AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sore throat: ಗಂಟಲು ನೋವಿನಿಂದ ಬಳಲುತ್ತಿದ್ದೀರಾ? ನೋವು ಶಮನಕ್ಕೆ ಹೀಗೆ ಮಾಡಿ

throat pain: ಶೀತ ವಾತಾವರಣದ ಪ್ರಭಾವದಿಂದ ಸಾಮಾನ್ಯವಾಗಿ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಇದರಿಂದ ನೆಗಡಿ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ.

Sore throat: ಗಂಟಲು ನೋವಿನಿಂದ ಬಳಲುತ್ತಿದ್ದೀರಾ? ನೋವು ಶಮನಕ್ಕೆ ಹೀಗೆ ಮಾಡಿ
ಗಂಟಲು ನೋವಿಗೆ ಪರಿಹಾರ (ಫೋಟೋ: ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 09, 2023 | 6:01 AM

Share

ಶೀತ ವಾತಾವರಣದ ಪ್ರಭಾವದಿಂದ ಸಾಮಾನ್ಯವಾಗಿ ಗಂಟಲು ನೋವು (Sore throat) ಕಾಣಿಸಿಕೊಳ್ಳುತ್ತದೆ. ಇದರಿಂದ ನೆಗಡಿ, ಕೆಮ್ಮು, ಗಂಟಲು ನೋವು ಮುಂತಾದ ಸಮಸ್ಯೆಗಳು ಉದ್ಭವಿಸುತ್ತವೆ. ಗಂಟಲು ನೋಯುತ್ತಿರುವ ಮಾತನಾಡಲು ಮತ್ತು ತಿನ್ನಲು ಕಷ್ಟವಾಗುತ್ತದೆ. ನೀರು ಕುಡಿಯಲೂ ಕಷ್ಟಕರವಾಗುತ್ತದೆ. ಈ ಗಂಟಲು ನೋವು ಸಮಸ್ಯೆಯನ್ನು ತೊಡೆದುಹಾಕಲು ನಿಮಗೆ ಕೆಲವು ದಿನಗಳು ಬೇಕಾಗಬಹುದು. ಅಂತಹ ಸಮಯದಲ್ಲಿ ನೀವು ಭಯಪಡುವ ಅಗತ್ಯವಿಲ್ಲ. ಇದಕ್ಕಾಗಿ ಕೆಲವು ಮನೆಮದ್ದುಗಳು ಇದೆ. ಸಾಮಾನ್ಯವಾಗಿ ಗಂಟಲು ನೋವು ಉಂಟಾದಾಗ ಗಾರ್ಗ್ಲಿಂಗ್ ಮಾಡಲಾಗುತ್ತದೆ. ಈ ಪದ್ಧತಿ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಹೇಗೆ ಮಾಡಬೇಕೆಂದು ತಿಳಿಯೋಣ.

ಅರಿಶಿನ, ಉಪ್ಪು, ನೀರು: ಅರಿಶಿನವು ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಮಸಾಲೆಯಾಗಿದೆ. ಉಪ್ಪು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇವುಗಳು ಬ್ಯಾಕ್ಟೀರಿಯಾದ ಮೇಲೆ ಬಲವಾದ ದಾಳಿಯನ್ನು ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಉರಿಯೂತದ ಅಂಶವು ಉರಿಯೂತ ಮತ್ತು ಹುಣ್ಣುಗಳು ರೂಪುಗೊಳ್ಳುವುದನ್ನು ತಡೆಯುತ್ತದೆ. ನೀವು ಒಂದು ಲೋಟಕ್ಕೆ ಸ್ವಲ್ಪ ಅರಿಶಿನ, ಉಪ್ಪು ಮತ್ತು ನೀರು ಬೆರೆಸಿ ಮಿಕ್ಸ್ ಮಾಡಿ ಗಾರ್ಗ್ಲಿಂಗ್ ಮಾಡಬಹುದು.

ಇದನ್ನೂ ಓದಿ: Weight Loss Tips: ಒಂದು ವಾರದಲ್ಲಿ ಒಂದು ಕೆಜಿ ತೂಕ ಇಳಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ತ್ರಿಫಲ, ನೀರು: ತ್ರಿಫಲ ಒಂದು ಆಯುರ್ವೇದ ಮೂಲಿಕೆಯಾಗಿದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಅದಕ್ಕಾಗಿಯೇ ತ್ರಿಫಲವನ್ನು ನೀರಿನೊಂದಿಗೆ ಬೆರೆಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವಿನಿಂದ ಶೀಘ್ರ ಪರಿಹಾರ ಪಡೆಯಬಹುದು. ಅಲ್ಲದೆ, ಗಲಗ್ರಂಥಿಯ ಉರಿಯೂತದ ನೋವು ಬಂದರೂ ಇದು ಔಷಧಿಯಂತೆ ಕೆಲಸ ಮಾಡುತ್ತದೆ.

ತುಳಸಿ, ನೀರು: ತುಳಸಿ ಸಸ್ಯವು ಹೆಚ್ಚಿನ ಭಾರತೀಯ ಮನೆಗಳಲ್ಲಿ ಇರುತ್ತದೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ತುಳಸಿ ಎಲೆಗಳನ್ನು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಿದರೆ ಗಂಟಲು ನೋವಿಗೆ ಶೀಘ್ರ ಪರಿಹಾರ ಸಿಗುತ್ತದೆ. ವಾಸ್ತವವಾಗಿ, ಈ ಸಸ್ಯವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ.

(ಗಮನಿಸಬೇಕಾದ ಅಂಶ: ಮೇಲೆ ತಿಳಿಸಲಾದ ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಹೆಚ್ಚಿನ ಮಾಹಿತಿಯನ್ನು ತಜ್ಞರೊಂದಿಗೆ ಚರ್ಚಿಸಿ ಮುನ್ನಡೆಯಿರಿ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು