AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ 7-10 ತಾಸು ಮೊಬೈಲ್ ಬಳಸುವ ಯುವಕರನ್ನು ಕಾಡುತ್ತಿರುವ ಸಮಸ್ಯೆಗಳು

Smart Phone Use: ನೀವು ದಿನನಿತ್ಯ 7-10 ತಾಸುಗಳ ಕಾಲ ಸ್ಮಾರ್ಟ್​ಫೋನ್(SmartPhone) ಬಳಕೆ ಮಾಡುತ್ತಿದ್ದರೆ ನಿಮ್ಮ ಮಾನಸಿಕ ಆರೋಗ್ಯ( Mental Health) ಹದಗೆಡಬಹುದು ಎಂದು ಸಂಶೋಧನೆ ಹೇಳಿದೆ.

ನಿತ್ಯ 7-10 ತಾಸು ಮೊಬೈಲ್ ಬಳಸುವ ಯುವಕರನ್ನು ಕಾಡುತ್ತಿರುವ ಸಮಸ್ಯೆಗಳು
Smartphone
TV9 Web
| Edited By: |

Updated on:May 15, 2022 | 12:24 PM

Share

ನೀವು ದಿನನಿತ್ಯ 7-10 ತಾಸುಗಳ ಕಾಲ ಸ್ಮಾರ್ಟ್​ಫೋನ್(Smartphone) ಬಳಕೆ ಮಾಡುತ್ತಿದ್ದರೆ ನಿಮ್ಮ ಮಾನಸಿಕ ಆರೋಗ್ಯ( Mental Health) ಹದಗೆಡಬಹುದು ಎಂದು ಸಂಶೋಧನೆ ಹೇಳಿದೆ. ಸಾಫಿಯನ್ ಲ್ಯಾಬ್ ನೀಡಿರುವ ಮಾಹಿತಿ ಪ್ರಕಾರ ದಿನದಿಂದ ದಿನಕ್ಕೆ ಸ್ಮಾರ್ಟ್​ ಬಳಕೆ ಪ್ರಮಾಣ ಹೆಚ್ಚಾಗುತ್ತಿದೆ ಇದು 18-24 ವರ್ಷದೊಳಗಿನ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂಬುದು ತಿಳಿದುಬಂದಿದೆ. ವರದಿ ಪ್ರಕಾರ ಜನರು ನಿತ್ಯ 7-10ತಾಸುಗಳ ಕಾಲ ಮೊಬೈಲ್ ಬಳಕೆ ಮಾಡುತ್ತಿದ್ದಾರೆ, ಮಕ್ಕಳು ಕುಟುಂಬದವರ ಜತೆ ಕಾಲ ಕಳೆಯುವ ಪ್ರಮಾಣ ಕೂಡ ಕಡಿಮೆಯಾಗಿದೆ.

ಕೊರೊನಾ ಬಂದ ಬಳಿಕ ಪ್ರಾಥಮಿಕ ಶಾಲಾ ಹಂತದ ಮಕ್ಕಳು ಕೂಡ ಮೊಬೈಲ್ ಬಳಕೆ ಶುರು ಮಾಡಿದ್ದಾರೆ. ದಿನನಿತ್ಯದ ಜೀವನದಲ್ಲಿ ಮೊಬೈಲ್​ ಫೋನ್​ ಇಂದು ಅನಿವಾರ್ಯವಾಗಿದೆ. ದೂರದ ಸ್ನೇಹಿತರಿಗೆ, ಬಂಧುಗಳಿಗೆ ತುರ್ತು ಸುದ್ದಿ ಮುಟ್ಟಿಸಲು, ಸಂದೇಶ ತಲುಪಿಸಲು, ವ್ಯವಹಾರದ ಮಾತುಕತೆಗೆ ಮೊಬೈಲ್​ ಅವಶ್ಯಕ. ಆದರೆ ಅತಿಯಾದರೆ ಅಮೃತವು ವಿಷವೆನ್ನುವಂತೆ ಮೊಬೈಲ್​ ಎಷ್ಟು ಉಪಯುಕ್ತವೋ ಅಷ್ಟೇ ಅಪಾಯಕಾರಿ ಕೂಡ.

ಸ್ಮಾರ್ಟ್​ ಫೋನ್​ ಆರೋಗ್ಯದ ಮೇಲೆ ಉಂಟು ಮಾಡುವ ಪರಿಣಾಮ

ಬೆನ್ನು ಹುರಿಯ ಸಮಸ್ಯೆ: ಸಾಕಷ್ಟು ಮಂದಿ ಸ್ಮಾರ್ಟ್​ ಫೋನ್​ ಬಳಕೆದಾರರು ಬೆನ್ನು ಹುರಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ, 2015ರ ಮೊಬೈಲ್​ ಸಮೀಕ್ಷೆಯಂತೆ ಶೇ.45 ರಷ್ಷು ಮೊಬೈಲ್​ ಬಳಸುವ 16 ರಿಂದ 24 ವರ್ಷದ ಯುವಕರು ಬೆನ್ನು ಹುರಿಯ ನೋವಿನಿಂದ ಬಳಲುತ್ತಿದ್ದಾರೆ. ಇನ್ನೂ ಪ್ರತಿ ದಿನವು ಶೇ.25 ರಷ್ಟು ಬಳಕೆದಾರರಲ್ಲಿ ಬೆನ್ನು ಹುರಿ ನೋವು ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯ ಎನ್ನಲಾಗಿದೆ.

ಆತಂಕ ಮತ್ತು ಖಿನ್ನತೆ: ಸಮೀಕ್ಷೆಯ ಪ್ರಕಾರ ಅತಿಯಾದ ಮೊಬೈಲ್​ ಬಳಕೆಯಿಂದ ಬಳಕೆದಾರರಲ್ಲಿ ಖಿನ್ನತೆ ಮತ್ತು ಆತಂಕ ಹೆಚ್ಚಾಗುತ್ತದೆ. ಹೆಚ್ಚಾಗಿ ಗೇಮ್ಸ್​​, ವೀಡಿಯೋವನ್ನು ವೀಕ್ಷಕರಲ್ಲಿ ಈ ಸಮಸ್ಯೆ ಕಂಡುಬರುತ್ತದೆ.

ನರದ ಸಮಸ್ಯೆ: ಯುವಕರು ಹೆಚ್ಚಾಗಿ ಸ್ಮಾರ್ಟ್​ ಫೋನ್​ ಬಳಸುತ್ತಾರೆ. ಹಾಡು, ಗೇಮ್ಸ್​, ಸಾಮಾಜಿಕ ಜಾಲತಾಣವನ್ನು ವೀಕ್ಷಿಸುವಲ್ಲಿ ಹೆಚ್ಚಾಗಿ ಸ್ಮಾರ್ಟ್​ಫೋನ್​ನಲ್ಲಿ ಸಮಯ ಕಳೆಯುತ್ತಾರೆ. ಕುಳಿತಲ್ಲೇ ಕುಳಿತು ಮೊಬೈಲ್​ ಬಳಕೆಯಲ್ಲಿ ತಲ್ಲೀನರಾಗುವ ಯುವಕರಲ್ಲಿ ನರದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ.

ಕಣ್ಣಿನ ಸಮಸ್ಯೆ: ಸ್ಮಾರ್ಟ್​ಫೋನ್​ ಬಳಕೆದಾರರು ಅತಿಯಾದ ಮೊಬೈಲ್​ ಬಳಕೆಯಿಂದ ಕಣ್ಣಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಮೊಬೈಲ್​ ಡಿಸ್​ಪ್ಲೇ ಮೂಲಕ ಮೂಡುವ ಬೆಳಕು ಬಳಕೆದಾರರ ಕಣ್ಣಿನ ದೃಷ್ಠಿಗೆ ಹಾನಿಯುಂಟು ಮಾಡುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ನಿದ್ರಾಹೀನತೆ: ಶೇ.68 ರಷ್ಟು ಸ್ಮಾರ್ಟ್​ಫೋನ್​ ಬಳಕೆಯ 18 ರಿಂದ 29 ವರ್ಷದ ಜನರಲ್ಲಿ ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುವಕರಲ್ಲಿ ಈ ಸಮಸ್ಯೆಯು ಹೆಚ್ಚಾಗಿ ಕಂಡುಬರುತ್ತಿದ್ದು, ರಾತ್ರಿ ವೇಳೆಯಲ್ಲಿ ಅತಿಯಾದ ಮೊಬೈಲ್​ ಬಳಕೆಯಿಂದ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗಿದೆ.

ಸೂಚನೆ: ಈ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಮೀಕ್ಷಾ ವರದಿ ಆಧರಿಸಿದ ಲೇಖನವಾಗಿದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Sun, 15 May 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ