AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acupuncture Therapy: ಆಕ್ಯುಪಂಕ್ಚರ್​ ಥೆರಪಿಯಿಂದ ಮಧುಮೇಹ ನಿಯಂತ್ರಣ ಸಾಧ್ಯ: ಅಧ್ಯಯನ

ಆಕ್ಯುಪಂಕ್ಚರ್​( Acupuncture) ಥೆರಪಿಯಿಂದ ಟೈಪ್-2 ಮಧುಮೇಹವನ್ನು ಗುಣಪಡಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ.

Acupuncture Therapy: ಆಕ್ಯುಪಂಕ್ಚರ್​ ಥೆರಪಿಯಿಂದ ಮಧುಮೇಹ ನಿಯಂತ್ರಣ ಸಾಧ್ಯ: ಅಧ್ಯಯನ
Acupuncture
TV9 Web
| Edited By: |

Updated on: Aug 03, 2022 | 10:43 AM

Share

ಆಕ್ಯುಪಂಕ್ಚರ್​( Acupuncture) ಥೆರಪಿಯಿಂದ ಟೈಪ್-2 ಮಧುಮೇಹವನ್ನು ಗುಣಪಡಿಸಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಎಡಿತ್ ಕೋವಲ್ ವಿಶ್ವವಿದ್ಯಾಲಯದ ಹೊಸ ಅಧ್ಯಯನ ಪ್ರಕಾರ ಅಕ್ಯುಪಂಕ್ಚರ್ ಚಿಕಿತ್ಸೆಯು ಟೈಪ್ 2 ಮಧುಮೇಹವನ್ನು ತಪ್ಪಿಸುವ ಉಪಯುಕ್ತ ಸಾಧನವಾಗಿದೆ. ಪ್ರಿಡಿಯಾಬಿಟಿಸ್ ಹೊಂದಿರುವ 3600 ಕ್ಕೂ ಹೆಚ್ಚು ಜನರ ಮೇಲೆ ಅಕ್ಯುಪಂಕ್ಚರ್‌ನ ಥೆರಪಿಯನ್ನು ನಡೆಸಲಾಗಿತ್ತು.

ಆಕ್ಯುಪಂಕ್ಚರ್ ಥೆರಪಿ ನಡೆಸಿದ ಎರಡು ಗಂಟೆಗಳ ಬಳಿಕ ರಕ್ತದಲ್ಲಿ ಪ್ಲಾಸ್ಮಾ, ಗ್ಲೂಕೋಸ್, ಹಿಮೋಗ್ಲೋಬಿನ್ ಪ್ರಮಾಣ ಸುಧಾರಿಸುವುದು ಕಂಡುಬಂದಿದೆ. ಜೊತೆಗೆ ಪ್ರಿಡಿಯಾಬಿಟಿಸ್‌ನ ಸಂಭವದಲ್ಲಿ ಹೆಚ್ಚಿನ ಇಳಿಕೆ ಕಂಡುಬಂದಿದೆ.

ಸಂಶೋಧಕ ಮಿನ್ ಜಾಂಗ್ ಅವರು ಮಧುಮೇಹವನ್ನು ನಿವಾರಿಸಲು ಆಕ್ಯುಪಂಕ್ಚರ್ ಚಿಕಿತ್ಸೆ ಉತ್ತಮ ಎಂದು ಹೇಳಿದ್ದಾರೆ. ಇದು ಶೇ.11ರಷ್ಟು ಮಧುಮೇಹಿಗಳಲ್ಲಿ ಉತ್ತಮ ಪರಿಣಾಮ ಬೀರಿದೆ. 2045 ರ ವೇಳೆಗೆ ಸುಮಾರು 1.3 ಬಿಲಿಯನ್ ಜನರು ಮಧುಮೇಹ ಅಥವಾ ಪ್ರಿಡಿಯಾಬಿಟಿಸ್ ಹೊಂದಿರುತ್ತಾರೆ ಎಂದು ಇಂಟರ್ನ್ಯಾಷನಲ್ ಡಯಾಬಿಟಿಸ್ ಫೆಡರೇಶನ್ ಅಂದಾಜಿಸಿದೆ.

ಪ್ರಿಡಿಯಾಬಿಟಿಸ್ ಹೊಂದಿರುವ 93 ಪ್ರತಿಶತ ಜನರು 20 ವರ್ಷಗಳಲ್ಲಿ ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುತ್ತಾರೆ” ಎಂದು Ms ಜಾಂಗ್ ಹೇಳಿದರು.

ಆದರೆ ಜೀವನ ಶೈಲಿಯ ಬದಲಾವಣೆಯಿಂದಾಗಿಯೂ ಮಧುಮೇಹವನ್ನು ನಿಯಂತ್ರಿಸಬಹುದು. ಮಧುಮೇಹವು ಸಾಮಾನ್ಯವಾಗಿ ಜೀವನಶೈಲಿಯ ಅಂಶಗಳೊಂದಿಗೆ ಸಂಬಂಧ ಹೊಂದಿದ್ದರೂ, ಜೀವನದ ಇತರ ಅಂಶಗಳು ಸಹ ಪ್ರಭಾವ ಬೀರಬಹುದು ಅದರಲ್ಲಿ ಆಕ್ಯುಪಂಕ್ಚರ್ ಕೂಡ ಒಂದು.

“ನೀವು ನಿದ್ರೆಯ ಸಮಸ್ಯೆಗಳು, ಅಧಿಕ ರಕ್ತದೊತ್ತಡ, ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಿದ್ದರೆ ಆಕ್ಯುಪಂಕ್ಚರ್ ಉತ್ತಮ ವಿಧಾನ ಎನಿಸಿಕೊಳ್ಳುತ್ತದೆ. ಮಧುಮೇಹಿಗಳು ತಮ್ಮ ಚರ್ಮದ ಸಮಸ್ಯೆಗಳನ್ನು ಹೊಂದಿರಬಹುದು, ಆದ್ದರಿಂದ ಸೂಜಿಗಳನ್ನು ಬಳಸುವುದು ಯಾವಾಗಲೂ ಸೂಕ್ತವಲ್ಲ.

ನಾವು ಆಕ್ಯುಪಂಕ್ಚರ್ ಮತ್ತು ಮಧುಮೇಹದ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡಬೇಕಾಗಿದೆ ಏಕೆಂದರೆ ಪ್ರಿಡಿಯಾಬಿಟಿಸ್ ಬೆಳವಣಿಗೆಯನ್ನು ತಡೆಯಲು ನಾವು ಹೆಚ್ಚಿನ ಮಾರ್ಗಗಳನ್ನು ಕಂಡುಹಿಡಿಯಬೇಕಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್