AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು

ವಿಚ್ಛೇದನ ಪಡೆದು ದೂರವಾಗಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನ ಹೇಳಿದೆ. ಪೋಷಕರ ಪ್ರೀತಿ ಸಿಗದೆ ಕೆಲವು ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ, ಬೇಡದ ಚಟಗಳನ್ನು ಅಂಟಿಸಿಕೊಳ್ಳುತ್ತಾರೆ, ಇದು ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ವಿಚ್ಛೇದಿತ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು
ಪೋಷಕರು Image Credit source: Medium
Follow us
ನಯನಾ ರಾಜೀವ್
|

Updated on: Jan 27, 2025 | 11:16 AM

ವಿಚ್ಛೇದನ ಪಡೆದಿರುವ ಪೋಷಕರ ಮಕ್ಕಳಿಗೆ ಪಾರ್ಶ್ವವಾಯು ಅಪಾಯ ಹೆಚ್ಚು ಎಂದು ಅಧ್ಯಯನವೊಂದು ಹೇಳಿದೆ. ಈ ಮಕ್ಕಳು ದೊಡ್ಡವರಾದ ಬಳಿಕ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ ಎಂದು ವೈದ್ಯರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. PLOS One ಜರ್ನಲ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. ಈ ಅಧ್ಯಯನವು 65 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ 13,000 ಜನರನ್ನು ಸಮೀಕ್ಷೆಗೊಳಪಡಿಸಿದೆ.

ತುಂಬು ಕುಟುಂಬದಲ್ಲಿ ಬೆಳೆದವರಿಗೆ ಹೋಲಿಸಿದರೆ ವಿಚ್ಛೇದನ ಪಡೆದ ಪೋಷಕರ ಮಕ್ಕಳು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಶೇ.60ರಷ್ಟಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ. ಈ ಜನರಲ್ಲಿ ಖಿನ್ನತೆ, ಮಧುಮೇಹ ಸಂಬಂಧಿತ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬಂದಿದೆ. ಇವೆಲ್ಲವೂ ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನ ಹೇಳಿದೆ.

ಮೆದುಳಿನ ಭಾಗಕ್ಕೆ ರಕ್ತ ಪೂರೈಕೆ ನಿಂತಾಗ, ಮೆದುಳಿನಲ್ಲಿರುವ ರಕ್ತನಾಳವು ಸಿಡಿದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಈ ಎರಡೂ ಸಂದರ್ಭಗಳಲ್ಲಿ ಮೆದುಳಿನ ಭಾಗಗಳು ಹಾನಿಗೊಳಗಾಗುತ್ತವೆ. ಪಾರ್ಶ್ವವಾಯು ಶಾಶ್ವತವಾದ ಮಿದುಳಿನ ಹಾನಿ, ದೀರ್ಘಾವಧಿಯ ಅಂಗವೈಕಲ್ಯ ಅಥವಾ ಸಾವಿಗೆ ಕಾರಣವಾಗಬಹುದು.

ಮತ್ತಷ್ಟು ಓದಿ: ಎಐ ಮೂಲಕ ಪಾರ್ಶ್ವವಾಯು ಸಮಸ್ಯೆಗೆ ತ್ವರಿತ ಚಿಕಿತ್ಸೆ

ಮಕ್ಕಳಾಗಿದ್ದಾಗ ದೈಹಿಕವಾಗಿ ಅಥವಾ ಮಾನಸಿಕವಾಗಿ ನಿಂದನೆಗೆ ಒಳಗಾದವರು ಹಾಗೂ ವಿಚ್ಛೇದಿತ ಕುಟುಂಬಗಳಲ್ಲಿ ಆಸರೆ ಇಲ್ಲದೆ ಬೆಳೆದವರಿಗೆ ಈ ಅಪಾಯ ಹೆಚ್ಚು ಟೊರೊಂಟೊ ವಿಶ್ವವಿದ್ಯಾಲಯದ ಅಧ್ಯಯನ ಲೇಖಕ ಎಸ್ಮೆ ಫುಲ್ಲರ್-ಥಾಮ್ಸನ್ ಹೇಳಿದ್ದಾರೆ.

ಪೋಷಕರ ವಿಚ್ಛೇದನ ಮತ್ತು ಪಾರ್ಶ್ವವಾಯು ನಡುವಿನ ಸಂಬಂಧದ ಪ್ರಮಾಣವು ಪುರುಷ ಹಾಗೂ ಮಹಿಳೆಯರಲ್ಲಿ ಒಂದೇ ರೀತಿಯಾಗಿಲ್ಲ. ವಿಚ್ಛೇದನವೇ ಇದಕ್ಕೆಲ್ಲಾ ಕಾರಣ ಎಂದು ಹೇಳಲಾಗುವುದಿಲ್ಲ. ಪೋಷಕರ ವಿಚ್ಛೇದನವು ಖಿನ್ನತೆ, ಮಧುಮೇಹ, ಮಾದಕ ವ್ಯಸನ, ಧೂಮಪಾನ ವ್ಯಸನಿಗಳನ್ನಾಗಿ ಮಾಡುತ್ತದೆ.

ಪಾರ್ಶ್ವವಾಯು ಲಕ್ಷಣಗಳು ಮುಖ, ತೋಳು ಅಥವಾ ಒಂದು ಕಾಲಿನ ಹಠಾತ್ ಮರಗಟ್ಟುವಿಕೆ ಅಥವಾ ದೌರ್ಬಲ್ಯ ಹಠಾತ್ ಗೊಂದಲ, ಮಾತನಾಡಲು ತೊಂದರೆ, ಅಥವಾ ಮಾತನ್ನು ಅರ್ಥಮಾಡಿಕೊಳ್ಳಲು ತೊಂದರೆ ಒಂದು ಅಥವಾ ಎರಡೂ ಕಣ್ಣುಗಳಲ್ಲಿ ಹಠಾತ್ ತೊಂದರೆ

ನಡೆಯಲು ಸಾಧ್ಯವಾಗದಿರುವುದು, ತಲೆ ತಿರುಗುವಿಕೆ, ತೀವ್ರ ತಲೆ ನೋವು ಒಂದು ಅಥವಾ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಳ್ಳುವುದು ಒಂದು ತೋಳಿನಲ್ಲಿ ದೌರ್ಬಲ್ಯ ಅಥವಾ ಮರಗಟ್ಟುವಿಕೆ ಭಾವನೆ ತೊದಲು ಮಾತು ಇಂಥಾ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ