AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ

ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ
ಮಕ್ಕಳಲ್ಲೂಹಠಾತ್‌ ಹೃದಯ ಸ್ತಂಭನImage Credit source: AboutKidsHealth
ಅಕ್ಷತಾ ವರ್ಕಾಡಿ
|

Updated on: Jul 07, 2023 | 6:40 AM

Share

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹಠಾತ್‌ ಹೃದಯ ಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಹೃದಯ ಸ್ತಂಭನದಿಂದ ಸಾವನ್ನಪ್ಪುವ ಪ್ರಕರಣಗಳು ಕಂಡುಬರುತ್ತಿದೆ. ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಅನಿರೀಕ್ಷಿತ ಘಟನೆ ಮಗುವಿನ ಪೋಷಕರಿಗೆ ನಂಬಲಾಗದಷ್ಟು ಅಘಾತವನ್ನುಂಟು ಮಾಡಿದೆ. ಮಗುವಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಕಾರಣ ಹಠಾತ್​​​​​ಉಸಿರಾಟ ನಿಂತು ಹೋಗಿದೆ. ತಕ್ಷಣ ಮಗುವಿಗೆ ಸಿಪಿಆರ್ ನೀಡಿದ್ದರು. ಮತ್ತು ಆಸ್ಪತ್ರೆಯಲ್ಲಿ ಕೋಮಾದಲ್ಲಿ ಇರಿಸಲಾಗಿತ್ತು. ಎರಡು ದಿನಗಳ ನಂತರ ಬ್ರೈನ್ ಡೆಡ್ ಎಂದು ಘೋಷಿಸಲಾಯಿತು.

ಹೃದಯ ಸ್ತಂಭನವು ಹೃದಯ ಬಡಿತ ಪ್ರಕ್ರಿಯೆಯನ್ನು ಏಕಾಏಕಿ ನಿಲ್ಲಿಸುತ್ತದೆ. ಇದನ್ನು ಶ್ವಾಸಕೋಶದ ಶುದ್ಧ ರಕ್ತನಾಳ ಸ್ತಂಭನ ಅಥವಾ ರಕ್ತಪರಿಚಲನೆ ಸ್ತಂಭನ ಎಂದೂ ಕರೆಯುತ್ತಾರೆ. ಈ ರೀತಿಯ ಹೃದಯ ಸ್ತಂಭನ ಉಂಟಾದಾಗ ಐದು ನಿಮಿಷಗಳ ವರೆಗೆ ಚಿಕಿತ್ಸೆ ನೀಡದೇ ಹೋದಲ್ಲಿ ಮೈದುಳು ನಿಷ್ಕ್ರಿಯವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ವಾಟರ್​ ಫಾಸ್ಟಿಂಗ್​ನಿಂದ ತೂಕವೇನೋ ಬಹುಬೇಗ ಕಡಿಮೆಯಾಗುತ್ತೆ, ನಂತರ ಈ ಸಮಸ್ಯೆಯೂ ಕಾಡಬಹುದು

ಹೃದಯ ಸ್ತಂಭನದ ಲಕ್ಷಣಗಳೇನು?

ಹೃದಯ ಸ್ತಂಭನವು ಈ ಕೆಳಗಿನ ಲಕ್ಷಣಗಳನ್ನು ಹೊಂದಿದೆ:

  • ಬೆನ್ನು ನೋವು
  • ಉಸಿರಾಟದ ತೊಂದರೆ
  • ವಿಪರೀತ ಆಯಾಸ
  • ಇದ್ದಕ್ಕಿದ್ದಂತೆ ಮೂರ್ಛೆ ಹೋಗುವುದು
  • ಎದೆ ನೋವು
  • ಎದೆಯ ಬಿಗಿತ
  • ವಾಂತಿ
  • ವಾಕರಿಕೆ
  • ಹೊಟ್ಟೆ ನೋವು

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!