AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಳಕೆಯೊಡೆದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ

ಪ್ರತಿದಿನ ಬೆಳಿಗ್ಗೆ ಮೊಳಕೆಯೊಡೆದ ಧಾನ್ಯಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ದೇಹಕ್ಕೆ ತ್ವರಿತ ಪೋಷಕಾಂಶಗಳನ್ನು ಒದಗಿಸಲು, ಅನೇಕರು ಮೊಳಕೆಯೊಡೆದ ಹೆಸರುಕಾಳು ಮತ್ತು ಕಪ್ಪು ಕಡಲೆಯನ್ನು ಸೇವನೆ ಮಾಡುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಮತ್ತು ಯಾವ ಧಾನ್ಯಗಳು ಯಾರಿಗೆ ಸರಿಯಾದ ಪರ್ಯಾಯ ಎಂಬುದನ್ನು ಆರೋಗ್ಯ ತಜ್ಞರ ಮೂಲಕ ತಿಳಿದುಕೊಳ್ಳಿ.

ಮೊಳಕೆಯೊಡೆದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ
ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jul 22, 2026 | 11:22 AM

Share

ಮುಖ್ಯಾಂಶಗಳು

  • ಮೊಳಕೆ ಬಂದ ಹೆಸರುಕಾಳಿನಲ್ಲಿರುವ ಆರೋಗ್ಯ ಪ್ರಯೋಜನಗಳು
  • ಮೊಳಕೆ ಬಂದ ಹೆಸರುಕಾಳು ಅಥವಾ ಕಪ್ಪು ಕಡಲೆ: ಇವೆರಡರಲ್ಲಿ ನಿಜವಾದ ಸೂಪರ್‌ಫುಡ್
  • ಮೊಳಕೆ ಬಂದ ಕಾಳುಗಳನ್ನು ಸೇವನೆ ಮಾಡುವಾಗ ಯಾರು ಎಚ್ಚರಿಕೆ ವಹಿಸಬೇಕು

ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ ಸೇವನೆ ಮಾಡಲು ಸುಲಭವಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಧಾನ್ಯಗಳು ಮೊಳಕೆಯೊಡೆಯುವಾಗ ಅವುಗಳಲ್ಲಿ ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ಜೀರ್ಣವಾಗುವ ಸಾಮರ್ಥ್ಯ ಹೆಚ್ಚಾಗುತ್ತದೆ. ಜೊತೆಗೆ ದೇಹಕ್ಕೆ ಅಗತ್ಯವಾದ ಕೆಲವು ಪೋಷಕಾಂಶಗಳು ಹೆಚ್ಚು ಸುಲಭವಾಗಿ ಹೀರಿಕೊಳ್ಳುವಂತೆ ರೂಪಾಂತರಗೊಳ್ಳುತ್ತವೆ. ಹಾಗಾದರೆ ಇವೆರಡರ ನಡುವೆ ಇರುವ ವ್ಯತ್ಯಾಸ ತಿಳಿದುಕೊಳ್ಳಿ.

ಮೊಳಕೆ ಬಂದ ಹೆಸರುಕಾಳಿನ ಆರೋಗ್ಯ ಪ್ರಯೋಜನಗಳು:

ಸಾಮಾನ್ಯವಾಗಿ ಮೊಳಕೆ ಬಂದ ಹೆಸರುಕಾಳು ಅತ್ಯಂತ ಹಗುರವಾದ ಆಹಾರವಾಗಿದ್ದು, ಸುಲಭವಾಗಿ ಜೀರ್ಣವಾಗುತ್ತದೆ. ಇದರಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಫೋಲೇಟ್, ಮೆಗ್ನೀಷಿಯಮ್, ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು ಇದರ ಸೇವನೆಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ತೂಕ ಇಳಿಕೆಗೆ ಸಹಕಾರಿ: ಹೆಸರುಕಾಳಿನಲ್ಲಿ ಕ್ಯಾಲೊರಿಗಳು ಕಡಿಮೆ ಇರುತ್ತವೆ. ಆದ್ದರಿಂದ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಆಹಾರ.

ಹೆಚ್ಚು ಸಮಯ ಹೊಟ್ಟೆ ತುಂಬಿದ ಅನುಭವ: ಇದರಲ್ಲಿರುವ ಫೈಬರ್ ಹೊಟ್ಟೆಯನ್ನು ಹೆಚ್ಚು ಸಮಯ ತುಂಬಿರುವಂತಹಹ ಅನುಭವವನ್ನು ನೀಡುತ್ತದೆ. ಇದರಿಂದ ಪದೇ ಪದೇ ಹಸಿವು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆಯಾಗುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಮೊಳಕೆ ಬಂದ ಹೆಸರುಕಾಳು ಸುಲಭವಾಗಿ ಜೀರ್ಣವಾಗುವುದರಿಂದ ಹೊಟ್ಟೆಯ ಆರೋಗ್ಯಕ್ಕೂ ಒಳ್ಳೆಯದು.

ರೋಗನಿರೋಧಕ ಶಕ್ತಿ ಹೆಚ್ಚಳ: ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ.

ಮೊಳಕೆ ಬಂದ ಕಪ್ಪು ಕಡಲೆಯ ಆರೋಗ್ಯ ಪ್ರಯೋಜನಗಳು

ಮೊಳಕೆ ಬಂದ ಕಪ್ಪು ಕಡಲೆ ಅತ್ಯುತ್ತಮ ಪ್ರೋಟೀನ್ ಮೂಲಗಳಲ್ಲಿ ಒಂದಾಗಿದ್ದು, ಇದರಲ್ಲಿ ಹೆಚ್ಚಿನ ಪ್ರೋಟೀನ್, ಕಬ್ಬಿಣ (Iron), ಕ್ಯಾಲ್ಸಿಯಮ್, ಫಾಸ್ಫರಸ್, ಫೈಬರ್, ಬಿ-ವಿಟಮಿನ್‌ಗಳು ಸಮೃದ್ಧವಾಗಿದೆ.

ಸ್ನಾಯುಗಳ ಬೆಳವಣಿಗೆಗೆ ಒಳ್ಳೆಯದು: ಜಿಮ್ ಮಾಡುವವರು, ಕ್ರೀಡಾಪಟುಗಳು ಹಾಗೂ ಹೆಚ್ಚಿನ ದೈಹಿಕ ಶ್ರಮ ವಹಿಸುವವರಿಗೆ ಕಪ್ಪು ಕಡಲೆ ಉತ್ತಮ ಪ್ರೋಟೀನ್ ಆಹಾರವಾಗಿದೆ.

ದೀರ್ಘಕಾಲದ ಶಕ್ತಿ: ಕಪ್ಪು ಕಡಲೆ ನಿಧಾನವಾಗಿ ಜೀರ್ಣವಾಗುವುದರಿಂದ ದೇಹಕ್ಕೆ ಹೆಚ್ಚು ಸಮಯ ಶಕ್ತಿ ನೀಡುತ್ತದೆ.

ರಕ್ತಹೀನತೆ ತಡೆಗಟ್ಟಲು ಸಹಕಾರಿ: ಇದರಲ್ಲಿರುವ ಕಬ್ಬಿಣದ ಅಂಶ ಹೆಚ್ಚಾಗಿದ್ದು ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ ಜೊತೆಗೆ ರಕ್ತಹೀನತೆ ಅಪಾಯವನ್ನು ಕಡಿಮೆ ಮಾಡುತ್ತದೆ.

ಎಲುಬಿನ ಆರೋಗ್ಯ: ಕ್ಯಾಲ್ಸಿಯಮ್ ಮತ್ತು ಫಾಸ್ಫರಸ್ ಎಲುಬುಗಳನ್ನು ಬಲಪಡಿಸಲು ಸಹಕಾರಿಯಾಗುತ್ತವೆ.

ಇದನ್ನೂ ಓದಿ: ನೇರಳೆ ಹಣ್ಣು ತಿಂದರೆ ನಿಜವಾಗಿಯೂ ಡಯಾಬಿಟಿಸ್ ನಿಯಂತ್ರಿಸಬಹುದೇ?

ಯಾವುದು ಒಳ್ಳೆಯದು?

ತೂಕ ಇಳಿಸಿಕೊಳ್ಳಲು, ಜೀರ್ಣಕ್ರಿಯೆ ಸುಧಾರಿಸಬೇಕೆಂದಿದ್ದರೆ ಅಥವಾ ಮಧುಮೇಹ ಸ್ನೇಹಿ ಆಹಾರ ಹುಡುಕುತ್ತಿದ್ದರೆ ಮೊಳಕೆ ಬಂದ ಹೆಸರುಕಾಳನ್ನು ಆಯ್ಕೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಇನ್ನು, ಹೆಚ್ಚಿನ ಪ್ರೋಟೀನ್ ಅಗತ್ಯವಿದ್ದರೆ, ಜಿಮ್ ಅಥವಾ ವ್ಯಾಯಾಮ ಮಾಡುವವರಾಗಿದ್ದರೆ, ಕ್ರೀಡಾಪಟುವಾಗಿದ್ದರೆ, ಕಬ್ಬಿಣದ ಕೊರತೆಯನ್ನು ನಿವಾರಿಸಬೇಕೆಂದಿದ್ದರೆ, ದೀರ್ಘಕಾಲ ಶಕ್ತಿ ಬೇಕಾದರೆ ಮೊಳಕೆ ಬಂದ ಕಪ್ಪು ಕಡಲೆ ಆಯ್ಕೆ ಮಾಡಿಕೊಳ್ಳಿ.

ಯಾರು ಎಚ್ಚರಿಕೆ ವಹಿಸಬೇಕು?

ಗ್ಯಾಸ್ಟ್ರಿಕ್ ಅಥವಾ ಹೊಟ್ಟೆ ಉಬ್ಬರ ಸಮಸ್ಯೆ ಇರುವವರು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು. ಮೊಳಕೆಗಳನ್ನು ಸ್ವಚ್ಛವಾಗಿ ತೊಳೆದು ಸೇವಿಸಬೇಕು. ಮಕ್ಕಳು, ಗರ್ಭಿಣಿಯರು, ವಯೋವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಮೊಳಕೆ ಕಾಳುಗಳ ಬದಲು ಸ್ವಲ್ಪ ಬೇಯಿಸಿ ಸೇವಿಸುವುದು ಸುರಕ್ಷಿತ.

ಯಾವುದು ನಿಜವಾದ ಸೂಪರ್‌ಫುಡ್?

ಪೌಷ್ಟಿಕ ತಜ್ಞರ ಅಭಿಪ್ರಾಯದಂತೆ, ಮೊಳಕೆ ಬಂದ ಹೆಸರೆಕಾಳು ಮತ್ತು ಮೊಳಕೆ ಬಂದ ಕಪ್ಪು ಕಡಲೆ ಎರಡೂ ತಮ್ಮದೇ ಆದ ವಿಶೇಷ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಒಂದನ್ನು ಮತ್ತೊಂದಕ್ಕಿಂತ ಉತ್ತಮ ಎಂದು ಹೇಳುವುದಕ್ಕಿಂತ, ನಿಮ್ಮ ಆರೋಗ್ಯಕ್ಕೆ ಅನುಗುಣವಾಗಿ ಆಯ್ಕೆ ಮಾಡುವುದು ಉತ್ತಮ.

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ನಿಮ್ಮ ಆರೋಗ್ಯ ಸ್ಥಿತಿ, ಅಲರ್ಜಿ ಅಥವಾ ವೈದ್ಯಕೀಯ ಸಮಸ್ಯೆಗಳಿಗೆ ಅನುಗುಣವಾಗಿ ಆಹಾರದಲ್ಲಿ ಬದಲಾವಣೆ ಮಾಡುವ ಮೊದಲು ವೈದ್ಯರು ಅಥವಾ ನೋಂದಾಯಿತ ಪೌಷ್ಟಿಕ ತಜ್ಞರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Wed, 22 July 26

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ