AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ

ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ
ಮಕ್ಕಳಲ್ಲೂಹಠಾತ್‌ ಹೃದಯ ಸ್ತಂಭನImage Credit source: AboutKidsHealth
ಅಕ್ಷತಾ ವರ್ಕಾಡಿ
|

Updated on: Jul 07, 2023 | 6:40 AM

Share

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹಠಾತ್‌ ಹೃದಯ ಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಹೃದಯ ಸ್ತಂಭನದಿಂದ ಸಾವನ್ನಪ್ಪುವ ಪ್ರಕರಣಗಳು ಕಂಡುಬರುತ್ತಿದೆ. ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಅನಿರೀಕ್ಷಿತ ಘಟನೆ ಮಗುವಿನ ಪೋಷಕರಿಗೆ ನಂಬಲಾಗದಷ್ಟು ಅಘಾತವನ್ನುಂಟು ಮಾಡಿದೆ. ಮಗುವಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಕಾರಣ ಹಠಾತ್​​​​​ಉಸಿರಾಟ ನಿಂತು ಹೋಗಿದೆ. ತಕ್ಷಣ ಮಗುವಿಗೆ ಸಿಪಿಆರ್ ನೀಡಿದ್ದರು. ಮತ್ತು ಆಸ್ಪತ್ರೆಯಲ್ಲಿ ಕೋಮಾದಲ್ಲಿ ಇರಿಸಲಾಗಿತ್ತು. ಎರಡು ದಿನಗಳ ನಂತರ ಬ್ರೈನ್ ಡೆಡ್ ಎಂದು ಘೋಷಿಸಲಾಯಿತು.

ಹೃದಯ ಸ್ತಂಭನವು ಹೃದಯ ಬಡಿತ ಪ್ರಕ್ರಿಯೆಯನ್ನು ಏಕಾಏಕಿ ನಿಲ್ಲಿಸುತ್ತದೆ. ಇದನ್ನು ಶ್ವಾಸಕೋಶದ ಶುದ್ಧ ರಕ್ತನಾಳ ಸ್ತಂಭನ ಅಥವಾ ರಕ್ತಪರಿಚಲನೆ ಸ್ತಂಭನ ಎಂದೂ ಕರೆಯುತ್ತಾರೆ. ಈ ರೀತಿಯ ಹೃದಯ ಸ್ತಂಭನ ಉಂಟಾದಾಗ ಐದು ನಿಮಿಷಗಳ ವರೆಗೆ ಚಿಕಿತ್ಸೆ ನೀಡದೇ ಹೋದಲ್ಲಿ ಮೈದುಳು ನಿಷ್ಕ್ರಿಯವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ವಾಟರ್​ ಫಾಸ್ಟಿಂಗ್​ನಿಂದ ತೂಕವೇನೋ ಬಹುಬೇಗ ಕಡಿಮೆಯಾಗುತ್ತೆ, ನಂತರ ಈ ಸಮಸ್ಯೆಯೂ ಕಾಡಬಹುದು

ಹೃದಯ ಸ್ತಂಭನದ ಲಕ್ಷಣಗಳೇನು?

ಹೃದಯ ಸ್ತಂಭನವು ಈ ಕೆಳಗಿನ ಲಕ್ಷಣಗಳನ್ನು ಹೊಂದಿದೆ:

  • ಬೆನ್ನು ನೋವು
  • ಉಸಿರಾಟದ ತೊಂದರೆ
  • ವಿಪರೀತ ಆಯಾಸ
  • ಇದ್ದಕ್ಕಿದ್ದಂತೆ ಮೂರ್ಛೆ ಹೋಗುವುದು
  • ಎದೆ ನೋವು
  • ಎದೆಯ ಬಿಗಿತ
  • ವಾಂತಿ
  • ವಾಕರಿಕೆ
  • ಹೊಟ್ಟೆ ನೋವು

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!