AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಳಕೆ ಒಡೆದ ಆಲೂಗಡ್ಡೆಯನ್ನು ಎಂದಿಗೂ ತಿನ್ನಲೇಬೇಡಿ; ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಮೊಳಕೆ ಒಡೆದ ಮತ್ತು ಹಸಿರು ಬಣ್ಣಕ್ಕೆ ತಿರುಗಿರುವ ಆಲೂಗಡ್ಡೆಯಲ್ಲಿ ಸೋಲನೈನ್ ಮತ್ತು ಚಾಕೋನೈನ್ ಎಂಬ ವಿಷಕಾರಿ ಅಂಶಗಳು ಉತ್ಪತ್ತಿಯಾಗುತ್ತವೆ. ಇವುಗಳ ಸೇವನೆಯಿಂದ ವಾಕರಿಕೆ, ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವಿನಂತಹ ಆರೋಗ್ಯ ಸಮಸ್ಯೆ ಉಂಟಾಗಬಹುದು ಎಂದು ಡಾ. ದೀಪಕ್ ಆರಾಧ್ಯ ಸಲಹೆ ನೀಡುತ್ತಾರೆ.

Follow us
ಅಕ್ಷತಾ ವರ್ಕಾಡಿ
|

Updated on:Oct 28, 2024 | 10:57 AM

ಅಲೂಗಡ್ಡೆ ಬಳಸಿಕೊಂಡು ನಾನಾ ಖಾದ್ಯಗಳನ್ನು ತಯಾರಿಸಬಹುದಾಗಿದೆ. ಸಾಂಬಾರಿನಿಂದ ಹಿಡಿದು ಫ್ರೆಂಚ್​​ ಫೈಸ್ ವರೆಗೆ ಅಲೂಗಡ್ಡೆಯನ್ನು ಬಳಸಲಾಗುತ್ತದೆ. ಮಾರುಕಟ್ಟೆಯಿಂದ ಅಲೂಗಡ್ಡೆಯನ್ನು ಖರೀದಿಸುವಾಗ ಅದರಲ್ಲಿ ಕೆಲವೊಂದು ಮೊಳಕೆ ಒಡೆದ ಆಲೂಗಡ್ಡೆಗಳೂ ಕೂಡ ಇರುತ್ತದೆ. ಆದರೆ ಈ ಮೊಳಕೆಗಳನ್ನು ಕತ್ತರಿಸಿ ಖಾದ್ಯಗಳಲ್ಲಿ ಬಳಸುವುದು ಸಾಮಾನ್ಯ. ಆದರೆ ಎಂದಿಗೂ ಈ ರೀತಿಯ ತಪ್ಪು ಮಾಡಬೇಡಿ ಎಂದು ಬೆಂಗಳೂರಿನ ಡಾ ದೀಪಕ್ ಆರಾಧ್ಯ ಎಚ್ಚರಿಸುತ್ತಾರೆ.

“ಹೌದು ಮೊಳಕೆ ಒಡೆದ ಆಲೂಗಡ್ಡೆ ಸೇವನೆ ತಪ್ಪಿಸಿ. ಯಾಕೆಂದರೆ ಮೊಳಕೆ ಒಡೆದ ಅಥವಾ ಸ್ಪಲ್ಪ ಹಸಿರು ಬಣ್ಣಕ್ಕೆ ತಿರುಗಿರುವ ಆಲೂಗಡ್ಡೆಯಲ್ಲಿ ಸೋಲನೈನ್ (Solanine) ಮತ್ತು ಚಾಕೋನೈನ್(Chaconine) ಅಂಶ ಉತ್ಪತ್ತಿಯಾಗುತ್ತದೆ. ಇವುಗಳನ್ನು ಸೇವಿಸುವುದರಿಂದ ಅದು ದೇಹಕ್ಕೆ ವಿಷವಾಗಿ ಪರಿಣಮಿಸುತ್ತದೆ. ಇದರಿಂದಾಗಿ ವಾಕರಿಕೆ, ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು ಕಂಡುಬರುತ್ತದೆ. ಇದಲ್ಲದೇ ತಲೆನೋವು, ತಲೆಸುತ್ತುವಿಕೆ ಮುಂತಾದ ನರವೈಜ್ಞಾನಿಕ ಲಕ್ಷಣಗಳಿಗೂ ಕಾರಣವಾಗಬಹುದು” ಎಂದು ಡಾ ದೀಪಕ್ ಹೇಳುತ್ತಾರೆ.

ಇದನ್ನೂ ಓದಿ: ಇನ್ಮುಂದೆ ಈ AI ಕ್ಯಾಲ್ಕುರೇಟರ್ ಮೂಲಕ ಸಾವಿಗೆ ಎಷ್ಟು ಹತ್ತಿರದಲ್ಲಿದ್ದೇವೆ ಎಂದು ತಿಳಿಯಬಹುದು

drdeepakaradhya ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಅಕ್ಟೋಬರ್​​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ” ಉಪಯುಕ್ತ ಮಾಹಿತಿಗೆ ಧನ್ಯವಾದಗಳು” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 am, Mon, 28 October 24

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ