AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ.

Tattoo: ಟ್ಯಾಟೂ ಪ್ರಿಯರಿಗೆ ಶಾಕಿಂಗ್ ನ್ಯೂಸ್,  ಟ್ಯಾಟೂ ಇಂಕ್​ನಿಂದ ಬರಬಹುದು ಕ್ಯಾನ್ಸರ್
Tattoo
TV9 Web
| Edited By: |

Updated on: Aug 26, 2022 | 7:00 AM

Share

ಕೆಲವರಿಗೆ ಟ್ಯಾಟೂ ಎಂದರೆ ತುಂಬಾ ಇಷ್ಟ. ಅವರು ತಮ್ಮ ನೆಚ್ಚಿನ ವ್ಯಕ್ತಿಗಳ ಹೆಸರನ್ನು ಅಥವಾ ಅವರ ಹೆಸರನ್ನು, ಅವರಿಗೆ ಇಷ್ಟವಾದ ಚಿತ್ರವನ್ನು ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ನಮ್ಮೊಂದಿಗೆ ಸಾಯುವವರೆಗೂ ಇರುತ್ತದೆ ಎನ್ನುವುದು ಸಂತೋಷದ ವಿಷಯ ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವುದು ಆತಂಕಕಾಗಿ ವಿಚಾರವಾಗಿದೆ.

ಟ್ಯಾಟೂ ಶಾಯಿಯ ಮೇಲೆ ನಡೆಸಿದ ಅಧ್ಯಯನದಲ್ಲಿ ಕೆಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಟ್ಯಾಟೂಗೆ ಬಳಸುವ ಇಂಕ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಅಂಶವಿರುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಇದರ ಭಾಗವಾಗಿ, ನ್ಯೂಯಾರ್ಕ್ ಸ್ಟೇಟ್ ಯೂನಿವರ್ಸಿಟಿಯ ವಿಜ್ಞಾನಿ ಸ್ವಿಯರ್ಕ್ ನೇತೃತ್ವದಲ್ಲಿ ಸುಮಾರು 100 ಟ್ಯಾಟೂ ಶಾಯಿಗಳನ್ನು ವಿಶ್ಲೇಷಿಸಲಾಗಿದೆ. ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.

ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.

ರಾಸಾಯನಿಕವಾಗಿ ಅಖಂಡವಾಗಿರುವಾಗ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಅಧ್ಯಯನಗಳು ಬಹಿರಂಗಪಡಿಸಿವೆ.

ಜೊತೆಗೆ ಟ್ಯಾಟೂ ಹಾಕಿಸಿಕೊಳ್ಳುವಾಗ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದಿದ್ದರೆ ಚರ್ಮ ಕೆರಳಿಕೆ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಹೇಳಲಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್