Acupuncture Therapy: ಆಕ್ಯುಪಂಕ್ಚರ್​ ಥೆರಪಿಯಿಂದ ಮಧುಮೇಹ ನಿಯಂತ್ರಣ ಸಾಧ್ಯ: ಅಧ್ಯಯನ

ಆಕ್ಯುಪಂಕ್ಚರ್​( Acupuncture) ಥೆರಪಿಯಿಂದ ಟೈಪ್-2 ಮಧುಮೇಹವನ್ನು ಗುಣಪಡಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ.

Acupuncture Therapy: ಆಕ್ಯುಪಂಕ್ಚರ್​ ಥೆರಪಿಯಿಂದ ಮಧುಮೇಹ ನಿಯಂತ್ರಣ ಸಾಧ್ಯ: ಅಧ್ಯಯನ
Acupuncture
Follow us
| Updated By: ನಯನಾ ರಾಜೀವ್

Updated on: Aug 03, 2022 | 10:43 AM

ಆಕ್ಯುಪಂಕ್ಚರ್​( Acupuncture) ಥೆರಪಿಯಿಂದ ಟೈಪ್-2 ಮಧುಮೇಹವನ್ನು ಗುಣಪಡಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಎಡಿತ್ ಕೋವಲ್ ವಿಶ್ವವಿದ್ಯಾಲಯದ ಹೊಸ ಅಧ್ಯಯನ ಪ್ರಕಾರ ಅಕ್ಯುಪಂಕ್ಚರ್ ಚಿಕಿತ್ಸೆಯು ಟೈಪ್ 2 ಮಧುಮೇಹವನ್ನು ತಪ್ಪಿಸುವ ಉಪಯುಕ್ತ ಸಾಧನವಾಗಿದೆ. ಪ್ರಿಡಿಯಾಬಿಟಿಸ್ ಹೊಂದಿರುವ 3600 ಕ್ಕೂ ಹೆಚ್ಚು ಜನರ ಮೇಲೆ ಅಕ್ಯುಪಂಕ್ಚರ್‌ನ ಥೆರಪಿಯನ್ನು ನಡೆಸಲಾಗಿತ್ತು.

ಆಕ್ಯುಪಂಕ್ಚರ್ ಥೆರಪಿ ನಡೆಸಿದ ಎರಡು ಗಂಟೆಗಳ ಬಳಿಕ ರಕ್ತದಲ್ಲಿ ಪ್ಲಾಸ್ಮಾ, ಗ್ಲೂಕೋಸ್, ಹಿಮೋಗ್ಲೋಬಿನ್ ಪ್ರಮಾಣ ಸುಧಾರಿಸುವುದು ಕಂಡುಬಂದಿದೆ. ಜೊತೆಗೆ ಪ್ರಿಡಿಯಾಬಿಟಿಸ್‌ನ ಸಂಭವದಲ್ಲಿ ಹೆಚ್ಚಿನ ಇಳಿಕೆ ಕಂಡುಬಂದಿದೆ.

ಸಂಶೋಧಕ ಮಿನ್ ಜಾಂಗ್ ಅವರು ಮಧುಮೇಹವನ್ನು ನಿವಾರಿಸಲು ಆಕ್ಯುಪಂಕ್ಚರ್ ಚಿಕಿತ್ಸೆ ಉತ್ತಮ ಎಂದು ಹೇಳಿದ್ದಾರೆ. ಇದು ಶೇ.11ರಷ್ಟು ಮಧುಮೇಹಿಗಳಲ್ಲಿ ಉತ್ತಮ ಪರಿಣಾಮ ಬೀರಿದೆ. 2045 ರ ವೇಳೆಗೆ ಸುಮಾರು 1.3 ಬಿಲಿಯನ್ ಜನರು ಮಧುಮೇಹ ಅಥವಾ ಪ್ರಿಡಿಯಾಬಿಟಿಸ್ ಹೊಂದಿರುತ್ತಾರೆ ಎಂದು ಇಂಟರ್ನ್ಯಾಷನಲ್ ಡಯಾಬಿಟಿಸ್ ಫೆಡರೇಶನ್ ಅಂದಾಜಿಸಿದೆ.

ಪ್ರಿಡಿಯಾಬಿಟಿಸ್ ಹೊಂದಿರುವ 93 ಪ್ರತಿಶತ ಜನರು 20 ವರ್ಷಗಳಲ್ಲಿ ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುತ್ತಾರೆ” ಎಂದು Ms ಜಾಂಗ್ ಹೇಳಿದರು.

ಆದರೆ ಜೀವನ ಶೈಲಿಯ ಬದಲಾವಣೆಯಿಂದಾಗಿಯೂ ಮಧುಮೇಹವನ್ನು ನಿಯಂತ್ರಿಸಬಹುದು. ಮಧುಮೇಹವು ಸಾಮಾನ್ಯವಾಗಿ ಜೀವನಶೈಲಿಯ ಅಂಶಗಳೊಂದಿಗೆ ಸಂಬಂಧ ಹೊಂದಿದ್ದರೂ, ಜೀವನದ ಇತರ ಅಂಶಗಳು ಸಹ ಪ್ರಭಾವ ಬೀರಬಹುದು ಅದರಲ್ಲಿ ಆಕ್ಯುಪಂಕ್ಚರ್ ಕೂಡ ಒಂದು.

“ನೀವು ನಿದ್ರೆಯ ಸಮಸ್ಯೆಗಳು, ಅಧಿಕ ರಕ್ತದೊತ್ತಡ, ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಿದ್ದರೆ ಆಕ್ಯುಪಂಕ್ಚರ್ ಉತ್ತಮ ವಿಧಾನ ಎನಿಸಿಕೊಳ್ಳುತ್ತದೆ. ಮಧುಮೇಹಿಗಳು ತಮ್ಮ ಚರ್ಮದ ಸಮಸ್ಯೆಗಳನ್ನು ಹೊಂದಿರಬಹುದು, ಆದ್ದರಿಂದ ಸೂಜಿಗಳನ್ನು ಬಳಸುವುದು ಯಾವಾಗಲೂ ಸೂಕ್ತವಲ್ಲ.

ನಾವು ಆಕ್ಯುಪಂಕ್ಚರ್ ಮತ್ತು ಮಧುಮೇಹದ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡಬೇಕಾಗಿದೆ ಏಕೆಂದರೆ ಪ್ರಿಡಿಯಾಬಿಟಿಸ್ ಬೆಳವಣಿಗೆಯನ್ನು ತಡೆಯಲು ನಾವು ಹೆಚ್ಚಿನ ಮಾರ್ಗಗಳನ್ನು ಕಂಡುಹಿಡಿಯಬೇಕಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!