AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಹೆಚ್ಚಿನ ಪ್ರಮಾಣದಲ್ಲಿ ಹಣ್ಣುಗಳನ್ನು ತಿಂತಿದ್ರೆ ಮಾನಸಿಕ ಸಮಸ್ಯೆಗಳು ಕಾಡಲ್ವಂತೆ!

ಹಣ್ಣುಗಳು ಖಿನ್ನತೆಯನ್ನು ಹೋಗಲಾಡಿಸಲುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬುದು ಅಧ್ಯಯನವೊಂದರಿಂದ ತಿಳಿದುಬಂದಿದೆ.

Mental Health: ಹೆಚ್ಚಿನ ಪ್ರಮಾಣದಲ್ಲಿ ಹಣ್ಣುಗಳನ್ನು ತಿಂತಿದ್ರೆ ಮಾನಸಿಕ ಸಮಸ್ಯೆಗಳು ಕಾಡಲ್ವಂತೆ!
Fruits
TV9 Web
| Edited By: |

Updated on: Jul 18, 2022 | 12:25 PM

Share

ಹಣ್ಣುಗಳು ಖಿನ್ನತೆಯನ್ನು ಹೋಗಲಾಡಿಸಲುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬುದು ಅಧ್ಯಯನವೊಂದರಿಂದ ತಿಳಿದುಬಂದಿದೆ. ಆಗಾಗ ಹಣ್ಣುಗಳನ್ನು ತಿನ್ನುವ ಜನರು ಕಡಿಮೆ ಮಾನಸಿಕ ಸಮಸ್ಯೆ ಎದುರಿಸಿದರೆ ಹಣ್ಣು ಸೇವಸದೆ ಇರುವವರು ಹೆಚ್ಚಿನ ಖಿನ್ನತೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಮತ್ತೊಂದೆಡೆ, ಕಡಿಮೆ ಪೋಷಕಾಂಶಗಳನ್ನು ಹೊಂದಿರುವ ಖಾರದ ತಿಂಡಿಗಳನ್ನು ತಿನ್ನುವ ಜನರು ಹೆಚ್ಚಿನ ಮಟ್ಟದ ಆತಂಕವನ್ನು ಹೊಂದಿದ್ದಾರೆ ಎಂಬುದು ತಿಳಿದುಬಂದಿದೆ.

ಯುಕೆಯ ಆಸ್ಟನ್ ವಿಶ್ವವಿದ್ಯಾಲಯ ಈ ಸಂಶೋಧನೆಯನ್ನು ಮಾಡಿದೆ. ಬ್ರಿಟಿಷ್ ಜರ್ನಲ್ ಆಫ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಯುಕೆಯಾದ್ಯಂತ 428 ವಯಸ್ಕರನ್ನು ಸಮೀಕ್ಷೆಗೆ ಒಳಪಡಿಸಿತು ಮತ್ತು ಅವರ ಹಣ್ಣು, ತರಕಾರಿಗಳು, ಸಿಹಿ ಮತ್ತು ಖಾರದ ಆಹಾರ ತಿಂಡಿಗಳ ಸೇವನೆ ಮತ್ತು ಅವರ ಮಾನಸಿಕ ಆರೋಗ್ಯದ ನಡುವಿನ ಸಂಬಂಧವನ್ನು ನೋಡಿದೆ.

ಫಲಿತಾಂಶಗಳು ಪೌಷ್ಟಿಕಾಂಶ-ಭರಿತ ಹಣ್ಣು ಮತ್ತು ಪೌಷ್ಟಿಕ-ಕಳಪೆ ಖಾರದ ತಿಂಡಿಗಳು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿವೆ ಎಂದು ತೋರಿಸಿದೆ. ಆದರೆ ತರಕಾರಿಗಳನ್ನು ತಿನ್ನುವುದು ಮತ್ತು ಮಾನಸಿಕ ಆರೋಗ್ಯದ ನಡುವೆ ಯಾವುದೇ ನೇರ ಸಂಬಂಧ ಕಂಡುಬಂದಿಲ್ಲ.

“ಆಹಾರವು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಕುರಿತು ಬಹಳ ಕಡಿಮೆ ಸಂಶೋಧನೆಗಳು ನಡೆದಿವೆ. ಖಾರ, ಕರಿದ ಆಹಾರಗಳನ್ನು ತಿನ್ನುವುದರಿಂದ ಮಾನಸಿಕ ಅಸ್ವಸ್ಥತೆ ಹೆಚ್ಚಲಿದೆ ಎಂಬುದು ತಿಳಿದುಬಂದಿದೆ.

ಹಣ್ಣು ಮತ್ತು ತರಕಾರಿಗಳೆರಡೂ ಉತ್ಕರ್ಷಣ ನಿರೋಧಕಗಳು, ಫೈಬರ್ ಮತ್ತು ಅಗತ್ಯವಾದ ಸೂಕ್ಷ್ಮ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಮೆದುಳನ್ನು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ನಮ್ಮ ಆಹಾರ ವ್ಯವಸ್ಥೆಯನ್ನು ನಾವು ಸುಲಭವಾಗಿ ಬದಲಾಯಿಸಿಕೊಳ್ಳಬಹುದು.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ