AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚಿನ ದಿನಗಳಲ್ಲಿ ಉದರ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ, ಕಾರಣವೇನೆಂಬುದ ತಿಳಿಯಿರಿ

ತಪ್ಪು ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಉದರ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ನಿಮಗೆ ನೀವು ತಿನ್ನುತ್ತಿರುವ ಆಹಾರವು ಆರೋಗ್ಯದಾಯಕವಾದದ್ದು ಎನಿಸಬಹುದು. ಆದರೆ ನಿಮ್ಮ ತಪ್ಪು ಆಹಾರ ಸೇವನೆಯಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು.

ಇತ್ತೀಚಿನ ದಿನಗಳಲ್ಲಿ ಉದರ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ, ಕಾರಣವೇನೆಂಬುದ ತಿಳಿಯಿರಿ
ಉದರ ಸಮಸ್ಯೆImage Credit source: ABP Live
ನಯನಾ ರಾಜೀವ್
|

Updated on: Aug 11, 2023 | 3:00 PM

Share

ತಪ್ಪು ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಉದರ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ನಿಮಗೆ ನೀವು ತಿನ್ನುತ್ತಿರುವ ಆಹಾರವು ಆರೋಗ್ಯದಾಯಕವಾದದ್ದು ಎನಿಸಬಹುದು. ಆದರೆ ನಿಮ್ಮ ತಪ್ಪು ಆಹಾರ ಸೇವನೆಯಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು.

ದೇಶದಲ್ಲಿ ಶೇಕಡಾ 5 ಕ್ಕಿಂತ ಹೆಚ್ಚು ಜನರಿಗೆ ಕರುಳಿನ ಉರಿಯೂತದ ಸಮಸ್ಯೆ ಇದೆ ಎಂಬುದು ಕಂಡುಬಂದಿದೆ. ಇದರಲ್ಲಿ ಹೊಟ್ಟೆ ನೋವು, ಕರುಳಿನ ಸೋಂಕು, ಆ್ಯಸಿಡಿಟಿ, ಅಲ್ಸರೇಟಿವ್ ಕೊಲೈಟಿಸ್ ಮತ್ತು ಭೇದಿಯಂತಹ ಸಮಸ್ಯೆಗಳಿವೆ.

2006ರ ವರೆಗೆ, ಕೇವಲ 0.1 ಪ್ರತಿಶತದಷ್ಟು ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದು, ಅದು ಕ್ರಮೇಣ ಹೆಚ್ಚಾಗುತ್ತಿದೆ. ಲ್ಯಾನ್ಸೆಟ್ ರೀಜನಲ್ ಹೆಲ್ತ್-ಸೌತ್ ಈಸ್ಟ್ ಏಷ್ಯಾ ವೈದ್ಯಕೀಯ ಜರ್ನಲ್‌ನಲ್ಲಿ ಈ ಸಂಶೋಧನೆಯನ್ನು ಪ್ರಕಟಿಸಲಾಗಿದೆ.

ವರದಿಯ ಪ್ರಕಾರ, ದೇಶದಲ್ಲಿ ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದ ನಂತರ ಯಾವುದಾದರೂ ರೋಗವಿದ್ದರೆ ಅದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಾಗಿದೆ.

ವೈದ್ಯರ ಪ್ರಕಾರ, ಕರುಳಿನ ಉರಿಯೂತ, ಕಳಪೆ ಆಹಾರಶೈಲಿ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಉಂಟಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ದುರ್ಬಲ ರೋಗನಿರೋಧಕ ಶಕ್ತಿ ಕೂಡ ಈ ಸಮಸ್ಯೆಗೆ ಕಾರಣವಾಗಬಹುದು. ಈ ಕಾರಣದಿಂದಾಗಿ, ತೂಕ ನಷ್ಟ, ಆಯಾಸ ಮತ್ತು ಹೊಟ್ಟೆಯ ಕ್ಯಾನ್ಸರ್ ಅಪಾಯವು ಹೆಚ್ಚಾಗುತ್ತದೆ.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಆರೋಗ್ಯ ತಜ್ಞರ ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಮುಖ್ಯ ಕಾರಣ ಸರಿಯಾದ ಆಹಾರದ ಕೊರತೆ. ಈ ಸಮಸ್ಯೆ ಎಲ್ಲಾ ವಯಸ್ಸಿನ ಜನರಲ್ಲಿ ಕಂಡುಬರುತ್ತದೆ. ಸಮಸ್ಯೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು. ಹೊಟ್ಟೆ ನೋವು ದೀರ್ಘಕಾಲದವರೆಗೆ ಮುಂದುವರೆದರೆ, ತಕ್ಷಣವೇ ಚಿಕಿತ್ಸೆ ನೀಡಬೇಕು. ಸ್ವಯಂ ಚಿಕಿತ್ಸೆ ಮಾಡಬೇಡಿ ಮತ್ತು ವೈದ್ಯರನ್ನು ಭೇಟಿ ಮಾಡಿ. ಉದರ ಸಂಬಂಧಿ ಕಾಯಿಲೆ ಅಪಾಯ ಯಾರಲ್ಲಿ ಹೆಚ್ಚು ಆರೋಗ್ಯ ತಜ್ಞರ ಪ್ರಕಾರ, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಕರುಳಿನ ಉರಿಯೂತ ಕಾಣಿಸಿಕೊಳ್ಳುತ್ತದೆ.

ಮತ್ತಷ್ಟು ಓದಿ: ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ

ಕರುಳಿನ ಉರಿಯೂತವನ್ನು ತಪ್ಪಿಸುವುದು ಹೇಗೆ? -ಫೈಬರ್ ಮತ್ತು ಪ್ರೋಟೀನ್ ಭರಿತ ಆಹಾರವನ್ನು ತೆಗೆದುಕೊಳ್ಳಿ. -ದಿನವೂ ವ್ಯಾಯಾಮ ಮಾಡಿ -ಮದ್ಯಪಾನದಿಂದ ಅಂತರ ಕಾಯ್ದುಕೊಳ್ಳಿ. -ಮಾನಸಿಕ ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. -ತಡರಾತ್ರಿಯಲ್ಲಿ ತಿನ್ನುವ ಅಭ್ಯಾಸವನ್ನು ಬದಲಾಯಿಸಿ. -ಪ್ರತಿರಕ್ಷಣಾ ವ್ಯವಸ್ಥೆಯನ್ನು ಸರಿಯಾಗಿ ಇರಿಸಿ. -ಹೆಚ್ಚು ಮೈದಾ ಮತ್ತು ಎಣ್ಣೆ ಪದಾರ್ಥಗಳನ್ನು ತಿನ್ನಬೇಡಿ. -ನಿಮಗೆ ಹೊಟ್ಟೆ ನೋವು ಇದ್ದರೆ ವೈದ್ಯರನ್ನು ಭೇಟಿ ಮಾಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು