AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್,  ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್
Tattoo
Follow us
TV9 Web
| Updated By: ನಯನಾ ರಾಜೀವ್

Updated on: Aug 26, 2022 | 7:00 AM

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ನಮ್ಮೊಂದಿಗೆ ಸಾಯುವವರೆಗೂ ಇರುತ್ತದೆ ಎನ್ನುವುದು ಸಂತೋಷದ ವಿಷಯ ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವುದು ಆತಂಕಕಾಗಿ ವಿಚಾರವಾಗಿದೆ.

ಟ್ಯಾಟೂ ಶಾಯಿಯ ಮೇಲೆ ನಡೆಸಿದ ಅಧ್ಯಯನದಲ್ಲಿ ಕೆಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಟ್ಯಾಟೂಗೆ ಬಳಸುವ ಇಂಕ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಅಂಶವಿರುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಇದರ ಭಾಗವಾಗಿ, ನ್ಯೂಯಾರ್ಕ್ ಸ್ಟೇಟ್ ಯೂನಿವರ್ಸಿಟಿಯ ವಿಜ್ಞಾನಿ ಸ್ವಿಯರ್ಕ್ ನೇತೃತ್ವದಲ್ಲಿ ಸುಮಾರು 100 ಟ್ಯಾಟೂ ಶಾಯಿಗಳನ್ನು ವಿಶ್ಲೇಷಿಸಲಾಗಿದೆ. ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.

ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.

ರಾಸಾಯನಿಕವಾಗಿ ಅಖಂಡವಾಗಿರುವಾಗ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಅಧ್ಯಯನಗಳು ಬಹಿರಂಗಪಡಿಸಿವೆ.

ಜೊತೆಗೆ ಟ್ಯಾಟೂ ಹಾಕಿಸಿಕೊಳ್ಳುವಾಗ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದಿದ್ದರೆ ಚರ್ಮ ಕೆರಳಿಕೆ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಹೇಳಲಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್