ಕೃತಕ ಗರ್ಭಧಾರಣೆಯಿಂದ ಅವಳಿ ಮಕ್ಕಳ ಜನನ.. ಡಿಎನ್ಎ ಪರೀಕ್ಷೆಯಿಂದ ಹೊರಬಿತ್ತು ಶಾಕಿಂಗ್ ನ್ಯೂಸ್!

ಹೈದರಾಬಾದ್​ ಮೂಲದ ಸಂತ್ರಸ್ತ ದಂಪತಿ ಸಂತಾನ ಬಯಸಿ, ಸಂತಾನೋತ್ಪತ್ತಿ ತಂತ್ರದ ಮೂಲಕ ಗರ್ಭ ಧರಿಸಲು ಆಸ್ಪತ್ರೆಯೊಂದನ್ನು ಸಂಪರ್ಕಿಸಿದ್ದರು. ಪರಿಣಾಮವಾಗಿ, ಅವರು 2009 ರಲ್ಲಿ ಅವಳಿ ಮಕ್ಕಳನ್ನು ಹೊಂದಿದ್ದರು. ಅಲ್ಲಿಯವರೆಗೆ ಎಲ್ಲವೂ ಸರಿಯಾಗಿಯೆ ಇತ್ತು. ಮುಂದೆ ಕಹಿ ಸತ್ಯವೊಂದು ಹೊರಬಿದ್ದಿದೆ. ಆ ಎರಡು ಶಿಶುಗಳ ಡಿಎನ್ಎ ಪರೀಕ್ಷೆಯನ್ನು ನಡೆಸಿದಾಗ, ಆ ಮಕ್ಕಳ ತಂದೆ ಬೇರೆಯೊಬ್ಬ ಎಂದು ಕಂಡುಬಂದಿದೆ. ಇಲ್ಲಿ ಆಸ್ಪತ್ರೆಯವರಿಗೆ ತಮ್ಮ ತಪ್ಪಿನ ಅರಿವಾಗಿದೆ. ಈ ಹಿನ್ನೆಲೆಯಲ್ಲಿ ದಂಪತಿಯಿಬ್ಬರೂ ನ್ಯಾಯಾಲಯದ ಮೊರೆ ಹೋಗಿದ್ದರು.

ಕೃತಕ ಗರ್ಭಧಾರಣೆಯಿಂದ ಅವಳಿ ಮಕ್ಕಳ ಜನನ.. ಡಿಎನ್ಎ ಪರೀಕ್ಷೆಯಿಂದ ಹೊರಬಿತ್ತು ಶಾಕಿಂಗ್ ನ್ಯೂಸ್!
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 08, 2024 | 10:16 AM

ದೆಹಲಿಯಲ್ಲಿ (Delhi hospital) ಕೃತಕ ಗರ್ಭಧಾರಣೆಗೆಂದು ಆಸ್ಪತ್ರೆಗೆ ತೆರಳಿದ್ದ ದಂಪತಿಗೆ ಕಹಿ ಅನುಭವವಾಗಿದೆ. ತನ್ನ ಗಂಡನ ವೀರ್ಯದ (sperm) ಬದಲಿಗೆ ಇನ್ನೊಬ್ಬ ಪುರುಷನ ವೀರ್ಯವನ್ನು ಮಹಿಳೆಗೆ ಆಸ್ಪತ್ರೆಯಲ್ಲಿ ನೀಡಲಾಗಿತ್ತು. ಅದರಿಂದ ಅವಳು ತೀವ್ರವಾಗಿ ನೊಂದಿದ್ದಳು. ತನಗಾದ ಅನ್ಯಾಯದ ವಿರುದ್ಧ ಕಾನೂನು ಮೊರೆ ಹೋದ ದಂಪತಿಯನ್ನು ಕಾನೂನು ಕೈಹಿಡಿದಿದೆ. ಇದರಿಂದ ಸಂತ್ರಸ್ತಗೆ ಆಸ್ಪತ್ರೆಯು ಒಂದೂವರೆ ಕೋಟಿ ರೂಪಾಯಿ ಪರಿಹಾರ (fine) ನೀಡಬೇಕೆಂದು ಕೋರ್ಟ್​ ತೀರ್ಪು (National Consumer Disputes Redressal Commission -NCDRC) ನೀಡಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಹೈದರಾಬಾದ್​ ಮೂಲದ ಸಂತ್ರಸ್ತ ದಂಪತಿ ಸಂತಾನ ಬಯಸಿ, ಸಂತಾನೋತ್ಪತ್ತಿ ತಂತ್ರದ ಮೂಲಕ ಗರ್ಭ ಧರಿಸಲು ಆಸ್ಪತ್ರೆಯೊಂದನ್ನು ಸಂಪರ್ಕಿಸಿದ್ದರು. ಪರಿಣಾಮವಾಗಿ, ಅವರು 2009 ರಲ್ಲಿ ಅವಳಿ ಮಕ್ಕಳನ್ನು ಹೊಂದಿದ್ದರು. ಅಲ್ಲಿಯವರೆಗೆ ಎಲ್ಲವೂ ಸರಿಯಾಗಿಯೆ ಇತ್ತು. ಮುಂದೆ ಕಹಿ ಸತ್ಯವೊಂದು ಹೊರಬಿದ್ದಿದೆ. ಆ ಎರಡು ಶಿಶುಗಳ ಡಿಎನ್ಎ ಪರೀಕ್ಷೆಯನ್ನು ನಡೆಸಿದಾಗ, ಆ ಮಕ್ಕಳ ತಂದೆ ಬೇರೆಯೊಬ್ಬ ಎಂದು ಕಂಡುಬಂದಿದೆ. ಇಲ್ಲಿ ಆಸ್ಪತ್ರೆಯವರಿಗೆ ತಮ್ಮ ತಪ್ಪಿನ ಅರಿವಾಗಿದೆ. ಈ ಹಿನ್ನೆಲೆಯಲ್ಲಿ ದಂಪತಿಯಿಬ್ಬರೂ ನ್ಯಾಯಾಲಯದ ಮೊರೆ ಹೋಗಿದ್ದರು.

Also Read:  ಈ ಲಕ್ಷಣಗಳು ಕ್ಯಾನ್ಸರ್​​​ನ ಆರಂಭಿಕ ಚಿಹ್ನೆಗಳಾಗಿರಬಹುದು, ಎಂದಿಗೂ ನಿರ್ಲಕ್ಷ್ಯಬೇಡ

ಆಸ್ಪತ್ರೆಯವರು 2 ಕೋಟಿ ಪರಿಹಾರ ನೀಡಬೇಕು ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ಹಲವು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿತ್ತು. ಇದೀಗ ನ್ಯಾಯಾಲಯವು ಪ್ರಕರಣದಲ್ಲಿ ದಂಪತಿಯ ಪರವಾಗಿ ತೀರ್ಪು ನೀಡಿದೆ. ತಪ್ಪಿತಸ್ಥ ಆಸ್ಪತ್ರೆ ಆಡಳಿತ ಮಂಡಳಿಯು ದಂಪತಿಗೆ 1.5 ಕೋಟಿ ರೂ. ಪರಿಹಾರ ಪಾವತಿಸುವಂತೆ ಎನ್‌ಸಿಡಿಆರ್‌ಸಿ ಆದೇಶಿಸಿದೆ. ಏತನ್ಮಧ್ಯೆ, ಕೃತಕ ಗರ್ಭಧಾರಣೆಗೆ ಸಂಬಂಧಿಸಿದ ಕಾರ್ಯವಿಧಾನಗಳನ್ನು ಹೊಸದಾಗಿ ರೂಪಿಸಬೇಕು ಮತ್ತು ಜನಿಸಿದ ಮಗುವಿನ ಡಿಎನ್‌ಎ ( DNA profiling) ವಿವರಗಳನ್ನು ಸಹ ನೀಡಬೇಕು ಎಂದೂ ಆಯೋಗವು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್