AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದು ಮಾತ್ರವಲ್ಲ, ಹಲ್ಲಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ

ಮಾನಸಿಕ ಒತ್ತಡವು ಇತರ ದೀರ್ಘಕಾಲದ ಕಾಯಿಲೆಗಳೊಂದಿಗೆ ಬಾಯಿಯ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ತಿಳಿಸಿದೆ.

ಒತ್ತಡವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದು ಮಾತ್ರವಲ್ಲ, ಹಲ್ಲಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ
ಸಾಂದರ್ಭಿಕ ಚಿತ್ರImage Credit source: The Healthy
ಅಕ್ಷತಾ ವರ್ಕಾಡಿ
|

Updated on:Feb 17, 2023 | 2:26 PM

Share

ಒಬ್ಬ ವ್ಯಕ್ತಿಯು ಒತ್ತಡದಲ್ಲಿದ್ದಾಗ, ಆತನ ದೇಹದಲ್ಲಿ ಕಾರ್ಟಿಸೋಲ್ ಎಂಬ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದಲ್ಲದೇ ಕಾರ್ಟಿಸೋಲ್ ಹಾರ್ಮೋನ್​​ ಬಿಡುಗಡೆಯಿಂದಾಗಿ ನಿಮ್ಮ ಹಲ್ಲಿನ ನೈರ್ಮಲ್ಯದ ಕಡೆಗಣನೆಗೆ ಕಾರಣವಾಗಬಹುದು. ಏಕೆಂದರೆ ಈ ಹಾರ್ಮೋನ್​​ ನಿಮ್ಮನ್ನು ಆಲಸ್ಯಕ್ಕೆ ಕಾರಣವಾಗಿಸುತ್ತದೆ ಎಂದು ದಂತ ತಜ್ಞರು ಸಲಹೆ ನೀಡುತ್ತಾರೆ.

ಸ್ವಯಂ ಕಾಳಜಿಯ ಕೊರತೆ:

ಒತ್ತಡದ ಸಮಯದಲ್ಲಿ, ಸ್ವಯಂ-ಆರೈಕೆ ಒಂದು ಸವಾಲಾಗುತ್ತದೆ. ಈ ಸಮಯದಲ್ಲಿ ಜನರು ಹೆಚ್ಚು ಸಕ್ಕರೆಯುಳ್ಳ ಆಹಾರಗಳಲ್ಲಿ ತೊಡಗಿಸಿಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಹಲ್ಲಿನ ಕೊಳೆಯುವಿಕೆ, ಪಿರಿಯಾಂಟೈಟಿಸ್‌ನಂತಹ ಒಸಡು ಸಮಸ್ಯೆಗಳಿಗೆ ಕಾರಣವಾಗಬಹುದು.

ಒಣ ಬಾಯಿ ಅಥವಾ ಜೆರೋಸ್ಟೊಮಿಯಾ:

ಒತ್ತಡದ ಸಮಯದಲ್ಲಿ ದೇಹದಲ್ಲಿ ಕಡಿಮೆ ಲಾಲಾರಸದ ಉತ್ಪಾದನೆಯಿಂದಾಗಿ ಒಣ ಬಾಯಿ ಅಥವಾ ಜೆರೋಸ್ಟೊಮಿಯಾಗೆ ಕಾರಣವಾಗಬಹುದು. ಹಲ್ಲಿನ ಆರೋಗ್ಯದಲ್ಲಿ ಲಾಲಾರಸವು ತುಂಬಾ ಮುಖ್ಯ. ಏಕೆಂದರೆ ಇದು ಹಲ್ಲಿನ ನಡುವೆ ಇರುವ ಆಹಾರ ಕಣಗಳನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಆರೋಗ್ಯ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್​ನಲ್ಲಿ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ

ಕೆಟ್ಟ ಚಟಗಳಲ್ಲಿ ತೊಡಗಿಸಿಕೊಳ್ಳುವುದು:

ಅಧಿಕ ಒತ್ತಡದ ಸಮಯದಲ್ಲಿ ಸಾಕಷ್ಟು ಜನರು ಆಲ್ಕೋಹಾಲ್ ಮತ್ತು ತಂಬಾಕಿನ ಅತಿಯಾದ ಸೇವನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದು ನಿಮ್ಮ ಬಾಯಿಯ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಲ್ಲದೇ ಒತ್ತದ ಸಮಯದಲ್ಲಿ ದವಡೆಯನ್ನು ಬಿಗಿಗೊಳಿಸುವುದು ಸಾಮಾನ್ಯವಾಗಿದೆ. ಇದು ದವಡೆ ಮತ್ತು ಕಿವಿಗಳ ಸುತ್ತ ಒತ್ತಡ ಮತ್ತು ನೋವಿಗೆ ಕಾರಣವಾಗಬಹುದು” ಎಂದು ಡಾ ಡ್ಯಾಶ್ ಹೇಳಿದ್ದಾರೆ. ನೀವು ನಿಮ್ಮ ಬಾಯಿಯನ್ನು ತೆರೆಯುವಾಗ ಮತ್ತು ಮುಚ್ಚುವಾಗ ನೀವು ತೊಂದರೆಯನ್ನು ಅನುಭವಿಸಿದರೆ ಇದನ್ನು ಬ್ರಕ್ಸಿಸಮ್ ಎಂದು ಕರೆಯಲಾಗುತ್ತದೆ.

ಬಾಯಿಯಲ್ಲಿ ಹುಣ್ಣು:

ಒತ್ತಡವು ಬಾಯಿಯಲ್ಲಿ ಹುಣ್ಣುಗಳನ್ನು ಉಂಟುಮಾಡುತ್ತದೆ. ಇದು ಆಹಾರವನ್ನು ಸೇವಿಸುವಾಗ ಕಿರಿಕಿರಿಯನ್ನು ಉಂಟು ಮಾಡುವುದು ಮಾತ್ರವಲ್ಲದೇ, ಸಾಕಷ್ಟು ನೋವುಗಳಿಗೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:19 pm, Fri, 17 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ