AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ

ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ (health tips) ಆಲೋಚಿಸುವುದಾದರೆ ಸಂಸ್ಕೃತದಲ್ಲಿ 14 ಉಲ್ಲೇಖಗಳು ಇವೆ. ಒಂದೆರಡು ಉದಾಹರಣೆ ನೋಡುವುದಾದರೆ 1. ನ ಸ್ನಾನಮ್ ಆಚರೇತ್ ಭುಕ್ತ್ವಾ ಅಂದರೆ -ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ. 2. ಅತಿ ಸರ್ವತ್ರ ವರ್ಜಯೇತ್ ಅಂದರೆ -ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿಯೇ ಇದ್ದರೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ.

ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ
ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ
TV9 Web
| Edited By: ಸಾಧು ಶ್ರೀನಾಥ್​|

Updated on: Feb 10, 2022 | 8:43 AM

Share

ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ (health tips) ಆಲೋಚಿಸುವುದಾದರೆ ಸಂಸ್ಕೃತದಲ್ಲಿ 14 ಉಲ್ಲೇಖಗಳು ಇವೆ. ಒಂದೆರಡು ಉದಾಹರಣೆ ನೋಡುವುದಾದರೆ 1. ನ ಸ್ನಾನಮ್ ಆಚರೇತ್ ಭುಕ್ತ್ವಾ ಅಂದರೆ -ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ. 2. ಅತಿ ಸರ್ವತ್ರ ವರ್ಜಯೇತ್ ಅಂದರೆ -ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿಯೇ ಇದ್ದರೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ. 3. ನಾಸ್ತಿಮೂಲಂ ಅನೌಷಧಂ -ಅಂದರೆ ಯಾವುದೇ ಔಷಧೀಯ ಪ್ರಯೋಜನವಿಲ್ಲದ ಯಾವ ತರಕಾರಿಯೂ ಇಲ್ಲ. ಬನ್ನೀ ಮತ್ತೊಂದಿಷ್ಟು ಆಹಾರ ಆಚಾರ ವಿಚಾರಗಳನ್ನು ತಿಳಿಯೋಣ (overall well being of body, mind and soul).

1 ಅಜೀರಣೀ ಭೋಜನಂ ವಿಷಂ: ಈ ಹಿಂದೆ ತೆಗೆದುಕೊಂಡ ಊಟವು ಜೀರ್ಣವಾಗದಿದ್ದರೆ ಮತ್ತೆ ಊಟ ಮಾಡುವುದು ವಿಷವನ್ನು ತೆಗೆದುಕೊಳ್ಳುವುದಕ್ಕೆ ಸಮಾನವಾಗಿರುತ್ತದೆ. ಹಸಿವು, ಹಿಂದಿನ ಆಹಾರ ಜೀರ್ಣವಾಗುವ ಒಂದು ಸಂಕೇತ.

2 ಅರ್ಧೋಗಹರಿ ನಿದ್ರಾ: ಸರಿಯಾದ ನಿದ್ರೆ, ಅರ್ಧದಷ್ಟು ರೋಗಗಳನ್ನು ಗುಣಪಡಿಸುತ್ತದೆ.

3. ಮುದ್ಗಧಾಲಿ ಗಾಧವ್ಯಾಲಿ: ಎಲ್ಲಾ ದ್ವಿದಳ ಧಾನ್ಯಗಳಲ್ಲಿ ಹೆಸರು ಬೇಳೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇತರ ದ್ವಿದಳ ಧಾನ್ಯಗಳು ಯಾವುದೋ ಒಂದು ಅಡ್ಡ ಪರಿಣಾಮ ಹೊಂದಿರುತ್ತವೆ.

4. ಬಗ್ನಾಸ್ತಿ ಸಂಧಾನಕರೋ ರಸೋನಹ: ಬೆಳ್ಳುಳ್ಳಿ ಮುರಿದ ಮೂಳೆಗಳನ್ನು ಸಹ ಸೇರಿಸುತ್ತದೆ.

5. ಅತಿ ಸರ್ವತ್ರ ವರ್ಜಯೇತ್: ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿದ್ದರೂ, ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ.

6. ನಾಸ್ತಿಮೂಲಂ ಅನೌಷಧಂ: ಯಾವುದೇ ಔಷಧೀಯ ಪ್ರಯೋಜನವಿಲ್ಲದ ಯಾವುದೇ ತರಕಾರಿ ಇಲ್ಲ.

7. ನಾ ವೈದ್ಯಃ ಪ್ರಭುರಾಯುಷ: ಯಾವ ವೈದ್ಯರೂ ನಮ್ಮ ದೀರ್ಘಾಯುಷ್ಯದ ಅಧಿಪತಿ ಅಲ್ಲ. ವೈದ್ಯರಿಗೂ ಮಿತಿಗಳಿವೆ.

8. ಚಿಂತಾ ವ್ಯಾಧಿ ಪ್ರಕಾಶಯ: ಚಿಂತೆ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ.

9. ವ್ಯಾಯಮಾಶ್ಚ ಸನೈಹಿ ಸನೈಹಿ: ಪ್ರತಿ ದಿನ ವ್ಯಾಯಾಮ ಮಾಡಿ. ಆದ್ರೆ ಯಾವುದೇ ವ್ಯಾಯಾಮವನ್ನು ನಿಧಾನವಾಗಿ ಮಾಡಿ. ವೇಗದ ವ್ಯಾಯಾಮ ದೇಹ ಮತ್ತು ಮನಸ್ಸಿಗೆ ಒಳ್ಳೆಯದಲ್ಲ.

10. ಅಜಾವತ್ ಚರ್ವಣಂ ಕುರ್ಯಾತ್: ನಿಮ್ಮ ಆಹಾರವನ್ನು ಮೇಕೆಯಂತೆ ಅಗಿಯಿರಿ. ಆತುರದಿಂದ ಆಹಾರವನ್ನು ನುಂಗಬೇಡಿ. ಲಾಲಾರಸ ಜೀರ್ಣಕ್ರಿಯೆಯಲ್ಲಿ ಮೊದಲು ಸಹಾಯಕ್ಕೆ ಬರುತ್ತದೆ.

11. ಸ್ನಾನ ನಾಮ ಮನಃಪ್ರಸಾದನಕಾರಂ ದುಃಸ್ವಪ್ನ ವಿಧವಾಸನಮ್: ಸ್ನಾನವು ಖಿನ್ನತೆಯನ್ನು ತೆಗೆದುಹಾಕುತ್ತದೆ. ಇದು ಕೆಟ್ಟ ಕನಸುಗಳನ್ನು ದೂರ ಮಾಡುತ್ತದೆ.

12. ನ ಸ್ನಾನಮ್ ಆಚರೇತ್ ಭುಕ್ತ್ವಾ: ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ.

13. ನಾಸ್ತಿ ಮೇಘಸಮಂ ತೋಯಮ್: ಶುದ್ಧತೆಯಲ್ಲಿ ಮಳೆನೀರಿಗೆ ಯಾವುದೂ ಸಮವಿಲ್ಲ.

14 ಅಜೀರ್ನೆ ಭೇಷಜಂ ವಾರಿ: ಅಜೀರ್ಣವನ್ನು ಸರಳ ನೀರು ಕುಡಿಯುವ ಮೂಲಕ ಪರಿಹರಿಸಬಹುದು. (ಸಂಗ್ರಹ- ನಿತ್ಯಸತ್ಯ)

Also Read: BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​ Also Read: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

Follow Us
Web contact
Web contact

TV9 Kannada

Read More
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು