AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗಲೂ ಸಿಹಿ ತಿನ್ನಬೇಕು ಅನಿಸುತ್ತಿದೆಯೇ? ಬಾಯಿಗೆ ಇದನ್ನು ಹಾಕಿಕೊಂಡರೆ ಸಾಕು

Diabetes: ಸಿಹಿ ಪದಾರ್ಥ ತಿನ್ನುವುದನ್ನು ನಿಯಂತ್ರಣದಲ್ಲಿಡಲು ಕೆಲವು ನಿಯಮಗಳನ್ನು ಅನುಸರಿಸಬೇಕು. ನಿಮಗೆ ಸಿಹಿ ತಿನ್ನಬೇಕು ಅನಿಸಿದಾಗಲೆಲ್ಲಾ ನೀರು ಕುಡಿಯಿರಿ. ಒಂದು ಲೋಟ ನೀರು ಕುಡಿದರೆ ಬಾಯಾರಿಕೆ ನೀಗುತ್ತದೆ. ಸಿಹಿ ತಿನ್ನುವ ಆಸೆ ದೂರವಾಗುತ್ತದೆ.

ಯಾವಾಗಲೂ ಸಿಹಿ ತಿನ್ನಬೇಕು ಅನಿಸುತ್ತಿದೆಯೇ? ಬಾಯಿಗೆ ಇದನ್ನು ಹಾಕಿಕೊಂಡರೆ ಸಾಕು
ಯಾವಾಗಲೂ ಸಿಹಿ ತಿನ್ನಬೇಕು ಅನಿಸುತ್ತಿದೆಯೇ? ಬಾಯಿಗೆ ಇದನ್ನು ಹಾಕಿಕೊಂಡರೆ ಸಾಕು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 03, 2024 | 12:25 PM

Share

ಇಂದಿನ ಕಾಲದಲ್ಲಿ ಮಧುಮೇಹದ ಸಮಸ್ಯೆ ಪ್ರತಿ ಮನೆಯಲ್ಲೂ ಇದೆ. ಜಗತ್ತಿನಾದ್ಯಂತ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನೆದಿನೇ ಹೆಚ್ಚುತ್ತಿದೆ. ಒಮ್ಮೆ ಮಧುಮೇಹ ಬಂದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ, ಆದರೆ ಅದನ್ನು ನಿಯಂತ್ರಿಸಬಹುದು. ಮೇದೋಜ್ಜೀರಕ ಗ್ರಂಥಿಯಿಂದ ಇನ್ಸುಲಿನ್ ಹಾರ್ಮೋನ್ ಸ್ರವಿಸುತ್ತದೆ. ಈ ಇನ್ಸುಲಿನ್ ಸ್ರವಿಸದಿದ್ದರೆ ಅಥವಾ ಅಗತ್ಯಕ್ಕಿಂತ ಕಡಿಮೆ ಇದ್ದರೆ, ಅನೇಕ ಸಮಸ್ಯೆಗಳು ಉದ್ಭವಿಸಬಹುದು. ಆಗ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುತ್ತದೆ. ಅಧಿಕ ತೂಕ ಇರುವವರಿಗೂ ಈ ಮಧುಮೇಹ ಬರುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತದೆ.

ಅಂತಹವರು ಕಡಿಮೆ ಸಕ್ಕರೆಯನ್ನು ಸೇವಿಸಬೇಕು. ಅದನ್ನು ತಿನ್ನದಿರುವುದೇ ಉತ್ತಮ. ಒಂದು ದಿನದಲ್ಲಿ 25 ಗ್ರಾಂ ಸಕ್ಕರೆಗಿಂತ ಹೆಚ್ಚು ತಿನ್ನಬೇಡಿ. ಆದರೆ ಸಕ್ಕರೆ ತಿನ್ನುವ ಬಯಕೆಯನ್ನು ನಿಯಂತ್ರಿಸಲಾಗುವುದಿಲ್ಲ. ಅದಕ್ಕಾಗಿಯೇ ಸಿಹಿ ಪದಾರ್ಥ ತಿನ್ನುವುದನ್ನು ನಿಯಂತ್ರಣದಲ್ಲಿಡಲು ಕೆಲವು ನಿಯಮಗಳನ್ನು ಅನುಸರಿಸಬೇಕು. ನಿಮಗೆ ಸಿಹಿ ತಿನ್ನಬೇಕು ಅನಿಸಿದಾಗಲೆಲ್ಲಾ ನೀರು ಕುಡಿಯಿರಿ. ಒಂದು ಲೋಟ ನೀರು ಕುಡಿದರೆ ಬಾಯಾರಿಕೆ ನೀಗುತ್ತದೆ. ಸಿಹಿ ತಿನ್ನುವ ಆಸೆ ದೂರವಾಗುತ್ತದೆ.

ಸಮಯಕ್ಕೆ ಸರಿಯಾಗಿ ಊಟ ಮಾಡಿ. ಸಮತೋಲಿತ ಊಟವನ್ನು ತೆಗೆದುಕೊಳ್ಳಿ. ಆಹಾರದಲ್ಲಿ ಸಾಕಷ್ಟು ಪ್ರೋಟೀನ್ ಮತ್ತು ಫೈಬರ್ ಇರುವಂತೆ ನೋಡಿಕೊಳ್ಳಬೇಕು. ಕಾಳುಗಳು, ಧಾನ್ಯಗಳು, ತರಕಾರಿಗಳು ಮತ್ತು ಹಣ್ಣುಗಳನ್ನು ಸಾಕಷ್ಟು ಸೇವಿಸಿ. ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುವುದಿಲ್ಲ. ಅದಕ್ಕಾಗಿಯೇ ನೀವು ಸರಿಯಾದ ಸಮಯಕ್ಕೆ ತಿನ್ನಬೇಕು.

Also Read: ಕಾಲುಗಳು ಮತ್ತು ಕೈ ತೋಳುಗಳಲ್ಲಿ ಈ ಲಕ್ಷಣಗಳು ಇವೆಯೇ? ನಿಮಗೆ ರಕ್ತಹೀನತೆ ಇರಬಹುದು

ಊಟ ಮಾಡುವಾಗ ಸಂತೃಪ್ತಿಯಿಂದ ತಿನ್ನಿ. ಟಿವಿ, ಫೋನ್ ನೋಡುತ್ತಾ ಊಟ ಮಾಡಿದರೆ ಅತಿಯಾಗಿ ತಿನ್ನುವ ಸಾಧ್ಯತೆ ಇರುತ್ತದೆ. ಕಾರ್ಬೋಹೈಡ್ರೇಟ್ಗಳು ಮತ್ತು ಸಿಹಿತಿಂಡಿಗಳ ಹೆಚ್ಚು ಆಕರ್ಷಣೆಯಿಂಧ ಹೆಚ್ಚು ಹೆಚ್ಚು ಹೊಟ್ಟೆ ಸೇರುತ್ತದೆ. ಅದರ ಬದಲಾಗಿ, ನಿಧಾನವಾಗಿ ಶಾಂತರಾಗಿ ತಿನ್ನಿ.

ಸಾಕಷ್ಟು ನಿದ್ರೆ ಮಾಡಬೇಕು. ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಕೇಕ್, ಸಿಹಿತಿಂಡಿಗಳು ಮತ್ತು ಪೇಸ್ಟ್ರಿಗಳನ್ನು ಮನೆಗೆ ತೆಗೆದುಕೊಂಡು ಹೋಗಬೇಡಿ. ಕಡಿಮೆ ಮಾತ್ರ ತಿನ್ನಿ. ಕೃತಕ ಸಿಹಿಕಾರಕಗಳನ್ನು ತಪ್ಪಿಸಿ. ಕೋಕಾ ಕೋಲಾ, ಥಮ್ಸ್​ಅಪ್ ಮುಂತಾದ ತಂಪು ಪಾನೀಯಗಳನ್ನು ಕುಡಿಯಬೇಡಿ. ಹಣ್ಣಿನ ರಸ ಮತ್ತು ಕ್ಯಾನ್ ನೀರನ್ನು ಕುಡಿಯಿರಿ. ಪ್ರತಿದಿನ ವಾಕಿಂಗ್​ ಮಾಡಿ. ಹೀಗೆ ಮಾಡುವುದರಿಂದ ತಿನ್ನುವುದರಲ್ಲಿ ಹೆಚ್ಚು ಆಸಕ್ತಿ ಇರುವುದಿಲ್ಲ. ನೀವು ಬಾಯಿಯಲ್ಲಿ ಗಮ್ ಅನ್ನು ಜಗಿಯುತ್ತಿದರೆ ನಿಮಗೆ ಹೆಚ್ಚು ಸಿಹಿ ತಿನ್ನುವ ಬಯಕೆ ಆಗುವುದಿಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ