AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ

ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ (health tips) ಆಲೋಚಿಸುವುದಾದರೆ ಸಂಸ್ಕೃತದಲ್ಲಿ 14 ಉಲ್ಲೇಖಗಳು ಇವೆ. ಒಂದೆರಡು ಉದಾಹರಣೆ ನೋಡುವುದಾದರೆ 1. ನ ಸ್ನಾನಮ್ ಆಚರೇತ್ ಭುಕ್ತ್ವಾ ಅಂದರೆ -ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ. 2. ಅತಿ ಸರ್ವತ್ರ ವರ್ಜಯೇತ್ ಅಂದರೆ -ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿಯೇ ಇದ್ದರೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ.

ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ
ಆಹಾರ ಆಚಾರ ವಿಚಾರ: ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ ಆಲೋಚಿಸೋಣ, ಆಚರಿಸೋಣ
TV9 Web
| Updated By: ಸಾಧು ಶ್ರೀನಾಥ್​|

Updated on: Feb 10, 2022 | 8:43 AM

Share

ಕೆಲ ಪ್ರಾಚೀನ ಆರೋಗ್ಯ ಸಲಹೆಗಳ ಬಗ್ಗೆ (health tips) ಆಲೋಚಿಸುವುದಾದರೆ ಸಂಸ್ಕೃತದಲ್ಲಿ 14 ಉಲ್ಲೇಖಗಳು ಇವೆ. ಒಂದೆರಡು ಉದಾಹರಣೆ ನೋಡುವುದಾದರೆ 1. ನ ಸ್ನಾನಮ್ ಆಚರೇತ್ ಭುಕ್ತ್ವಾ ಅಂದರೆ -ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ. 2. ಅತಿ ಸರ್ವತ್ರ ವರ್ಜಯೇತ್ ಅಂದರೆ -ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿಯೇ ಇದ್ದರೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ. 3. ನಾಸ್ತಿಮೂಲಂ ಅನೌಷಧಂ -ಅಂದರೆ ಯಾವುದೇ ಔಷಧೀಯ ಪ್ರಯೋಜನವಿಲ್ಲದ ಯಾವ ತರಕಾರಿಯೂ ಇಲ್ಲ. ಬನ್ನೀ ಮತ್ತೊಂದಿಷ್ಟು ಆಹಾರ ಆಚಾರ ವಿಚಾರಗಳನ್ನು ತಿಳಿಯೋಣ (overall well being of body, mind and soul).

1 ಅಜೀರಣೀ ಭೋಜನಂ ವಿಷಂ: ಈ ಹಿಂದೆ ತೆಗೆದುಕೊಂಡ ಊಟವು ಜೀರ್ಣವಾಗದಿದ್ದರೆ ಮತ್ತೆ ಊಟ ಮಾಡುವುದು ವಿಷವನ್ನು ತೆಗೆದುಕೊಳ್ಳುವುದಕ್ಕೆ ಸಮಾನವಾಗಿರುತ್ತದೆ. ಹಸಿವು, ಹಿಂದಿನ ಆಹಾರ ಜೀರ್ಣವಾಗುವ ಒಂದು ಸಂಕೇತ.

2 ಅರ್ಧೋಗಹರಿ ನಿದ್ರಾ: ಸರಿಯಾದ ನಿದ್ರೆ, ಅರ್ಧದಷ್ಟು ರೋಗಗಳನ್ನು ಗುಣಪಡಿಸುತ್ತದೆ.

3. ಮುದ್ಗಧಾಲಿ ಗಾಧವ್ಯಾಲಿ: ಎಲ್ಲಾ ದ್ವಿದಳ ಧಾನ್ಯಗಳಲ್ಲಿ ಹೆಸರು ಬೇಳೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇತರ ದ್ವಿದಳ ಧಾನ್ಯಗಳು ಯಾವುದೋ ಒಂದು ಅಡ್ಡ ಪರಿಣಾಮ ಹೊಂದಿರುತ್ತವೆ.

4. ಬಗ್ನಾಸ್ತಿ ಸಂಧಾನಕರೋ ರಸೋನಹ: ಬೆಳ್ಳುಳ್ಳಿ ಮುರಿದ ಮೂಳೆಗಳನ್ನು ಸಹ ಸೇರಿಸುತ್ತದೆ.

5. ಅತಿ ಸರ್ವತ್ರ ವರ್ಜಯೇತ್: ಅತಿಯಾಗಿ ಸೇವಿಸುವ ಯಾವುದಾದರೂ, ಅದು ರುಚಿಯಾಗಿದ್ದರೂ, ಆರೋಗ್ಯಕ್ಕೆ ಒಳ್ಳೆಯದಲ್ಲ. ಮಿತವಾಗಿರಲಿ ಅದು ದೇಹಕ್ಕೆ ಹಿತವಾಗಿರುತ್ತದೆ.

6. ನಾಸ್ತಿಮೂಲಂ ಅನೌಷಧಂ: ಯಾವುದೇ ಔಷಧೀಯ ಪ್ರಯೋಜನವಿಲ್ಲದ ಯಾವುದೇ ತರಕಾರಿ ಇಲ್ಲ.

7. ನಾ ವೈದ್ಯಃ ಪ್ರಭುರಾಯುಷ: ಯಾವ ವೈದ್ಯರೂ ನಮ್ಮ ದೀರ್ಘಾಯುಷ್ಯದ ಅಧಿಪತಿ ಅಲ್ಲ. ವೈದ್ಯರಿಗೂ ಮಿತಿಗಳಿವೆ.

8. ಚಿಂತಾ ವ್ಯಾಧಿ ಪ್ರಕಾಶಯ: ಚಿಂತೆ ಅನಾರೋಗ್ಯವನ್ನು ಉಲ್ಬಣಗೊಳಿಸುತ್ತದೆ.

9. ವ್ಯಾಯಮಾಶ್ಚ ಸನೈಹಿ ಸನೈಹಿ: ಪ್ರತಿ ದಿನ ವ್ಯಾಯಾಮ ಮಾಡಿ. ಆದ್ರೆ ಯಾವುದೇ ವ್ಯಾಯಾಮವನ್ನು ನಿಧಾನವಾಗಿ ಮಾಡಿ. ವೇಗದ ವ್ಯಾಯಾಮ ದೇಹ ಮತ್ತು ಮನಸ್ಸಿಗೆ ಒಳ್ಳೆಯದಲ್ಲ.

10. ಅಜಾವತ್ ಚರ್ವಣಂ ಕುರ್ಯಾತ್: ನಿಮ್ಮ ಆಹಾರವನ್ನು ಮೇಕೆಯಂತೆ ಅಗಿಯಿರಿ. ಆತುರದಿಂದ ಆಹಾರವನ್ನು ನುಂಗಬೇಡಿ. ಲಾಲಾರಸ ಜೀರ್ಣಕ್ರಿಯೆಯಲ್ಲಿ ಮೊದಲು ಸಹಾಯಕ್ಕೆ ಬರುತ್ತದೆ.

11. ಸ್ನಾನ ನಾಮ ಮನಃಪ್ರಸಾದನಕಾರಂ ದುಃಸ್ವಪ್ನ ವಿಧವಾಸನಮ್: ಸ್ನಾನವು ಖಿನ್ನತೆಯನ್ನು ತೆಗೆದುಹಾಕುತ್ತದೆ. ಇದು ಕೆಟ್ಟ ಕನಸುಗಳನ್ನು ದೂರ ಮಾಡುತ್ತದೆ.

12. ನ ಸ್ನಾನಮ್ ಆಚರೇತ್ ಭುಕ್ತ್ವಾ: ಆಹಾರದ ನಂತರ ಎಂದಿಗೂ ಸ್ನಾನ ಮಾಡಬೇಡಿ.

13. ನಾಸ್ತಿ ಮೇಘಸಮಂ ತೋಯಮ್: ಶುದ್ಧತೆಯಲ್ಲಿ ಮಳೆನೀರಿಗೆ ಯಾವುದೂ ಸಮವಿಲ್ಲ.

14 ಅಜೀರ್ನೆ ಭೇಷಜಂ ವಾರಿ: ಅಜೀರ್ಣವನ್ನು ಸರಳ ನೀರು ಕುಡಿಯುವ ಮೂಲಕ ಪರಿಹರಿಸಬಹುದು. (ಸಂಗ್ರಹ- ನಿತ್ಯಸತ್ಯ)

Also Read: BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​ Also Read: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ