ತು ಉರಿಯೂತದ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ