AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Oil Benefits: ಒಮ್ಮೊಮ್ಮೆ ತೆಂಗಿನೆಣ್ಣೆಯಿಂದಲೂ ಅಡುಗೆ ಮಾಡಿ, ಆರೋಗ್ಯ ಎಷ್ಟೊಂದು ಲಾಭ ಇದೆ ಗೊತ್ತೇ?

ನೀವು ಅಡುಗೆ ಎಣ್ಣೆಯನ್ನು ಆಯ್ಕೆ ಮಾಡಿಕೊಳ್ಳುವಾಗ ಯಾವಾಗಲೂ ನಿಮ್ಮ ಆರೋಗ್ಯ, ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಎಣ್ಣೆಯೇ ಬೇಕೆಂದು ಹುಡುಕುತ್ತೀರ. ನೀವು ಕೂಡ ಅದೇ ರೀತಿ ಯೋಚನೆ ಮಾಡುತ್ತಿದ್ದರೆ, ತೆಂಗಿನೆಣ್ಣೆಯು ಉತ್ತಮ ಆಯ್ಕೆಯಾಗಿದೆ.

Coconut Oil Benefits: ಒಮ್ಮೊಮ್ಮೆ ತೆಂಗಿನೆಣ್ಣೆಯಿಂದಲೂ ಅಡುಗೆ ಮಾಡಿ, ಆರೋಗ್ಯ ಎಷ್ಟೊಂದು ಲಾಭ ಇದೆ ಗೊತ್ತೇ?
Coconut Oil
Follow us
TV9 Web
| Updated By: ನಯನಾ ರಾಜೀವ್

Updated on: Nov 21, 2022 | 9:48 AM

ನೀವು ಅಡುಗೆ ಎಣ್ಣೆಯನ್ನು ಆಯ್ಕೆ ಮಾಡಿಕೊಳ್ಳುವಾಗ ಯಾವಾಗಲೂ ನಿಮ್ಮ ಆರೋಗ್ಯ, ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಎಣ್ಣೆಯೇ ಬೇಕೆಂದು ಹುಡುಕುತ್ತೀರ. ನೀವು ಕೂಡ ಅದೇ ರೀತಿ ಯೋಚನೆ ಮಾಡುತ್ತಿದ್ದರೆ, ತೆಂಗಿನೆಣ್ಣೆಯು ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಇದು ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮೆಗ್ನೀಷಿಯಂ, ವಿಟಮಿನ್ ಸಿ ಹಾಗೂ ಆಂಟಿಮೈಕ್ರೊಬಿಯಲ್ ಮತ್ತು ಆಂಟಿ ಆಕ್ಸಿಡೆಂಟ್​ಗಳನ್ನು ಹೊಂದಿರುತ್ತದೆ. ನಿಮ್ಮ ಆಂತರಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇವೆಲ್ಲವೂ ಅತ್ಯವಶ್ಯಕ.

ತೆಂಗಿನೆಣ್ಣೆ ಬಳಕೆಯಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ

1. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ ತೆಂಗಿನ ಎಣ್ಣೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಪೋಷಕಾಂಶಗಳು ನಿಮ್ಮ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ಅನುಕೂಲ ಮಾಡಿಕೊಡುತ್ತದೆ. 2009 ರಲ್ಲಿ ಅನಿಮಲ್ ಸ್ಟಡೀಸ್​ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ತೆಂಗಿನ ಎಣ್ಣೆಯಲ್ಲಿ ಕಂಡುಬರುವ ಸ್ಯಾಚುರೇಟೆಡ್ ಕೊಬ್ಬು ಇನ್ಸುಲಿನ್ ಹೆಚ್ಚಾಗುವುದನ್ನು ತಡೆಯುತ್ತದೆ. ಇದರಿಂದ ದೇಹದಲ್ಲಿ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ.

2. ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿ ತೆಂಗಿನೆಣ್ಣೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆ ಸಂಶೋಧನೆಯಲ್ಲಿ ಕಂಡುಹಿಡಿದಿದೆ, ಇದರಿಂದಾಗಿ ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರೊಂದಿಗೆ ತೆಂಗಿನ ಎಣ್ಣೆಯ ಪೋಷಕಾಂಶಗಳು ಖಿನ್ನತೆಯ ಸಮಸ್ಯೆಗೆ ಸಹಕಾರಿ ಎಂದು ಸಂಶೋಧನೆಯು ಕಂಡುಹಿಡಿದಿದೆ.

3. ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ತೆಂಗಿನ ಎಣ್ಣೆಯ ನಿಯಮಿತ ಸೇವನೆಯು ನಿಮ್ಮ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ತೆಂಗಿನಕಾಯಿಯಲ್ಲಿ ಕಂಡುಬರುವ ಸಂಯುಕ್ತ ಮಧ್ಯಮ ಸರಪಳಿ ಟ್ರೈಗ್ಲಿಸರೈಡ್‌ಗಳು (MCT) ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಪಬ್ ಮೆಡ್‌ಸೆಂಟ್ರಲ್‌ನ ಸಂಶೋಧನೆಯು ಕಂಡುಹಿಡಿದಿದೆ. ತೆಂಗಿನ ಎಣ್ಣೆಯನ್ನು 8 ವಾರಗಳ ಕಾಲ ಸೇವಿಸಿದರೆ, ಉತ್ತಮ ಫಲಿತಾಂಶವನ್ನು ಪಡೆಯಬಹುದು ಎಂದು ಸಂಶೋಧನೆಯು ಕಂಡುಹಿಡಿದಿದೆ.

4. ಯಕೃತ್ತಿನ ರೋಗವನ್ನು ತಡೆಯುತ್ತದೆ ಯಕೃತ್ತಿನ ಸಮಸ್ಯೆಗಳಿಗೆ ತೆಂಗಿನ ಎಣ್ಣೆ ಉತ್ತಮ ಆಯ್ಕೆಯಾಗಿದೆ. ವೈಲಿ ಆನ್‌ಲೈನ್ ಲೈಬ್ರರಿಯಿಂದ ಇಲಿಗಳ ಮೇಲೆ ನಡೆಸಿದ ಸಂಶೋಧನೆಯಲ್ಲಿ, ತೆಂಗಿನ ಎಣ್ಣೆಯನ್ನು ಸೇವಿಸಿದ ಇಲಿಗಳು 4 ವಾರಗಳಲ್ಲಿ ತಮ್ಮ ಯಕೃತ್ತಿನ ಆರೋಗ್ಯದಲ್ಲಿ ಉತ್ತಮ ಫಲಿತಾಂಶಗಳನ್ನು ಹೊಂದಿವೆ ಎಂದು ಕಂಡುಬಂದಿದೆ. ನೀವು ಯಾವುದೇ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ವೈದ್ಯರ ಸಲಹೆಯೊಂದಿಗೆ ನೀವು ನಿಯಮಿತವಾಗಿ ಸೇವಿಸಲು ಪ್ರಾರಂಭಿಸಬಹುದು.

5. ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಪ್ರಯೋಜನಕಾರಿ ತೆಂಗಿನ ಎಣ್ಣೆಯನ್ನು ದೀರ್ಘಕಾಲದವರೆಗೆ ಮನೆಮದ್ದುಗಳಿಗಾಗಿ ಬಳಸಲಾಗುತ್ತದೆ. ವಿಟಮಿನ್ ಸಿ ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳು ಇದರಲ್ಲಿ ಕಂಡುಬರುತ್ತವೆ. ಇದರಿಂದಾಗಿ ಇದು ಚರ್ಮ ಮತ್ತು ಕೂದಲನ್ನು ಬಾಹ್ಯವಾಗಿ ಸುಧಾರಿಸುತ್ತದೆ ಮತ್ತು ಆಂತರಿಕವಾಗಿ ಆರೋಗ್ಯಕರವಾಗಿರಿಸುತ್ತದೆ.

6. ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ನೀವು ತೂಕ ನಷ್ಟಕ್ಕೆ ಉತ್ತಮ ಅಡುಗೆ ಎಣ್ಣೆಯನ್ನು ಹುಡುಕುತ್ತಿದ್ದರೆ, ತೆಂಗಿನ ಎಣ್ಣೆಯು ಉತ್ತಮ ಆಯ್ಕೆಯಾಗಿದೆ. ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳ ಪ್ರಕಾರ, ತೆಂಗಿನ ಎಣ್ಣೆಯ ಸ್ಯಾಚುರೇಟೆಡ್ ಕೊಬ್ಬಿನ ಮಧ್ಯಮ ಸರಣಿ ಟ್ರೈಗ್ಲಿಸರೈಡ್‌ಗಳು (MCT) ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ನಿಮ್ಮ ಮುಂದಿನ ಊಟದಲ್ಲಿ ಕಡಿಮೆ ಕ್ಯಾಲೊರಿಗಳನ್ನು ಸೇವಿಸಲು ಸಹಾಯ ಮಾಡುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು