AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Knee Pain: ಮೊಣಕಾಲು ನೋವಿನಿಂದ ಬಳಲುತ್ತಿದ್ದೀರಾ? ಹಾಗಾದರೆ ಹೀಗೆ ಮಾಡಿ, ತಕ್ಷಣ ಪರಿಹಾರ ಪಡೆಯಿರಿ!

ಈ ನೋವಿಗೆ ಚಿಕಿತ್ಸೆ ನೀಡದಿದ್ದರೆ, ಕುಳಿತಿರುವಾಗ ಮೊಣಕಾಲುಗಳಿಂದ ಶಬ್ದ ಮತ್ತು ತೀಕ್ಷ್ಣವಾದ ನೋವು ಉಂಟಾಗುತ್ತದೆ. ನೀವೂ ಮಂಡಿ ನೋವಿನಿಂದ ಬಳಲುತ್ತಿದ್ದರೆ ಕೆಲವು ಮನೆಮದ್ದುಗಳನ್ನು ಅನುಸರಿಸಿ. 

Knee Pain: ಮೊಣಕಾಲು ನೋವಿನಿಂದ ಬಳಲುತ್ತಿದ್ದೀರಾ? ಹಾಗಾದರೆ ಹೀಗೆ ಮಾಡಿ, ತಕ್ಷಣ ಪರಿಹಾರ ಪಡೆಯಿರಿ!
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 04, 2022 | 7:00 AM

Share

ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಹಲವರು ಕೀಲು ನೋವಿನಿಂದ ಬಳಲುತ್ತಿದ್ದಾರೆ. ಒಂದು ಕಾಲದಲ್ಲಿ ದೊಡ್ಡವರಲ್ಲಿ ಮಾತ್ರ ಕಂಡು ಬರುತ್ತಿದ್ದ ಈ ಕೀಲು ನೋವು ಸಮಸ್ಯೆ ಇಂದು ವಯಸ್ಸಿನ ಭೇದವಿಲ್ಲದೆ ಎಲ್ಲರಲ್ಲೂ ಕಾಣಿಸಿಕೊಳ್ಳುತ್ತಿದೆ. ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆ ಇರುವುದೇ ಈ ನೋವುಗಳಿಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಅನೇಕ ಜನರು ರುಚಿಕರವಾದ ಆಹಾರವನ್ನು ತಿನ್ನುವ ಅಭ್ಯಾಸವನ್ನು ಹೊಂದಿದ್ದು ಆದರೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನಿರ್ಲಕ್ಷಿಸುತ್ತಾರೆ. ಪೌಷ್ಟಿಕಾಂಶದ ಕೊರತೆಯಿಂದ ನಾವು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದೇವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸುತ್ತಾರೆ.

ಮೊಣಕಾಲುಗಳಿಗೆ ಗಾಯ, ಮೊಣಕಾಲುಗಳ ಮೇಲೆ ನಿರಂತರ ಒತ್ತಡ, ಸಂಧಿವಾತ, ನೋವು, ಕೊಬ್ಬಿನ ನಷ್ಟ, ತೂಕ ಹೆಚ್ಚಾಗುವುದು, ದೇಹದಲ್ಲಿ ಪೋಷಕಾಂಶಗಳ ಕೊರತೆ ಮುಂತಾದ ಹಲವು ಕಾರಣಗಳಿಂದ ಮಂಡಿ ನೋವು ಉಂಟಾಗುತ್ತದೆ. ಸಂಧಿವಾತ ಅಥವಾ ಗೌಟ್‌ನಿಂದಾಗಿ ಅನೇಕ ಜನರಿಗೆ ಮೊಣಕಾಲು ನೋವು ಇರುತ್ತದೆ. ಈ ನೋವು ಪುರುಷರಿಗಿಂತ ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ನೋವಿನ ಮೊಣಕಾಲುಗಳನ್ನು ಇಟ್ಟುಕೊಂಡು ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ.  ಈ ನೋವಿಗೆ ಚಿಕಿತ್ಸೆ ನೀಡದಿದ್ದರೆ, ಕುಳಿತಿರುವಾಗ ಮೊಣಕಾಲುಗಳಿಂದ ಶಬ್ದ ಮತ್ತು ತೀಕ್ಷ್ಣವಾದ ನೋವು ಉಂಟಾಗುತ್ತದೆ. ನೀವೂ ಮಂಡಿ ನೋವಿನಿಂದ ಬಳಲುತ್ತಿದ್ದರೆ ಕೆಲವು ಮನೆಮದ್ದುಗಳನ್ನು ಅನುಸರಿಸಿ.

ಇದನ್ನೂ ಓದಿ: Guava Leaf Tea: ಪೇರಳೆ ಎಲೆಗಳ ಚಹಾದ ಪ್ರಯೋಜನಗಳು ನಿಮಗೆ ತಿಳಿದರೆ ನಿತ್ಯ ಅದನ್ನೇ ಕುಡಿಯುತ್ತೀರಿ

ಅರಿಶಿನ ಹಾಲು ಕುಡಿಯಿರಿ:

ನೀವು ಮಂಡಿ ನೋವಿನಿಂದ ಬಳಲುತ್ತಿದ್ದರೆ ಪ್ರತಿದಿನ ಅರಿಶಿನದ ಹಾಲನ್ನು ಕುಡಿಯಿರಿ. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನವು ಆ್ಯಂಟಿ ಸೆಪ್ಟಿಕ್ ಮತ್ತು ಉರಿಯೂತ ಶಮನಕಾರಿ ಗುಣಗಳನ್ನು ಹೊಂದಿದೆ. ಅವರು ಊತ ಮತ್ತು ನೋವನ್ನು ನಿವಾರಿಸುತ್ತಾರೆ. ಅರಿಶಿನವು ಗಾಯಗಳನ್ನು ಗುಣಪಡಿಸುವಲ್ಲಿ ಸಹ ಪರಿಣಾಮಕಾರಿಯಾಗಿದೆ. ಅರಿಶಿನವನ್ನು ಹಾಲಿನೊಂದಿಗೆ ಬಳಸುವುದರಿಂದ ಮಂಡಿ ನೋವಿನಿಂದ ಪರಿಹಾರ ಸಿಗುತ್ತದೆ.

ತುಳಸಿ ಸಾರವನ್ನು ಬಳಸಿ:

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತುಳಸಿಯನ್ನು ಸೇವಿಸುವುದರಿಂದ ಮಂಡಿ ನೋವು ನಿವಾರಣೆಯಾಗುತ್ತದೆ. ತುಳಸಿ ರಸವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೀವು ಆರೋಗ್ಯವಾಗಿರುತ್ತೀರಿ. ಒಂದು ಲೋಟ ಬೆಚ್ಚಗಿನ ನೀರಿಗೆ ಒಂದು ಚಮಚ ತುಳಸಿ ರಸವನ್ನು ಕುಡಿಯುವುದರಿಂದ ಮೊಣಕಾಲು ನೋವಿನಿಂದ ಶೀಘ್ರ ಉಪಶಮನ ಪಡೆಯಬಹುದು.

(ಗಮನಿಸಿ: ಈ ಮೇಲಿನ ವಿಷಯವು ಮಾಹಿತಿ ಉದ್ದೇಶ ಮಾತ್ರವಾಗಿದ್ದು, ಟಿವಿ9 ಡಿಜಿಟಲ್​ಗೆ ಯಾವುದೇ ಸಂಬಂಧವಿಲ್ಲ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್