AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್,  ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್
Tattoo
TV9 Web
| Updated By: ನಯನಾ ರಾಜೀವ್|

Updated on: Aug 26, 2022 | 7:00 AM

Share

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ನಮ್ಮೊಂದಿಗೆ ಸಾಯುವವರೆಗೂ ಇರುತ್ತದೆ ಎನ್ನುವುದು ಸಂತೋಷದ ವಿಷಯ ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವುದು ಆತಂಕಕಾಗಿ ವಿಚಾರವಾಗಿದೆ.

ಟ್ಯಾಟೂ ಶಾಯಿಯ ಮೇಲೆ ನಡೆಸಿದ ಅಧ್ಯಯನದಲ್ಲಿ ಕೆಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಟ್ಯಾಟೂಗೆ ಬಳಸುವ ಇಂಕ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಅಂಶವಿರುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಇದರ ಭಾಗವಾಗಿ, ನ್ಯೂಯಾರ್ಕ್ ಸ್ಟೇಟ್ ಯೂನಿವರ್ಸಿಟಿಯ ವಿಜ್ಞಾನಿ ಸ್ವಿಯರ್ಕ್ ನೇತೃತ್ವದಲ್ಲಿ ಸುಮಾರು 100 ಟ್ಯಾಟೂ ಶಾಯಿಗಳನ್ನು ವಿಶ್ಲೇಷಿಸಲಾಗಿದೆ. ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.

ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.

ರಾಸಾಯನಿಕವಾಗಿ ಅಖಂಡವಾಗಿರುವಾಗ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಅಧ್ಯಯನಗಳು ಬಹಿರಂಗಪಡಿಸಿವೆ.

ಜೊತೆಗೆ ಟ್ಯಾಟೂ ಹಾಕಿಸಿಕೊಳ್ಳುವಾಗ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದಿದ್ದರೆ ಚರ್ಮ ಕೆರಳಿಕೆ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಹೇಳಲಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ