AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಜ್ಯೂಸ್ vs ಎಳ ನೀರು : ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು?

ಬೇಸಿಗೆಯ ಝಳ ಜೋರಾಗಿದೆ. ಈ ಋತುವಿನಲ್ಲಿ ಎಲ್ಲರೂ ತಣ್ಣನೆಯ ಪಾನೀಯಗಳನ್ನು ಕುಡಿಯಲು ಇಷ್ಟಪಡುತ್ತಾರೆ. ಅದರಲ್ಲಿ ನಿಂಬು ಪಾನೀಯ, ಎಳನೀರು, ಕಬ್ಬಿನ ಜ್ಯೂಸ್ ಸೇರಿದಂತೆ ತಾಜಾ ಹಣ್ಣುಗಳ ಪಾನೀಯವನ್ನು ಹೆಚ್ಚೆಚ್ಚು ಸೇವಿಸುತ್ತಾರೆ. ಆದರೆ ನೀವೇನಾದ್ರೂ ಎಳನೀರು ಹಾಗೂ ಕಬ್ಬಿನ ಜ್ಯೂಸ್ ಸೇವಿಸುತ್ತಿದ್ದೀರಾ ಅಂತಾದ್ರೆ ಇವೆರಡರಲ್ಲಿ ಯಾವುದು ಆರೋಗ್ಯ ಉತ್ತಮ? ಎನ್ನುವುದನ್ನು ತಿಳಿದುಕೊಂಡರೆ ಒಳ್ಳೆಯದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಬ್ಬಿನ ಜ್ಯೂಸ್ vs ಎಳ ನೀರು : ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು?
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: May 04, 2025 | 4:04 PM

Share

ಬೇಸಿಗೆ (summer) ಯ ಕಾಲ ಶುರುವಾದರೆ ಜ್ಯೂಸ್ ಸೇರಿದಂತೆ ಎಳನೀರಿಗೆ ಬಾರಿ ಬೇಡಿಕೆಯಿರುತ್ತದೆ. ಕೆಲವರು ಮನೆಯಲ್ಲೇ ಮಾಡಿದ ತಾಜಾ ಹಣ್ಣಿನ ಜ್ಯೂಸ್ ಗೆ ಮೊದಲ ಆದ್ಯತೆ ನೀಡಿದರೆ ಇನ್ನು ಕೆಲವರು ಕಬ್ಬಿನ ಜ್ಯೂಸ್ (sugarcane juice) ಹಾಗೂ ಎಳನೀರ (coconut water) ನ್ನು ಕುಡಿಯುವುದನ್ನು ನೋಡಬಹುದು. ಈ ಋತುವಿನಲ್ಲಿ ಎಲ್ಲೆಂದರಲ್ಲಿ ಕಬ್ಬಿನ ಜ್ಯೂಸ್ ಅಂಗಡಿ ಹಾಗೂ ರಸ್ತೆ ಬದಿಯಲ್ಲಿ ಎಳನೀರನ್ನು ಮಾರಾಟ ಮಾಡಲಾಗುತ್ತದೆ. ಈ ಬೇಸಿಗೆಯಲ್ಲಿ ಕಬ್ಬಿನ ಜ್ಯೂಸ್ ಹಾಗೂ ಎಳನೀರನ್ನು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ. ಆದರೆ ತಜ್ಞರು ಈ ಎರಡರಲ್ಲಿ ಯಾವುದು ಉತ್ತಮ ಎನ್ನುತ್ತಾರೆ ಎನ್ನುವ ಬಗೆಗಿನ ಮಾಹಿತಿ ಇಲ್ಲಿದೆ.

ಎಳನೀರು ಹಾಗೂ ಕಬ್ಬಿನ ರಸದ ಆರೋಗ್ಯ ಪ್ರಯೋಜನಗಳು

ಬೇಸಿಗೆಯಲ್ಲಿ ಹೆಚ್ಚಾ ಬೇಡಿಕೆಯಿರುವ ಎಳನೀರಿನಲ್ಲಿ ಮೆಗ್ನೇಷಿಯಮ್, ವಿಟಮಿನ್ ಸಿ ನಿಂದ ಸಮೃದ್ಧವಾಗಿದ್ದು, ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಇದರಲ್ಲಿದೆ. ಬೇಸಿಗೆಯಲ್ಲಿ ಹೆಚ್ಚು ತೆಂಗಿನ ನೀರು ಅಥವಾ ಎಳನೀರು ಸೇವನೆ ಮಾಡುವುದರಿಂದ ಇದು ದೇಹವನ್ನು ಹೈಡ್ರೇಟ್ ಆಗಿರಿಸಲು ಸಹಾಯ ಮಾಡುತ್ತದೆ. ಚರ್ಮದ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಯೌವನದಿಂದ ಕಾಣುವಂತೆ ಮಾಡುತ್ತದೆ. ಜೀರ್ಣಕ್ರಿಯೆ ಸುಧಾರಿಸಿ, ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯಕವಾಗಿದೆ. ಅದಲ್ಲದೆ ಹೃದಯದ ಆರೋಗ್ಯ ಹಾಗೂ ತೂಕ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಬೇಸಿಗೆಯಲ್ಲಿ ಕಬ್ಬಿನ ಜ್ಯೂಸ್ ಗೆ ಎಲ್ಲಿಲ್ಲದ ಬೇಡಿಕೆ, ಇದು ಮೆಗ್ನೀಸಿಯಮ್, ಮ್ಯಾಂಗನೀಸ್, ಸತು, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸೇರಿದಂತೆ ವಿವಿಧ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ನಿಯಮಿತ ಸೇವನೆಯೂ ದೇಹಕ್ಕೆ ಬೇಕಾಗುವ ತ್ವರಿತ ಶಕ್ತಿಯನ್ನು ಒದಗಿಸುತ್ತದೆ. ನಿಯಮಿತ ಸೇವನೆಯೂ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಅದರೊಂದಿಗೆ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದಲ್ಲದೇ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಯಕೃತ್ತನ್ನು ಸೋಂಕು ಬರದಂತೆ ತಡೆಯುತ್ತದೆ.

ಇದನ್ನೂ ಓದಿ
Image
ಒಮ್ಮೆ ಹೃದಯಾಘಾತವಾಗಿ ಪ್ರಾಣ ಉಳಿಸಿಕೊಂಡವರು ಈ ಹೂವಿನ ಚಹಾ ಕುಡಿಯಲೇಬೇಕು
Image
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?
Image
ಬೇರೆಯವರ ಚಪ್ಪಲಿ, ಶೂ ಬಳಸುವ ಮುನ್ನ ಈ ರೀತಿ ಮಾಡಿ
Image
ಗೋವುಗಳು ಪ್ಲಾಸ್ಟಿಕ್​​ ತಿಂದು ಸಾಯುವುದಕ್ಕೆ ಕಾರಣವೇನು?

ಇದನ್ನೂ ಓದಿ: ಈ ಹೂವಿನಿಂದ ತಯಾರಾಗುವ ಬ್ಲೂ ಟೀ ಕುಡಿದರೆ ಹೃದಯ ಚೆನ್ನಾಗಿರುತ್ತೆ

ಕಬ್ಬಿನ ಜ್ಯೂಸ್ ಹಾಗೂ ಎಳ ನೀರಿನಲ್ಲಿ ಯಾವುದು ಉತ್ತಮ?

ಬೇಸಿಗೆಯಲ್ಲಿ ಎಲ್ಲರೂ ಕಬ್ಬಿನ ಜ್ಯೂಸ್ ಹಾಗೂ ಎಳ ನೀರಿನಲ್ಲಿ ಸೇವಿಸುತ್ತಾರೆ. ಆದರೆ ಕಬ್ಬಿನ ಜ್ಯೂಸ್ ಗಿಂತ ಎಳನೀರು ಉತ್ತಮ ಆರೋಗ್ಯಕ್ಕೆ ಎನ್ನಬಹುದು. ಹೌದು, ಇದು ದೇಹವನ್ನು ಹೈಡ್ರೇಟ್ ಆಗಿರಿಸಲು ಸಹಾಯಕವಾಗಿದೆ. ಆದರೆ ಈ ಕಬ್ಬಿನ ಜ್ಯೂಸ್ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಆಗಿದ್ದರೂ ಇದರಲ್ಲಿ ಹೆಚ್ಚಿನ ಮಟ್ಟದಲ್ಲಿ ಕ್ಯಾಲೋರಿ ಹಾಗೂ ಸಕ್ಕರೆ ಅಂಶವಿದೆ. ಇದನ್ನು ಹೆಚ್ಚು ಸೇವಿಸುವುದರಿಂದ ಬೊಜ್ಜಿನ ಸಮಸ್ಯೆಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಅದಲ್ಲದೇ ಮಧುಮೇಹ ಸಮಸ್ಯೆಯಿರುವವರು ಈ ಕಬ್ಬಿನ ಜ್ಯೂಸ್ ಸೇವನೆಯಿಂದ ದೂರವಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಎನ್ನಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ