AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು

ವಿಚ್ಛೇದನ ಪಡೆದು ದೂರವಾಗಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನ ಹೇಳಿದೆ. ಪೋಷಕರ ಪ್ರೀತಿ ಸಿಗದೆ ಕೆಲವು ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ, ಬೇಡದ ಚಟಗಳನ್ನು ಅಂಟಿಸಿಕೊಳ್ಳುತ್ತಾರೆ, ಇದು ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು
ಪೋಷಕರು Image Credit source: Medium
ನಯನಾ ರಾಜೀವ್
|

Updated on: Jan 27, 2025 | 11:16 AM

Share

ವಿಚ್ಛೇದನ ಪಡೆದಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನವೊಂದು ಹೇಳಿದೆ. ಈ ಮಕ್ಕಳು ದೊಡ್ಡವರಾದ ಬಳಿಕ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ ಎಂದು ವೈದ್ಯರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. PLOS One ಜರ್ನಲ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. ಈ ಅಧ್ಯಯನವು 65 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ 13,000 ಜನರನ್ನು ಸಮೀಕ್ಷೆಗೊಳಪಡಿಸಿದೆ.

ತುಂಬು ಕುಟುಂಬದಲ್ಲಿ ಬೆಳೆದವರಿಗೆ ಹೋಲಿಸಿದರೆ ವಿಚ್ಛೇದನ ಪಡೆದ ಪೋಷಕರ ಮಕ್ಕಳು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಶೇ.60ರಷ್ಟಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ಮೆದುಳಿನ ಭಾಗಕ್ಕೆ ರಕ್ತ ಪೂರೈಕೆ ನಿಂತಾಗ, ಮೆದುಳಿನಲ್ಲಿರುವ ರಕ್ತನಾಳವು ಸಿಡಿದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಈ ಎರಡೂ ಸಂದರ್ಭಗಳಲ್ಲಿ ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ. ಪಾರ್ಶ್ವವಾಯು ಶಾಶ್ವತವಾದ ಮಿದುಳಿನ ಹಾನಿ, ದೀರ್ಘಾವಧಿಯ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು.

ಮತ್ತಷ್ಟು ಓದಿ: ಎಐ ಮೂಲಕ ಪಾರ್ಶ್ವವಾಯು ಸಮಸ್ಯೆಗೆ ತ್ವರಿತ ಚಿಕಿತ್ಸೆ

ಮಕ್ಕಳಾಗಿದ್ದಾಗ ದೈಹಿಕವಾಗಿ ಅಥವಾ ಮಾನಸಿಕವಾಗಿ ನಿಂದನೆಗೆ ಒಳಗಾದವರು ಹಾಗೂ ವಿಚ್ಛೇದಿತ ಕುಟುಂಬಗಳಲ್ಲಿ ಆಸರೆ ಇಲ್ಲದೆ ಬೆಳೆದವರಿಗೆ ಈ ಅಪಾಯ ಹೆಚ್ಚು ಟೊರೊಂಟೊ ವಿಶ್ವವಿದ್ಯಾಲಯದ ಅಧ್ಯಯನ ಲೇಖಕ ಎಸ್ಮೆ ಫುಲ್ಲರ್-ಥಾಮ್ಸನ್ ಹೇಳಿದ್ದಾರೆ.

ಪೋಷಕರ ವಿಚ್ಛೇದನ ಮತ್ತು ಪಾರ್ಶ್ವವಾಯು ನಡುವಿನ ಸಂಬಂಧದ ಪ್ರಮಾಣವು ಪುರುಷ ಹಾಗೂ ಮಹಿಳೆಯರಲ್ಲಿ ಒಂದೇ ರೀತಿಯಾಗಿಲ್ಲ. ವಿಚ್ಛೇದನವೇ ಇದಕ್ಕೆಲ್ಲಾ ಕಾರಣ ಎಂದು ಹೇಳಲಾಗುವುದಿಲ್ಲ. ಪೋಷಕರ ವಿಚ್ಛೇದನವು ಖಿನ್ನತೆ, ಮಧುಮೇಹ, ಮಾದಕ ವ್ಯಸನ, ಧೂಮಪಾನ ವ್ಯಸನಿಗಳನ್ನಾಗಿ ಮಾಡುತ್ತದೆ.

ಪಾರ್ಶ್ವವಾಯು ಲಕ್ಷಣಗಳು ಮುಖ, ತೋಳು ಅಥವಾ ಒಂದು ಕಾಲಿನ ಹಠಾತ್ ಮರಗಟ್ಟುವಿಕೆ ಅಥವಾ ದೌರ್ಬಲ್ಯ ಹಠಾತ್ ಗೊಂದಲ, ಮಾತನಾಡಲು ತೊಂದರೆ, ಅಥವಾ ಮಾತನ್ನು ಅರ್ಥಮಾಡಿಕೊಳ್ಳಲು ತೊಂದರೆ ಒಂದು ಅಥವಾ ಎರಡೂ ಕಣ್ಣುಗಳಲ್ಲಿ ಹಠಾತ್ ತೊಂದರೆ

ನಡೆಯಲು ಸಾಧ್ಯವಾಗದಿರುವುದು, ತಲೆ ತಿರುಗುವಿಕೆ, ತೀವ್ರ ತಲೆ ನೋವು ಒಂದು ಅಥವಾ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಳ್ಳುವುದು ಒಂದು ತೋಳಿನಲ್ಲಿ ದೌರ್ಬಲ್ಯ ಅಥವಾ ಮರಗಟ್ಟುವಿಕೆ ಭಾವನೆ ತೊದಲು ಮಾತು ಇಂಥಾ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ