AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು

ವಿಚ್ಛೇದನ ಪಡೆದು ದೂರವಾಗಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನ ಹೇಳಿದೆ. ಪೋಷಕರ ಪ್ರೀತಿ ಸಿಗದೆ ಕೆಲವು ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ, ಬೇಡದ ಚಟಗಳನ್ನು ಅಂಟಿಸಿಕೊಳ್ಳುತ್ತಾರೆ, ಇದು ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು
ಪೋಷಕರು Image Credit source: Medium
ನಯನಾ ರಾಜೀವ್
|

Updated on: Jan 27, 2025 | 11:16 AM

Share

ವಿಚ್ಛೇದನ ಪಡೆದಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನವೊಂದು ಹೇಳಿದೆ. ಈ ಮಕ್ಕಳು ದೊಡ್ಡವರಾದ ಬಳಿಕ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ ಎಂದು ವೈದ್ಯರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. PLOS One ಜರ್ನಲ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. ಈ ಅಧ್ಯಯನವು 65 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ 13,000 ಜನರನ್ನು ಸಮೀಕ್ಷೆಗೊಳಪಡಿಸಿದೆ.

ತುಂಬು ಕುಟುಂಬದಲ್ಲಿ ಬೆಳೆದವರಿಗೆ ಹೋಲಿಸಿದರೆ ವಿಚ್ಛೇದನ ಪಡೆದ ಪೋಷಕರ ಮಕ್ಕಳು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಶೇ.60ರಷ್ಟಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ಮೆದುಳಿನ ಭಾಗಕ್ಕೆ ರಕ್ತ ಪೂರೈಕೆ ನಿಂತಾಗ, ಮೆದುಳಿನಲ್ಲಿರುವ ರಕ್ತನಾಳವು ಸಿಡಿದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಈ ಎರಡೂ ಸಂದರ್ಭಗಳಲ್ಲಿ ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ. ಪಾರ್ಶ್ವವಾಯು ಶಾಶ್ವತವಾದ ಮಿದುಳಿನ ಹಾನಿ, ದೀರ್ಘಾವಧಿಯ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು.

ಮತ್ತಷ್ಟು ಓದಿ: ಎಐ ಮೂಲಕ ಪಾರ್ಶ್ವವಾಯು ಸಮಸ್ಯೆಗೆ ತ್ವರಿತ ಚಿಕಿತ್ಸೆ

ಮಕ್ಕಳಾಗಿದ್ದಾಗ ದೈಹಿಕವಾಗಿ ಅಥವಾ ಮಾನಸಿಕವಾಗಿ ನಿಂದನೆಗೆ ಒಳಗಾದವರು ಹಾಗೂ ವಿಚ್ಛೇದಿತ ಕುಟುಂಬಗಳಲ್ಲಿ ಆಸರೆ ಇಲ್ಲದೆ ಬೆಳೆದವರಿಗೆ ಈ ಅಪಾಯ ಹೆಚ್ಚು ಟೊರೊಂಟೊ ವಿಶ್ವವಿದ್ಯಾಲಯದ ಅಧ್ಯಯನ ಲೇಖಕ ಎಸ್ಮೆ ಫುಲ್ಲರ್-ಥಾಮ್ಸನ್ ಹೇಳಿದ್ದಾರೆ.

ಪೋಷಕರ ವಿಚ್ಛೇದನ ಮತ್ತು ಪಾರ್ಶ್ವವಾಯು ನಡುವಿನ ಸಂಬಂಧದ ಪ್ರಮಾಣವು ಪುರುಷ ಹಾಗೂ ಮಹಿಳೆಯರಲ್ಲಿ ಒಂದೇ ರೀತಿಯಾಗಿಲ್ಲ. ವಿಚ್ಛೇದನವೇ ಇದಕ್ಕೆಲ್ಲಾ ಕಾರಣ ಎಂದು ಹೇಳಲಾಗುವುದಿಲ್ಲ. ಪೋಷಕರ ವಿಚ್ಛೇದನವು ಖಿನ್ನತೆ, ಮಧುಮೇಹ, ಮಾದಕ ವ್ಯಸನ, ಧೂಮಪಾನ ವ್ಯಸನಿಗಳನ್ನಾಗಿ ಮಾಡುತ್ತದೆ.

ಪಾರ್ಶ್ವವಾಯು ಲಕ್ಷಣಗಳು ಮುಖ, ತೋಳು ಅಥವಾ ಒಂದು ಕಾಲಿನ ಹಠಾತ್ ಮರಗಟ್ಟುವಿಕೆ ಅಥವಾ ದೌರ್ಬಲ್ಯ ಹಠಾತ್ ಗೊಂದಲ, ಮಾತನಾಡಲು ತೊಂದರೆ, ಅಥವಾ ಮಾತನ್ನು ಅರ್ಥಮಾಡಿಕೊಳ್ಳಲು ತೊಂದರೆ ಒಂದು ಅಥವಾ ಎರಡೂ ಕಣ್ಣುಗಳಲ್ಲಿ ಹಠಾತ್ ತೊಂದರೆ

ನಡೆಯಲು ಸಾಧ್ಯವಾಗದಿರುವುದು, ತಲೆ ತಿರುಗುವಿಕೆ, ತೀವ್ರ ತಲೆ ನೋವು ಒಂದು ಅಥವಾ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಳ್ಳುವುದು ಒಂದು ತೋಳಿನಲ್ಲಿ ದೌರ್ಬಲ್ಯ ಅಥವಾ ಮರಗಟ್ಟುವಿಕೆ ಭಾವನೆ ತೊದಲು ಮಾತು ಇಂಥಾ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ