AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ

Heart Disease:ಗಂಟೆ ಗಟ್ಟಲೆ ಟಿವಿ ನೋಟುವುದು ಸಿಗರೇಟ್ ಸೇವನೆಗಿಂತಲೂ ಹೆಚ್ಚು ಅಪಾಯಕಾರಿ, ಹೆಚ್ಚು ಹೊತ್ತು ಟಿವಿ ನೋಡಿದರೆ ಹೃದ್ರೋಗ ಸಮಸ್ಯೆ ಹೆಚ್ಚಾಗಲಿದೆ. ಹೊಸ ಅಧ್ಯಯನದ ಪ್ರಕಾರ ಟಿವಿ ನೋಡುವುದನ್ನು ಕಡಿಮೆ ಮಾಡುವುದರಿಂದ ಶೇ.11ರಷ್ಟು ಹೃದಯ ಸಂಬಂಧಿ ಕಾಯಿಲೆಯನ್ನು ತಡೆಗಟ್ಟಬಹುದು.

Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Television
TV9 Web
| Edited By: |

Updated on: May 26, 2022 | 3:17 PM

Share

ಗಂಟೆ ಗಟ್ಟಲೆ ಟಿವಿ ನೋಟುವುದು ಸಿಗರೇಟ್ ಸೇವನೆಗಿಂತಲೂ ಹೆಚ್ಚು ಅಪಾಯಕಾರಿ, ಹೆಚ್ಚು ಹೊತ್ತು ಟಿವಿ ನೋಡಿದರೆ ಹೃದ್ರೋಗ ಸಮಸ್ಯೆ ಹೆಚ್ಚಾಗಲಿದೆ. ಹೊಸ ಅಧ್ಯಯನದ ಪ್ರಕಾರ ಟಿವಿ ನೋಡುವುದನ್ನು ಕಡಿಮೆ ಮಾಡುವುದರಿಂದ ಶೇ.11ರಷ್ಟು ಹೃದಯ ಸಂಬಂಧಿ ಕಾಯಿಲೆಯನ್ನು ತಡೆಗಟ್ಟಬಹುದು.

ಜನರು ಟಿವಿ ನೋಡುವ ಸಮಯವನ್ನು ಒಂದು ಗಂಟೆಗಿಂತಲೂ ಕಡಿಮೆ ಮಾಡುವ ಅಗತ್ಯವಿದೆ. ಯೂನಿವರ್ಸಿಟಿ ಆಫ್ ಹಾಂಕಾಂಗ್​ನ ಪ್ರೊ. ಕಿಮ್ ಎಂಬುವವರು ಈ ಅಧ್ಯಯನ ಮಾಡಿದ್ದು, ಹೆಚ್ಚು ಸಮಯದ ಕಾಲ ಟಿವಿ ನೋಡುವುದರಿಂದ ದೇಹದಲ್ಲಿ ಗ್ಲೂಕೋಸ್ ಹಾಗೂ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಅತಿಯಾದ ರಕ್ತದೊತ್ತಡ ಉಂಟಾಗಲಿದ್ದು ಅದು ಹೃದಯಾಘಾತ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರಣವಾಗಲಿದೆ. ಸಂಶೋಧಕರು 40 ರಿಂದ 69 ವರ್ಷ ವಯಸ್ಸಿನ 373,026 ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದರು, ಇವರೆಲ್ಲರೂ ಯುಕೆ ಬಯೋಬ್ಯಾಂಕ್​ನವರಾಗಿದ್ದಾರೆ, ಬಯೋಬ್ಯಾಂಕ್​ಗೆ ಸೇರುವಾಗ ಇವರ್ಯಾರಿಗೂ ಹೃದಯ ಸಂಬಂಧಿ ಕಾಯಿಲೆಗಳಿರಲಿಲ್ಲ. ಬಳಿಕ 9185 ಮಂದಿಯಲ್ಲಿ ಕಾಯಿಲೆ ಕಾಣಿಸಿಕೊಂಡಿತ್ತು. ಇವರುಗಳಲ್ಲಿ ಎಲ್ಲರೂ ಅತಿ ಹೆಚ್ಚು ಸಮಯವನ್ನು ಟಿವಿ ನೋಡುವುದರಲ್ಲಿ ಕಳೆಯುತ್ತಿದ್ದರು.

ದಿನಕ್ಕೆ 4ಕ್ಕಿಂತ ಹೆಚ್ಚು ಹೊತ್ತು ಟಿವಿ ನೋಡುವವರಿಗಿಂತ ದಿನಕ್ಕೆ ಒಂದು ತಾಸು ಅಥವಾ ಅದಕ್ಕಿಂತ ಕಡಿಮೆ ಸಮಯ ಟಿವಿ ನೋಡುವವರಲ್ಲಿ ಹೃದಯ ಸಂಬಂಧಿ ಕಾಯಿಲೆಯ ಅಪಾಯ ಕಡಿಮೆ ಎಂದು ಹೇಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆಯಿಂದ ಇರಬೇಕಾದ ಅಗತ್ಯ ಹಾಗೂ ಅನಿವಾರ್ಯತೆ ಎರಡು ಇದೆ. ?. ಹೃದಯಾಘಾತ ಎಂದರೆ ಎಲ್ಲರಲ್ಲೂ ಭಯ ಮೂಡುವುದು ಸಹಜ.

ಏಕೆಂದರೆ ಈ ಸಮಸ್ಯೆಯಿಂದ ಪ್ರತಿ ವರ್ಷ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ . ಕೆಲವರಿಗಂತೂ ಹಿಂದೆ ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಹ ಇದ್ದಕ್ಕಿದ್ದಂತೆ ಇದು ಸಂಭವಿಸುವುದರಿಂದ ಇದರ ಬಗ್ಗೆ ಹೆಚ್ಚು ಭಯ ಇರುತ್ತದೆ .

ಸಾಮಾನ್ಯವಾಗಿ ನಡೆದರೆ ಅಥವಾ ಮೆಟ್ಟಿಲು ಹತ್ತಿದಾಗ ಎದೆ ಭಾರವಾಗುವುದು ಅಥವಾ ಎದೆ ಒತ್ತಿದಂಗೆ ಆಗುವುದು . ಇದು ಹೃದಯ ಸಂಬಂಧಿ ಸಮಸ್ಯೆ ಆಗುವುದರ ಮುನ್ಸೂಚನೆ ಆಗಿರಬಹುದು . ಹೃದಯಕ್ಕೆ ರಕ್ತನಾಳಗಳ ಮೂಲಕ ರಕ್ತ ಚಲನೆಯಾಗುವುದರ ಬಗ್ಗೆ ನಿಮಗೆಲ್ಲ ತಿಳಿದಿದೆ.

ಆರೋಗ್ಯ ಸಂಬಂಧಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ