AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breast Cancer: ಸ್ತನ ಕ್ಯಾನ್ಸರ್​ ಆರಂಭಿಕ ಹಂತದಲ್ಲೇ ಪತ್ತೆಯಾದರೆ ರೇಡಿಯೋಥೆರಪಿ ಅಗತ್ಯವಿಲ್ಲ

ಸ್ತನ ಕ್ಯಾನ್ಸರ್​( Breast Cancer) ಅನ್ನು ಆರಂಭಿಕ ಹಂತದಲ್ಲೇ ಪತ್ತೆಮಾಡಿದರೆ ಶಸ್ತ್ರಚಿಕಿತ್ಸೆ ಬಳಿಕ ರೇಡಿಯೋಥೆರಪಿಯ ಅಗತ್ಯವಿರುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೌದು ಮ್ಯಾಕ್​ಮಾಸ್ಟರ್ ಯೂನಿವರ್ಸಿಟಿಯ ವರದಿ ಪ್ರಕಾರ ಸ್ತನ ಕ್ಯಾನ್ಸರ್​ ಅನ್ನು ಮೊದಲೇ ಪತ್ತೆ ಮಾಡಿದರೆ ರೇಡಿಯೋ ಥೆರಪಿ ಇಲ್ಲದೆ ಗುಣಪಡಿಸಬಹುದು ಎಂದು ಹೇಳಲಾಗಿದೆ

Breast Cancer: ಸ್ತನ ಕ್ಯಾನ್ಸರ್​ ಆರಂಭಿಕ ಹಂತದಲ್ಲೇ ಪತ್ತೆಯಾದರೆ ರೇಡಿಯೋಥೆರಪಿ ಅಗತ್ಯವಿಲ್ಲ
ಸ್ತನ ಕ್ಯಾನ್ಸರ್
TV9 Web
| Edited By: |

Updated on: Jun 11, 2022 | 8:00 AM

Share

ಸ್ತನ ಕ್ಯಾನ್ಸರ್​( Breast Cancer) ಅನ್ನು ಆರಂಭಿಕ ಹಂತದಲ್ಲೇ ಪತ್ತೆಮಾಡಿದರೆ ಶಸ್ತ್ರಚಿಕಿತ್ಸೆ ಬಳಿಕ ರೇಡಿಯೋಥೆರಪಿಯ ಅಗತ್ಯವಿರುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೌದು ಮ್ಯಾಕ್​ಮಾಸ್ಟರ್ ಯೂನಿವರ್ಸಿಟಿಯ ವರದಿ ಪ್ರಕಾರ ಸ್ತನ ಕ್ಯಾನ್ಸರ್​ ಅನ್ನು ಮೊದಲೇ ಪತ್ತೆ ಮಾಡಿದರೆ ರೇಡಿಯೋ ಥೆರಪಿ ಇಲ್ಲದೆ ಗುಣಪಡಿಸಬಹುದು ಎಂದು ಹೇಳಲಾಗಿದೆ. ಅವರ ತಂಡವು ಓಂಟಾರಿಯೋ ಕ್ಲಿನಿಕಲ್ ಆಂಕೊಲಜಿ ಗ್ರೂಪ್ ಜತೆ ಕೆಲಸ ಮಾಡುತ್ತಿದ್ದು, 501 ಕ್ಯಾನ್ಸರ್ ರೋಗಿಗಳನ್ನು ಅಧ್ಯಯನಕ್ಕೆ ಬಳಸಿಕೊಂಡಿತ್ತು.

ಸಾಮಾನ್ಯವಾಗಿ ಕ್ಯಾನ್ಸರ್ ಪತ್ತೆಯಾದ ಬಳಿಕ ಐದು ವಾರಗಳವರೆಗೆ ರೇಡಿಯೋಥೆರಪಿ ಚಿಕಿತ್ಸೆಯನ್ನು ಪಡೆಯುತ್ತಾರೆ. ಆದರೆ ರೇಡಿಯೋ ಥೆರಪಿಯಿಂದ ಸಾಕಷ್ಟು ಅಡ್ಡಪರಿಣಾಮಗಳಿವೆ. ಕೂದಲು ಉದುರುವಿಕೆ, ಮೈ ಕೈ ತುರಿಕೆ ಸೇರಿದಂತೆ ಹಲವು ಸಮಸ್ಯೆಗಳಿವೆ.

ಎಲ್ಲಾ ಕ್ಯಾನ್ಸರ್​ಗಳೂ ಒಂದೇ ಮಾದರಿಯ ಚಿಕಿತ್ಸೆಯ ಅಗತ್ಯವಿರುವುದಿಲ್ಲ, ಬೆಂಗಳೂರಿನಲ್ಲಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರತಿ 1 ಲಕ್ಷ ಮಹಿಳೆಯರಲ್ಲಿ 41 ಮಂದಿಯಲ್ಲಿ ಈ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಅಲ್ಲದೆ, ಬೆಂಗಳೂರಿನಲ್ಲಿ ಪ್ರತಿ 1 ಲಕ್ಷ ಮಂದಿಯಲ್ಲಿ 126 ಜನರಲ್ಲಿ ವಿವಿಧ ರೀತಿಯ ಕ್ಯಾನ್ಸರ್‌ ಕಾಣಿಸಿಕೊಳ್ಳುತ್ತಿವೆ.

ಬೆಂಗಳೂರಿನಲ್ಲಿ ಪ್ರತಿ ವರ್ಷ 1,600 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದ್ದು, ಸದ್ಯ ಐದು ಸಾವಿರ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ತನ ಕ್ಯಾನ್ಸರ್ ಲಕ್ಷಣಗಳು

ಸ್ತನದ ಮೇಲಿನ ಚರ್ಮ ಕೆಂಪಾಗುವಿಕೆ, ಕಂಕುಳು ಭಾಗದಲ್ಲಿ ಗಂಟು ಕಾಣಿಸಿಕೊಳ್ಳುವುದು. ಸ್ತನದಲ್ಲಿ ಗಂಟು, ಸ್ತನ ಗಾತ್ರ ಜಾಸ್ತಿಯಾಗುವುದು, ತೊಟ್ಟಿನಲ್ಲಿ ಹುಣ್ಣು ಕಾಣಿಸಿಕೊಳ್ಳುವುದು, ಸ್ತನದ ತೊಟ್ಟಿನಲ್ಲಿ ದ್ರವದಂತಹ ವಸ್ತು ಅಥವಾ ರಕ್ತ ಸ್ರಾವ ಕಂಡು ಬರುವುದು.

ಸ್ತನ ಕ್ಯಾನ್ಸರ್‌ಗೆ ಕಾರಣ -ಮದುವೆ ವಿಳಂಬ -ತಡವಾಗಿ ಮಕ್ಕಳಾಗುವುದು (30 ವರ್ಷದ ನಂತರ) -ಚಿಕ್ಕವಯಸ್ಸಿನಲ್ಲಿಯೇ ಋುತುಮತಿ ಹಾಗೂ ತಡವಾಗಿ ಮುಟ್ಟು ನಿಲ್ಲುವುದು -ಋುತು ಚಕ್ರದಲ್ಲಿ ದೀರ್ಘಾವಧಿ ವ್ಯತ್ಯಯ -ಮಕ್ಕಳಿಗೆ ಸ್ತನ್ಯಪಾನ ಮಾಡಿಸಲು ಹಿಂಜರಿಕೆ -ವಂಶವಾಹಿ -ಒತ್ತಡದ ಜೀವನ ಶೈಲಿ -ಮದ್ಯ ಹಾಗೂ ಧೂಮಪಾನ -ಬೊಜ್ಜು

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ