AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?

ಇತ್ತೀಚೆಗೆ ಹೊಟ್ಟೆಯ ಕ್ಯಾನ್ಸರ್ ಪ್ರಕರಣಗಳು ಬಹಳ ಹೆಚ್ಚಾಗುತ್ತಿವೆ. ಈ ಕ್ಯಾನ್ಸರ್ ಬೇರೆ ಕ್ಯಾನ್ಸರ್​ಗಿಂತಲೂ ಅಪಾಯಕಾರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಈ ಹೊಟ್ಟೆಯ ಕ್ಯಾನ್ಸರ್ ಹೇಗೆ ಬರುತ್ತದೆ? ಇದರ ಅಪಾಯಗಳೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on: Jan 26, 2024 | 1:37 PM

Share

ಈಗೀಗ ಕೆಲವು ಕಾರಣಗಳಿಂದ ಹೊಟ್ಟೆಯ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಇದು ಏಕೆ ಅಪಾಯಕಾರಿ ಎಂದು ನಾವು ತಿಳಿದುಕೊಳ್ಳುವುದು ಅನಿವಾರ್ಯ. ಹೊಟ್ಟೆಯು ನಮ್ಮ ಆಹಾರವನ್ನು ಸಂಗ್ರಹಿಸುವ ಅಂಗವಾಗಿದೆ. ಇದರಲ್ಲಿರುವ ಕರುಳು ಆಹಾರದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹೊಟ್ಟೆಯ ಕ್ಯಾನ್ಸರ್ (Stomach cancer) ತುಂಬಾ ದೊಡ್ಡದಾಗಿದ್ದರೂ ಸಹ ಈ ರೋಗವು ಬಹಳ ಮುಂದುವರಿದಾಗ ಮಾತ್ರ ರೋಗಲಕ್ಷಣಗಳನ್ನು ಅನುಭವಿಸಲು ಸಾಧ್ಯ.

ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ?:

ಹೊಟ್ಟೆಯ ಕ್ಯಾನ್ಸರ್​ನ ಲಕ್ಷಣಗಳು ಕೆಲವೊಮ್ಮೆ ನಮ್ಮನ್ನು ತಪ್ಪುದಾರಿಗೆ ಎಳೆಯಬಹುದು. ಆಮ್ಲೀಯತೆ ಮತ್ತು ಕಿಬ್ಬೊಟ್ಟೆಯ ನೋವು ಈ ಸಂದರ್ಭದಲ್ಲಿ ತುಂಬಾ ಸಾಮಾನ್ಯವಾಗಿರುತ್ತದೆ. ಬಹುತೇಕ ಜನರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಕೆಲವೊಮ್ಮೆ ರಕ್ತಹೀನತೆ ಕೂಡ ಇದರ ರೋಗಲಕ್ಷಣವಾಗಿರಬಹುದು.

ಇದನ್ನೂ ಓದಿ: ಸ್ತನ ಕ್ಯಾನ್ಸರ್​ನ ಐದು ಆರಂಭಿಕ ಲಕ್ಷಣಗಳು

ರೋಗನಿರ್ಣಯವನ್ನು ಖಚಿತಪಡಿಸಲು ಸಾಮಾನ್ಯವಾಗಿ GI ಎಂಡೋಸ್ಕೋಪಿಯ ಅಗತ್ಯವಿರುತ್ತದೆ. ವಿಪರೀತ ತೂಕ ಕಡಿಮೆಯಾಗುವುದು ಮತ್ತು ಹಸಿವು ಕಡಿಮೆಯಾಗುವುದು ಸಹ ಹೊಟ್ಟೆಯ ಕ್ಯಾನ್ಸರ್​ನ ಸಾಮಾನ್ಯ ಲಕ್ಷಣಗಳಾಗಿವೆ.

ಹೊಟ್ಟೆ ಕ್ಯಾನ್ಸರ್​ಗೆ ಚಿಕಿತ್ಸೆಯೇನು?:

ಹೊಟ್ಟೆಯ ಕ್ಯಾನ್ಸರ್​ಗೆ ಕಾರಣವಾಗುವ ಗೆಡ್ಡೆಗಳು ಅಂತರ್ಗತವಾಗಿ ವೇಗವಾಗಿ ಬೆಳೆಯುತ್ತವೆ. ಇವು ದೇಹದ ಇತರ ಭಾಗಗಳಿಗೆ ಬೇಗ ಹರಡುತ್ತವೆ. ಇದು ಚಿಕಿತ್ಸೆಯನ್ನು ಪ್ರಾರಂಭಿಸಲು ಹೆಚ್ಚು ಸಮಯವನ್ನು ನೀಡುವುದಿಲ್ಲ. ಒಂದುವೇಳೆ ಚಿಕಿತ್ಸೆ ನೀಡಿದರೂ ಈ ಗೆಡ್ಡೆಗಳು ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕಿಮೊಥೆರಪಿ, ಸುಪ್ರಾ-ಮೇಜರ್ ಶಸ್ತ್ರಚಿಕಿತ್ಸೆ, ಲೇಸರ್ ಚಿಕಿತ್ಸೆ ಮುಂತಾದವುಗಳಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ವೈದ್ಯರು ಪ್ರಯತ್ನಿಸುತ್ತಾರೆ.

ಇದನ್ನೂ ಓದಿ: ಕ್ಯಾನ್ಸರ್, ಮಧುಮೇಹದಿಂದ ಮಹಿಳೆಯರನ್ನು ಕಾಪಾಡುವ ಡಯೆಟ್ ಇಲ್ಲಿದೆ

ನಿಮ್ಮ ಕುಟುಂಬದಲ್ಲಿ ಬೇರೆ ಯಾರಿಗಾದರೂ ಕ್ಯಾನ್ಸರ್ ಇದ್ದರೆ ಆಗಾಗ ನೀವು ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಕ್ಯಾನ್ಸರ್ ಎಷ್ಟು ಬೇಗ ಗೊತ್ತಾಗುತ್ತದೋ ಅಷ್ಟು ಬೇಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ಧೂಮಪಾನ ಮತ್ತು ಆಲ್ಕೋಹಾಲ್ ಸೇವನೆಯನ್ನು ಬಿಟ್ಟುಬಿಡಿ. ಹೊಗೆಯಿಂದ ಕೂಡಿದ ಆಹಾರವೂ ಹಾನಿಕಾರಕವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ