AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Chikungunya Vaccine: ಚಿಕನ್ ಗುನ್ಯಾ ಲಸಿಕೆಯ ಮೂರನೇ ಹಂತ ಯಶಸ್ವಿ: ಲಸಿಕೆ ಸಂಪೂರ್ಣ ಸುರಕ್ಷಿತ

ಮೂರನೇ ಹಂತದ ಚಿಕನ್ ಗುನ್ಯಾ ಲಸಿಕೆಯ ಪ್ರಯೋಗವು ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಇದು ಅತ್ಯಂತ ಪರಿಣಾಮಕಾರಿ ಮತ್ತು ಸುರಕ್ಷಿತವಾಗಿದೆ ಎಂದು ಈ ಲಸಿಕೆಯನ್ನು ತಯಾರಿಸುತ್ತಿರುವ ಫ್ರೆಂಚ್​​ನ ಬಯೋಟೆಕ್ ಕಂಪೆನಿ ವೆಲ್ನೆವಾ ಹೇಳಿಕೆ ನೀಡಿದೆ.

New Chikungunya Vaccine: ಚಿಕನ್ ಗುನ್ಯಾ ಲಸಿಕೆಯ ಮೂರನೇ ಹಂತ ಯಶಸ್ವಿ: ಲಸಿಕೆ ಸಂಪೂರ್ಣ ಸುರಕ್ಷಿತ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Jun 16, 2023 | 6:08 PM

Share

ಸೊಳ್ಳೆಗಳಿಂದ ಹರಡುವ ಅಪಾಯಕಾರಿ ಕಾಯಿಲೆಗಳಲ್ಲಿ ಚಿಕನ್ ಗುನ್ಯಾ ಕೂಡಾ ಒಂದು. ಪ್ರತಿ ವರ್ಷ ಅನೇಕ ಜನರು ಈ ರೋಗಕ್ಕೆ ತುತ್ತಾಗುತ್ತಾರೆ. ಪ್ರಸ್ತುತ ಚಿಕನ್ ಗುನ್ಯಾದಿಂದ ಉಂಟಾಗುವ ರೋಗವನ್ನು ತಡೆಗಟ್ಟಲು ಯಾವುದೇ ಲಸಿಕೆ ಇಲ್ಲ. ಅಲ್ಲದೆ ಈ ಕಾಯಿಲೆಗೆ ಯಾವುದೇ ಪರಿಣಾಮಕಾರಿ ಅಂಟಿವೈರಲ್ ಚಿಕಿತ್ಸೆ ಕೂಡಾ ಇಲ್ಲ. ಈ ಮಾರಣಾಂತಿಕ ಕಾಯಿಲೆಯಿಂದ ಜನರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸದ್ಯದಲ್ಲೇ ಲಸಿಕೆ ಬರುವ ಸಾಧ್ಯತೆಯಿದೆ. ಲಸಿಕೆಯ ಮೂರನೇ ಹಂತದ ಪ್ರಯೋಗ ಯಶಸ್ವಿಯಾಗಿದ್ದು, ಪ್ರಯೋಗದಲ್ಲಿ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಘೋಷಿಸಲಾಗಿದೆ. ಫ್ರೆಂಚ್​​ನ ಬಯೋಟೆಕ್ ಕಂಪೆನಿ ವೆಲ್ನೆವಾ ಈ ಲಸಿಕೆಯನ್ನು ತಯಾರಿಸುತ್ತಿದೆ. ಈ ಲಸಿಕೆ ಒಂದೇ ಡೋಸ್ ನಲ್ಲಿರುತ್ತದೆ. ಕಂಪೆನಿಯು 3ನೇ ಹಂತದ ಪ್ರಯೋಗದ ಫಲಿತಾಂಶವನ್ನು ಲ್ಯಾನ್ಸೆಟ್ ವೈದ್ಯಕೀಯ ನಿಯತಕಾಲಿಕೆಯಲ್ಲಿ ಪ್ರಕಟಿಸಿದೆ.

ಈ ಅಧ್ಯಯನವು ಲಸಿಕೆಯನ್ನು ಪಡೆದವರು ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂದು ತೋರಿಸಿದೆ. ಲಸಿಕೆಯನ್ನು ಪಡೆದ ಎಲ್ಲಾ ವಯಸ್ಸಿನ ಗುಂಪುಗಳಲ್ಲಿ ಉತ್ತಮ ಪ್ರತಿಕಾಯಕಗಳು ಅಭಿವೃದ್ಧಿಗೊಂಡಿವೆ ಎಂದು ಸಂಶೋಧಕರು ಹೇಳಿದ್ದಾರೆ. ಹೀಗಿದ್ದರೂ ‘VLA1553’ ಲಸಿಕೆಯು ಚಿಕನ್ ಗುನ್ಯಾ ಸೋಂಕಿನ ನಂತರ ಬೆಳವಣಿಗೆಯಾಗುವ ಇತರ ಕಾಯಿಲೆಗಳನ್ನು ಎಷ್ಟರ ಮಟ್ಟಿಗೆ ತಡೆಯುತ್ತದೆ ಎಂಬುದನ್ನು ವಿಜ್ಞಾನಿಗಳು ಇನ್ನೂ ನಿರ್ಧರಿಸಿಲ್ಲ.

ಇದು ಪ್ಲಸ್ ಬೋ ನಿಯಂತ್ರಿತ ಮಾದರಿಯ ಮೂರು ಹಂತದ ಪ್ರಯೋಗವಾಗಿತ್ತು. ಈ ಮೂರು ಪ್ರಯೋಗಗಳಲ್ಲಿ, ಈ ಲಸಿಕೆಯು ವೈರಸ್​​​ನ್ನು ಹೇಗೆ ದುರ್ಬಲಗೊಳಿಸುತ್ತದೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೇಗೆ ಬಲಪಡಿಸುತ್ತದೆ ಎಂಬುದನ್ನು ನೋಡಲಾಯಿತು. ದಿ ಲ್ಯಾನ್ಸೆಟ್ ವೈದ್ಯಕೀಯ ನಿಯತಕಾಲಿಕೆಯಲ್ಲಿ ಪ್ರಕಟವಾದ ಈ ಅಧ್ಯಯನದ ಪ್ರಕಾರ, ಈ ಸಂಶೋಧನೆಯಲ್ಲಿ 266 ಜನರ ಮೇಲೆ ಪ್ರಯೋಗ ನಡೆಸಲಾಯಿತು. ಇದರಲ್ಲಿ 263 ಜನರು ಅಂದರೆ ಶೇಕಡಾ 99% ನಷ್ಟು ಜನರು ಲಸಿಕೆಯಿಂದ ಪ್ರತಿಕಾಯಕಗಳನ್ನು ಅಭಿವೃದ್ಧಿಪಡಿಸಿದ್ದಾರೆ, ಈ ಪ್ರತಿಕಾಯಕಗಳು ಚಿಕನ್ ಗುನ್ಯಾ ವೈರಸ್​​​ನ್ನು ತಡೆಗಟ್ಟುವ ಸಾಮರ್ಥ್ಯವನ್ನು ಹೊಂದಿದೆ.

ಈ ಅಧ್ಯಯನದ ಪ್ರಕಾರ, ಇಲ್ಲಿಯವರೆಗೆ ನಡೆಸಲಾದ ಈ ಪ್ರಯೋಗದಲ್ಲಿ 4100 ಆರೋಗ್ಯವಂತ ಜನರ ಮೇಲೆ ಈ ಒಂದು ಡೋಸ್ ಲಸಿಕೆಯನ್ನು ಅನ್ವಯಿಸಲಾಗಿದೆ. ಅದರ ಫಲಿತಾಂಶವು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಅಷ್ಟೇ ಅಲ್ಲ, ಇತರ ಲಸಿಕೆಗಳಿಗೆ ಹೋಲಿಸಿದರೆ ಇದರ ಅಡ್ಡ ಪರಿಣಾಮಗಳು ತುಂಬಾ ಕಡಿಮೆ. ಈ ಲಸಿಕೆಯನ್ನು ಪಡೆದ ನಂತರ, ಕೇವಲ ಇಬ್ಬರಲ್ಲಿ ಗಂಭೀರ ಅಡ್ಡ ಪರಿಣಾಮಗಳು ಕಂಡುಬಂದವು, ನಂತರ ಅವರು ಸಂಪೂರ್ಣವಾಗಿ ಚೇತರಿಸಿಕೊಂಡರು ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು: ನಿರಂತರವಾಗಿ ಚಳಿ ಹಾಗೂ ಮಳೆ; ಡೆಂಗ್ಯೂ, ಚಿಕನ್ ಗುನ್ಯಾ ಕೇಸ್ ಹೆಚ್ಚಳ

ಸಂಶೋಧಕರು ಏನು ಹೇಳುತ್ತಾರೆ:

ವೆಲ್ನೆವಾ ಕ್ಲಿನಕಲ್ ಸ್ಟ್ರಾಟಜಿ ಮ್ಯಾನೇಜರ್ ಮತ್ತು ಈ ಅಧ್ಯಯನದ ಪ್ರಮುಖ ಲೇಖಕರಾದ ಮಾರ್ಟಿನಾ ಷ್ನೇಯ್ಡರ್ ಹೇಳುತ್ತಾರೆ, ಈ ಅಧ್ಯಯನ ಫಲಿತಾಂಶಗಳು ಆಶಾವಾದಿಯಾಗಿದೆ. ಈ ಲಸಿಕೆ ಚಿಕನ್ ಗುನ್ಯಾ ಪೀಡಿತರಿಗೆ ಮೊದಲ ಲಸಿಕೆಯಾಗಲಿದೆ. ಹಾಗೂ ಇದು ಲಕ್ಷಾಂತರ ಜನರನ್ನು ಸೊಳ್ಳೆಯಿಂದ ಹರಡುವ ರೋಗದಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:23 pm, Fri, 16 June 23

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!